ಜೆಎನ್ ಯು ಕ್ಯಾಂಪಸ್ ಘರ್ಷಣೆ: ಮೋದಿ- ಶಾ ಗೂಂಡಾಗಳ ಕೃತ್ಯ ಎಂದ ಪ್ರಿಯಾಂಕ ಗಾಂಧಿ
Team Udayavani, Jan 6, 2020, 9:24 AM IST
ಹೊಸದಿಲ್ಲಿ: ಇಲ್ಲಿನ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ರವಿವಾರ ರಾತ್ರಿ ನಡೆದ ಘರ್ಷಣೆಗೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೂಂಡಾಗಳು ಕಾರಣ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ರವಿವಾರ ರಾತ್ರಿ ಜೆಎನ್ ಯು ಕ್ಯಾಂಪಸ್ ಒಳಗೆ ನುಗ್ಗಿದ್ದ ಹಲವು ಮುಸುಕುಧಾರಿಗಳು ವಿದ್ಯಾರ್ಥಿಗಳು, ವಿದ್ಯಾರ್ಥಿ ಸಂಘದ ಅಧ್ಯಕ್ಷ ಮತ್ತು ಉಪನ್ಯಾಸಕರ ಮೇಲೆ ಹಲ್ಲೆ ನಡೆಸಲಾಗಿದೆ. ಈ ವೇಳೆಗೆ ಕ್ಯಾಂಪಸ್ ನ ಆಸ್ತಿ ಪಾಸ್ತಿ ಹಾನಿ ಮಾಡಲಾಗಿದೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮೋದಿ ಮತ್ತು ಅಮಿತ್ ಶಾ ವಿದ್ಯಾರ್ಥಿಗಳಲ್ಲಿ ಭಯ ಮೂಡಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಪ್ರಿಯಾಂಕ ಗಾಂಧಿ ಇಂದು ಮುಂಜಾನೆ ಆಸ್ಪತ್ರೆಗೆ ಭೆಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ದಿಲ್ಲಿಯ ಜೆಎನ್ ಯುವಿನಲ್ಲಿ ನಡೆದ ಈ ಘಟನೆಯನ್ನು ಖಂಡಿಸುತ್ತಿರುವ ಕಾಂಗ್ರೆಸ್ ನಾಯಕರು, ಪೊಲೀಸರು ಸರಿಯಾದ ಭದ್ರತೆ ನೀಡುವುದರಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಎಬಿವಿಪಿ ಕಾರ್ಯಕರ್ತರು ಈ ಹಲ್ಲೆ ಮಾಡಿ ಪರಾರಿಯಾಗಿದ್ದಾರೆಂದು ಜೆಎನ್ ಯು ವಿದ್ಯಾರ್ಥಿ ಸಂಘ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ