ಹತ್ತು ಕಾರ್ಮಿಕ ಸಂಘಟನೆಗಳಿಂದ ಬುಧವಾರ ಭಾರತ್ ಬಂದ್ ; ಬ್ಯಾಂಕಿಂಗ್ ಸೇವೆ ವ್ಯತ್ಯಯ ಸಾಧ್ಯತೆ
Team Udayavani, Jan 6, 2020, 7:35 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ನವದೆಹಲಿ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ಕೆಲವೊಂದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುಮಾರು ಹತ್ತು ಕಾರ್ಮಿಕ ಸಂಘಟನೆಗಳು ಜನವರಿ 08ರ ಬುಧವಾರದಂದು ಕರೆ ನೀಡಿರುವ ಭಾರತ್ ಬಂದ್ ನಿಂದಾಗಿ ದೇಶಾದ್ಯಂತ ಬ್ಯಾಂಕಿಂಗ್ ಸೇವೆಗಳು ವ್ಯತ್ಯಯಗೊಳ್ಳುವ ನಿರೀಕ್ಷೆ ಇದೆ.
ಹೆಚ್ಚಿನ ಬ್ಯಾಂಕ್ ನೌಕರರು ಈ ಮುಷ್ಕರದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹತ್ತಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಎಡಪಕ್ಷಗಳ ಬೆಂಬಲದೊಂದಿಗೆ ಬುಧವಾರದಂದು ಭಾರತ ಬಂದ್ ಗೆ ಕರೆ ನೀಡಿವೆ. ಆ ದಿನದಂದು ಬ್ಯಾಂಕ್ ವ್ಯವಹಾರಗಳು ಮಾತ್ರವಲ್ಲದೇ ಎಟಿಎಂ ವ್ಯವಹಾರಗಳಿಗೂ ಮುಷ್ಕರದ ಬಿಸಿ ತಟ್ಟುವ ಸಾಧ್ಯತೆಗಳು ಇದೆ ಎನ್ನಲಾಗುತ್ತಿದೆ. ಆದರೆ ಇದೀಗ ನೆಫ್ಟ್ ಮಾದರಿಯ ಆನ್ ಲೈನ್ ಹಣ ವರ್ಗಾವಣೆ ದಿನದ 24 ಗಂಟೆಗಳಿಗೆ ವಿಸ್ತರಣೆಗೊಂಡಿರುವುದರಿಂದ ಈ ಮುಷ್ಕರದಿಂದ ನೆಟ್ ಬ್ಯಾಂಕಿಂಗ್ ಗ್ರಾಹಕರಿಗೆ ಅಷ್ಟಾಗಿ ತೊಂದರೆಯಾಗಲಾರದು.
ಜನವರಿ 08ರಂದು ತಾನು ಕರೆ ನೀಡಿರುವ ಭಾರತ್ ಬಂದ್ ಮತ್ತು ಪ್ರತಿಭಟನೆಗಳಲ್ಲಿ ಸುಮಾರು 25 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯನ್ನು ಮುಷ್ಕರಕ್ಕೆ ಕರೆನೀಡಿರುವ ಕಾರ್ಮಿಕ ಸಂಘಟನೆಗಳು ಇರಿಸಿಕೊಂಡಿವೆ. ಐ.ಎನ್.ಟಿ.ಯು.ಸಿ., ಎ.ಐ.ಟಿ.ಯು.ಸಿ., ಹೆಚ್.ಎಂ.ಎಸ್., ಸಿ.ಐ.ಟಿ.ಯು., ಎ.ಐ.ಯು.ಟಿ.ಯು.ಸಿ., ಟಿ.ಯು.ಸಿ.ಸಿ., ಸೇವಾ, ಎ.ಐ.ಸಿ.ಸಿ.ಟಿ.ಯು., ಎಲ್.ಪಿ.ಎಫ್., ಯು.ಟಿ.ಯು.ಸಿ. ಮತ್ತು ಇನ್ನಿತರ ಸಹ ಕಾರ್ಮಿಕ ಸಂಘಟನೆಗಳು ಈ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.
ಬುಧವಾರದ ರಾಷ್ಟ್ರವ್ಯಾಪಿ ಮುಷ್ಕರವು ತನ್ನ ಬ್ಯಾಂಕಿಂಗ್ ವ್ಯವಹಾರದ ಮೇಲೆ ಅಷ್ಟೇನೂ ಪರಿಣಾಮ ಬೀರದು ಎಂದು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಮತ್ತು ಗ್ರಾಹಕರಿಗೆ ಅನನುಕೂಲವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬ್ಯಾಂಕ್ ತನ್ನ ಪ್ರಕಟನೆಯಲ್ಲಿ ತಿಳಿಸಿದೆ. ಆದರೆ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೇಲೆ ಈ ಮುಷ್ಕರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬ್ಯಾಂಕಿನ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನುಳಿದಂತೆ ಈ ಮುಷ್ಕರದಿಂದಾಗಿ ಸಾರಿಗೆ, ಸರಕು ಸಾಗಾಟ ಹಾಗೂ ಇನ್ನಿತರ ಸೇವೆಗಳಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ