ಇರಾನ್‌ – ಅಮೆರಿಕ ಸಂಘರ್ಷ : ಚಿನ್ನ ಮಾರುಕಟ್ಟೆ ದುಬಾರಿ, ಸಂಕಷ್ಟಗಳ ಸರಣಿ ಆರಂಭ ?


Team Udayavani, Jan 6, 2020, 10:59 PM IST

Iran-War-6-1

ಇರಾನ್‌ ಹಾಗೂ ಅಮೆರಿಕ ನಡುವೆ ತಲೆದೋರಿರುವ ಯುದ್ಧದ ಪರಿಸ್ಥಿತಿಯಿಂದ ಭಾರತಕ್ಕೆ ಸಂಕಷ್ಟ ಬಂದೊದಗಿದೆ. ತೈಲ ಬೆಲೆಯೂ ಏರಿಕೆಯಾಗಲಾರಂಭಿಸಿದೆ. ಸದ್ಯ ಚಿನ್ನದ ಬೆಲೆ ಗಗನಕ್ಕೇರಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ಚಿನ್ನ ಮಾರುಕಟ್ಟೆ ದಿನೇ ದಿನೆ ದುಬಾರಿಯಾಗುತ್ತಾ ಸಾಗಿದೆ. 24 ಕ್ಯಾರೆಟ್‌ ಚಿನ್ನದ ದರದಲ್ಲಿ ಸೋಮವಾರ 780 ರೂ. ಏರಿಕೆಯಾಗಿದೆ. ಮತ್ತೂಂದೆಡೆ ರೂಪಾಯಿ ಮೌಲ್ಯವೂ ಕುಸಿಯುತ್ತಿದ್ದು, ಬೆಲೆ ಏರಿಕೆ ಬಿಸಿ ಹೆಚ್ಚಾಗತೊಡಗಿದೆ.

ಸೋಮವಾರ ಎಷ್ಟಾಯಿತು?
24 ಕ್ಯಾರೆಟ್‌ ಚಿನ್ನದ ದರದಲ್ಲಿ 780 ರೂ. ಏರಿಕೆಯಾಗಿದೆ. ಈ ಮೂಲಕ ಬೆಳ್ಳಿ ದರ 50 ಸಾವಿರ ಗಡಿ ದಾಟಿದೆ. ಬೆಂಗಳೂರಲ್ಲಿ 10 ಗ್ರಾಂ., 24 ಕ್ಯಾರೆಟ್‌ ಚಿನ್ನದ ಇಂದಿನ ದರ 42,230 ರೂ. ನಿಗದಿಯಾಗಿದೆ. ಮುಂಬಯಿ ಮಾರುಕಟ್ಟೆಯಲ್ಲಿ 10 ಗ್ರಾಂ. 24 ಕ್ಯಾರೆಟ್‌ ಚಿನ್ನದ ಇಂದಿನ ದರ 42,135 ರೂ.ಗೆ ಏರಿದೆ. ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 42,110 ರೂ.ಗೆ ವಹಿವಾಟು ನಡೆದಿದೆ.

ತೈಲ ಬೆಲೆ ಏರಿಕೆ
ಇರಾನ್‌ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್‌ ಏರಿಕೆಯಾಗಿದೆ. ಬ್ರೆಂಟ್‌ ಕಚ್ಚಾ ತೈಲದ ಬೆಲೆ ಶೇ.4.39ರಷ್ಟು ಏರಿಕೆಯಾಗಿದ್ದು ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 69.16 ಡಾಲರ್‌ (ಅಂದಾಜು 4,900 ರೂ.) ತಲುಪಿದೆ. ಈ ಹಿಂದೆ ಒಂದು ಬ್ಯಾರೆಲ್‌ ಕಚ್ಚಾ ತೈಲದ ಬೆಲೆ 66.25 ಡಾಲರ್‌ (ಅಂದಾಜು 4,700 ರೂ.) ಇತ್ತು.

ಭಾರತಕ್ಕೆ ಭಾರೀ ಹೊಡೆತ
ಅಮೆರಿಕ ಮತ್ತು ಇರಾನ್‌ ಸಂಘರ್ಷದಿಂದಾಗಿ ಭಾರತ ಭಾರೀ ಸಮಸ್ಯೆ ಎದುರಿಸಲಿದೆ. ಈಗಾಗಲೇ ಬ್ರೆಂಟ್‌ ಕಚ್ಚಾ ತೈಲದ ಬೆಲೆ ಡಾಲರ್‌ಗೆ ಶೇ 4.5ರಷ್ಟು ಏರಿಕೆಯಾಗಿ, 68.23 ಡಾಲರ್‌ಗೆ (4,895 ರೂ.) ತಲುಪಿದೆ. ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಳವಾಗಿ, ಅವುಗಳ ಬೆಲೆಯೂ ಏರಿಕೆಯಾಗಿದೆ.

ಅಪಾಯ ಇದ್ದೇ ಇದೆ
ಕೊಲ್ಲಿಯಲ್ಲಿ ಸಂಘರ್ಷ ಶಮನವಾಗದೇ ಇದ್ದರೆ ಎರಡನೇ ಹಂತದ ಪರಿಣಾಮಗಳನ್ನು ಎದುರಿಸಲು ಭಾರತ ಸಜ್ಜಾಗಬೇಕಾಗುತ್ತದೆ. ತೈಲ ಆಮದಿನ ಮೇಲೆ ದೇಶವು ಮಾಡಬೇಕಾದ ವೆಚ್ಚ ದುಪ್ಪಟ್ಟಾಗಲಿದೆ. ಅಗತ್ಯ ಇರುವ ತೈಲದ ಶೇ. 80ಕ್ಕಿಂತ ಹೆಚ್ಚು ಭಾಗವನ್ನು ಭಾರತವು ಆಮದು ಮಾಡಿಕೊಳ್ಳುತ್ತಿರುವುದರಿಂದ ಸಮಸ್ಯೆಯ ತೀವ್ರತೆ ಹೆಚ್ಚಾಗಲಿದೆ.

ಮುಂಗಡ ಪತ್ರಕ್ಕೆ ಹಿನ್ನಡೆ ಸಾಧ್ಯತೆ
ಕೇಂದ್ರ ಸರಕಾರ ತನ್ನ ವಾರ್ಷಿಕ ಮುಂಗಡ ಪತ್ರವನ್ನು ತಯಾರಿಸುವ ಸಂದರ್ಭದಲ್ಲಿಯೇ ಈ ಬಿಕ್ಕಟ್ಟು ಸೃಷ್ಠಿಯಾಗಿದೆ. ಹಾಗಾಗಿ, ದೊಡ್ಡ ಮಟ್ಟದ ತೆರಿಗೆ ವಿನಾಯಿತಿ, ಅರ್ಥ ವ್ಯವಸ್ಥೆಯ ಚೇತರಿಕೆಗೆ ಕೈಗೊಳ್ಳಬಹುದಾದ ಕ್ರಮಗಳನ್ನು ನಾವು ನಿರೀಕ್ಷೆ ಮಾಡುವಂತಿಲ್ಲ. ಆಕರ್ಷಕ ವಿನಾಯಿತಿಗಳು ಈ ಬಜೆಟ್‌ನಲ್ಲಿ ಕಂಡುಬರುವುದು ಕಷ್ಟ ಎಂದು ಹೇಳಲಾಗುತ್ತಿದೆ. ತೈಲದ ಮೇಲೆ ಮಾಡುತ್ತಿರುವ ವೆಚ್ಚ ಹೆಚ್ಚುತ್ತಿರುವುದರ ಬಗ್ಗೆ ಆರ್‌ಬಿಐ ಈಗಾಗಲೇ ಕಳವಳ ವ್ಯಕ್ತಪಡಿಸಿದೆ.

ಇಂಧನ ಹೆಚ್ಚು ಅಪಾಯ ಯಾಕೆ?
ಸಂಘರ್ಷ ಮುಂದುವರಿದರೆ ಇರಾನ್‌ನಿಂದ ತೈಲ ಪೂರೈಕೆಗೆ ತೊಡಕಾಗಬಹುದು. ಅಮೆರಿಕದಿಂದ ಭಾರತಕ್ಕೆ ಜಲ ಮಾರ್ಗದ ಮೂಲಕ ಆಗುವ ತೈಲ ಪೊರೈಕೆಯನ್ನು ಇರಾನ್‌ ಗುರಿ ಮಾಡಿಕೊಳ್ಳುವ ಅಪಾಯವೂ ಇದೆ. ಈಗಾಗಲೇ ಇರಾನ್‌ನಿಂದ ತೈಲ ಖರೀದಿ ಮಾಡಬಾರದು ಎಂದು ಭಾರತದ ಮೇಲೆ ಅಮೆರಿಕ ಒತ್ತಡ ಹೇರುತ್ತಲೇ ಬಂದಿದೆ.

ಇರಾನ್‌ ನಡೆ ಕುತೂಹಲ
ಹತ್ಯೆ ಬಳಿಕ ಬ್ಯಾರೆಲ್‌ ಕಚ್ಚಾ ತೈಲದ ಬೆಲೆ ಶೇ. 4ರಷ್ಟು ಏರಿಕೆ ಆಗಿದೆ. ಅಮೆರಿಕಕ್ಕೆ ಪ್ರತೀಕಾರ ತೀರಿಸಬೇಕು ಎನ್ನುತ್ತಿರುವ ಇರಾನ್‌ ಮೇಲೆ ಕೆಲವು ಆಯ್ಕೆಗಳಿವೆ. ಹರ್ಮಜ್‌ ಜಲಸಂಧಿಯನ್ನು ಮುಚ್ಚುವುದು. ಪರ್ಷಿಯನ್‌ ರಾಷ್ಟ್ರಗಳಿಂದ ತೈಲ ಬರುವುದಕ್ಕೆ ಇರುವ ಏಕೈಕ ಸಮುದ್ರ ಮಾರ್ಗ ಇದು. ಎರಡು ವರ್ಷಗಳ ಹಿಂದೆ ಅಮೆರಿಕವು ಇರಾನ್‌ ಮೇಲೆ ಆರ್ಥಿಕ ದಿಗ್ಬಂಧನ ಹಾಕಿದಾಗ ಹೀಗೇ ಮಾಡಲಾಗಿತ್ತು.

ಇಂಧನ ಬೆಲೆ ಏರಿಕೆ; ಹಲವು ಸಮಸ್ಯೆಗೆ ಕಾರಣ
ಭಾರತಕ್ಕೆ ತೈಲ ಪೂರೈಸುವ ಪ್ರಮುಖ ದೇಶಗಳಲ್ಲಿ ಇರಾನ್‌ ಕೂಡ ಒಂದು. 2018-19ರಲ್ಲಿ ಇರಾನ್‌ನಿಂದ 2.3 ಕೋಟಿ ಟನ್‌ ತೈಲ ಆಮದಾಗಿದೆ. ಇದು, ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಹೆಚ್ಚು ಎಂಬುದು ಗಮನಾರ್ಹ. ಭಾರತಕ್ಕೆ ಇರಾಕ್‌ ಮತ್ತು ಸೌದಿ ಅರೇಬಿಯಾದ ಅತಿ ಹೆಚ್ಚು ತೈಲ ಪೂರೈಸುವ ದೇಶವಾಗಿದ್ದು, ಬಳಿಕದ ಸ್ಥಾನದಲ್ಲಿ ಇರಾನ್‌ ಇದೆ.

ಡಿಸೆಂಬರ್‌ 2ರ ಬಳಿಕ ಕಚ್ಚಾ ತೈಲದ ಬೆಲೆ ಶೇ. 14ರಷ್ಟು ಏರಿಕೆಯಾಗಿದೆ. ಹಾಗಾಗಿ, ಈಗಿನ ಪರಿಸ್ಥಿತಿಯೇ ಭಾರತದ ಬಜೆಟ್‌ ಲೆಕ್ಕಾಚಾರವನ್ನು ಏರುಪೇರಾಗಿಸಬಹುದು. ಸೌದಿಯ ಅರಾಮ್ಕೊ ಕಂಪನಿಯ ಮೇಲೆ ಕಳೆದ ಸೆಪ್ಟೆಂಬರ್‌ನಲ್ಲಿ ಡ್ರೋನ್‌ ದಾಳಿಯಾದಾಗ ಕಚ್ಚಾ ತೈಲ ಬೆಲೆ ಬ್ಯಾರಲ್‌ ಒಂದಕ್ಕೆ 71.95 ಡಾಲರ್‌ ಏರಿಕೆಯಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.