ತಾಲೂಕಿನಾದ್ಯಂತ ತೀವ್ರ ಚಳಿ, ವಿಳಂಬವಾಗಿ ಪ್ರಾರಂಭಗೊಂಡ ಚಳಿಗಾಲ

ಗೇರು, ಮಾವು, ಹಲಸು ಕೃಷಿಕರಿಗೆ ಹಿನ್ನಡೆ ,ಫ‌ಲ ಬಿಡುವ ಮರಗಳಲ್ಲಿ ಹೂವು ಇನ್ನೂ ಬಿಟ್ಟಿಲ್ಲ ,ಕೃಷಿಕರಲ್ಲಿ ಆತಂಕ

Team Udayavani, Jan 7, 2020, 5:29 AM IST

0601PALLI01B

ಕಾಂತಾವರ: ಒಂದೆರಡು ದಿನಗಳಿಂದ ಕಾರ್ಕಳ ತಾಲೂಕಿನಾದ್ಯಂತ ಚಳಿಯು ತೀವ್ರ ಗೊಂಡಿದೆ. ಈ ಬಾರಿ ಚಳಿ ಸುಮಾರು 2 ತಿಂಗಳು ವಿಳಂಬವಾಗಿ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ಫ‌ಲ ಬಿಡುವ ಮರಗಳಲ್ಲಿ ಹೂವು ಇನ್ನೂ ಬಿಟ್ಟಿಲ್ಲ. ಸಾಮಾನ್ಯವಾಗಿ ಅಕ್ಟೋಬರ್‌ ನವೆಂಬರ್‌ ತಿಂಗಳು ಕಳೆದ ಅನಂತರ ಚಳಿಗಾಲ ಪ್ರಾರಂಭವಾಗುತ್ತದೆ. ಆದರೆ ಈ ಬಾರಿ ಜನವರಿ ಪ್ರಾರಂಭದಲ್ಲಿ ಚಳಿ ಪ್ರಾರಂಭವಾಗಿದ್ದು, ಕೃಷಿಕರಲ್ಲಿ ಆತಂಕ ಮನೆ ಮಾಡಿದೆ.

ಗ್ರಾಮೀಣ ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಿರುವುದರಿಂದ ನಗರ ಪ್ರದೇಶಗಳಿಗಿಂತ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹೆಚ್ಚಿನ ನಷ್ಟ ಸಂಭವಿಸಬಹುದಾಗಿದೆ.

ಚಳಿಗಾಲ ನವೆಂಬರ್‌ ತಿಂಗಳಿನಿಂದ ಪ್ರಾರಂಭಗೊಂಡಿದ್ದಲ್ಲಿ ಈಗಾಗಲೇ ಮಾವು ಗೇರು ಹಲಸು ಹೂ ಬಿಡಬೇಕಾಗಿತ್ತು. ಆದರೆ ಚಳಿಗಾಲ ವಿಳಂಬವಾಗಿರುವುದರಿಂದ ಗೇರು, ಮಾವಿನ ಮರಗಳು ಬರಿದಾಗಿವೆ.

ಮಳೆಗಾಲ ಸಹ ಸುಮಾರು ಒಂದು ತಿಂಗಳು ವಿಳಂಬವಾಗಿ ಜುಲೈ ತಿಂಗಳಲ್ಲಿ ಪ್ರಾರಂಭವಾಗಿ ಡಿಸೆಂಬರ್‌ ಅಂತ್ಯದವರೆಗೂ ತಾಲೂಕಿನ ವಿವಿಧೆಡೆ ಮಳೆ ಸುರಿದ ಪರಿಣಾಮ ಚಳಿ ಇಲ್ಲದಂತಾಗಿತ್ತು.

ಪ್ರಾಕೃತಿಕ ಅಸಮತೋಲನದಿಂದಾಗಿ ಮುಂದಿನ ಮಳೆಗಾಲವು ವಿಳಂಬವಾಗುವ ಬಗ್ಗೆ ರೈತರಲ್ಲಿ ಆತಂಕ ಮೂಡಿದೆ. ಕೆಲವು ರೈತರು ಗೇರು, ಮಾವು ಬೆಳೆಯನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು, ಈ ಬಾರಿ ಚಳಿ ವಿಳಂಬವಾದ ಪರಿಣಾಮ ಫ‌ಸಲು ಇಲ್ಲದಂತಾಗಿದೆ. ಈಗಷ್ಟೇ ಚಳಿ ಪ್ರಾರಂಭವಾಗಿರುವುದರಿಂದ ಫ‌ಸಲು ಬಿಟ್ಟರೂ ಸಹ ಕೊಯ್ಲಿಗೆ ಬರುವ ಸಂದರ್ಭ ಮಳೆ ಬರುವ ಆತಂಕ ಕೃಷಿಕರನ್ನು ಕಾಡುತ್ತಿದೆ.

ನೆಡುತೋಪು ವಹಿಸಿಕೊಂಡವರಿಗೆ ಸಂಕಷ್ಟ
ಅರಣ್ಯ, ಪಂಚಾಯತ್‌, ಗೇರು ಅಬಿವೃದ್ಧಿ ನಿಗಮದ ಹಲವಾರು ಗೇರು ನೆಡುತೋಪುಗಳು ಕಾರ್ಕಳ ತಾಲೂಕಿನಾದ್ಯಂತ ಇದ್ದು, ಇದರ ಗುತ್ತಿಗೆಯ ಟೆಂಡರ್‌ ಪ್ರಕ್ರಿಯೆಯು ಅಕ್ಟೋಬರ್‌ ನವೆಂಬರ್‌ ತಿಂಗಳಿನಲ್ಲಿಯೇ ನಡೆಯುತ್ತದೆ. ಟೆಂಡರಲ್ಲಿ ನೆಡುತೋಪು ವಹಿಸಿಕೊಂಡವರು ಬೆಳೆಯಿಲ್ಲದೆ ನಷ್ಟ ಅನುಭವಿಸುವಂತಾಗಿದೆ. ಫ‌ಸಲು ವಿಳಂಬವಾಗಿ ಬರುವುದರಿಂದ ಗೇರು ಮಳೆಯಿಂದ ಹಾನಿಗೊಂಡರೆ ಮಾವು ಹುಳ ಬಾಧೆಗೆ ತುತ್ತಾಗುತ್ತದೆ.

ಹಲಸು ಬೆಳೆಯುವ ರೈತರು ಹಲಸಿನಿಂದ ಹಲವಾರು ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಹಲಸು ಬೆಳೆ ಇಲ್ಲದೆ ಇರುವುದರಿಂದ ಉತ್ಪನ್ನಗಳನ್ನೇ ಜೀವನ ನಡೆಸುವವರು ತೀವ್ರ ಸಂಕಷ್ಟಕ್ಕೊಳಗಾಗಲಿದ್ದಾರೆ.

ಸಂಕಷ್ಟ
ಮಳೆಗಾಲ ವಿಳಂಬವಾಗಿ ಪ್ರಾರಂಭವಾದ ಕಾರಣ ಚಳಿಗಾಲ ವಿಳಂಬವಾಗಿದೆ. ಈ ರೀತಿಯಾದಲ್ಲಿ ಪ್ರಾಕೃತಿಕ ಅಸಮತೋಲನ ಉಂಟಾಗಿ ರೈತರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ ಎನ್ನುತ್ತಾರೆ ಹಿಂದೆ ನೆಡುತೋಪು ವಹಿಸಿಕೊಳ್ಳುತ್ತಿದ್ದ ಕಾಂತಾವರದ ಜಯ ಎಸ್‌. ಕೋಟ್ಯಾನ್‌.

ಹಾನಿಯಾಗುವ ಸಂಭವ
ತಾಲೂಕಿನಾದ್ಯಂತ ಸುಮಾರು 1,600 ಹೆಕ್ಟೇರ್‌ ಭೂ ಪ್ರದೇಶದಲ್ಲಿ ಗೇರು ಬೆಳೆಯಲಾಗಿದೆ. ಸುಮಾರು 250 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆ ಬೆಳೆಸಲಾಗುತ್ತಿದೆ.ತಾಲೂಕಿನಾದ್ಯಂತ ಬಹುತೇಕ ರೈತರ ಕೃಷಿ ಭೂಮಿಯಲ್ಲಿ ಹಲಸು ಬೆಳೆಯಲಾಗಿದೆ.ತಾಲೂಕಿನಲ್ಲಿ ವಿಳಂಬವಾಗಿ ಮಳೆ ಪ್ರಾರಂಭವಾಗಿ ಡಿಸೆಂಬರ್‌ ವರೆಗೂ ಮಳೆ ಬಿದ್ದ ಪರಿಣಾಮ ತೋಟಗಾರಿಕೆ ಬೆಳೆಗಳಲ್ಲಿ ಹೂ ಬಿಡುವುದು ವಿಳಂಬವಾಗಿದೆ. ಈಗಷ್ಟೇ ಹೂ ಬಿಡಲು ಪ್ರಾರಂಭವಾಗಿದ್ದು ಬೇಸಗೆಯಲ್ಲಿ ಮಳೆ ಬಂದಲ್ಲಿ ಗೇರು ಬೆಳೆಗೆ ಹಾನಿಯಾಗುವ ಸಂಭವವಿದೆ.
-ಶ್ರೀನಿವಾಸ್‌, ಸಹಾಯಕ ನಿರ್ದೇಶಕರು,
ತೋಟಗಾರಿಕೆ ಇಲಾಖೆ ಕಾರ್ಕಳ

ಕೈ ಸುಟ್ಟುಕೊಳ್ಳುವಂತಾಗಿದೆ
ಈ ಬಾರಿ ಚಳಿ ವಿಳಂಬವಾಗಿದ್ದು, ಹೂವು ಬಿಡುವಾಗ ವಿಳಂಬವಾಗಿ ಗೇರು ಫ‌ಸಲು ಇಲ್ಲದಂತಾಗಿದೆ. ಟೆಂಡರ್‌ ಮೂಲಕ ಪಡೆದ ಗೇರು ತೋಪಿನಿಂದಾಗಿ ಕೈ ಸುಟ್ಟುಕೊಳ್ಳುವಂತಾಗಿದೆ.
-ಜಗದೀಶ್‌ ಕೆ. ಪೂಜಾರಿ,
ನೆಡುತೋಪು ಗುತ್ತಿಗೆದಾರರು

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.