ಮಕ್ಕಳ ಸಾವು : ಆರೋಗ್ಯ ವ್ಯವಸ್ಥೆಯ ವೈಫ‌ಲ್ಯ


Team Udayavani, Jan 7, 2020, 7:33 AM IST

Kota-hospital-5-1

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಒಂದಿಲ್ಲೊಂದು ರಾಜ್ಯದಲ್ಲಿ ಮಕ್ಕಳ ಸಾವು ಸಂಭವಿಸುತ್ತಿದ್ದರೂ ನಮ್ಮ ವ್ಯವಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ದುರದೃಷ್ಟಕರ.

ರಾಜಸ್ಥಾನದ ಕೋಟಾದಲ್ಲಿರುವ ಜೆ.ಕೆ.ಲೋನ್‌ ಸರಕಾರಿ ಆಸ್ಪತ್ರೆಯಲ್ಲಿ ನೂರಕ್ಕೂ ಹೆಚ್ಚಿನ ನವಜಾತ ಶಿಶುಗಳು ತಿಂಗಳೊಂದರಲ್ಲೇ ಸಾವನ್ನಪ್ಪಿರುವುದು ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕೈಗನ್ನಡಿ ಹಿಡಿದಿದೆ. ಕೋಟಾದ ಬೆನ್ನಿಗೆ ಗುಜರಾತ್‌ನ ರಾಜ್‌ ಕೋಟ್‌ನಲ್ಲಿರುವ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಸಾರ್ವಜನಿಕ ಆಸ್ಪತ್ರೆಯಲ್ಲೂ ಡಿಸೆಂಬರ್‌ ತಿಂಗಳಲ್ಲಿ ನೂರಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಬಯಲಾಗಿದೆ.

ಕಳೆದ ವರ್ಷ ಬಿಹಾರದಲ್ಲಿ ಮಿದುಳು ಜ್ವರ ರೋಗಕ್ಕೆ 150ಕ್ಕೂ ಹೆಚ್ಚು ಮಕ್ಕಳು ಬಲಿಯಾಗಿದ್ದರು. 2017ರಲ್ಲಿ ಉತ್ತರ ಪ್ರದೇಶದ ಗೋರಖಪುರದಲ್ಲಿರುವ ಬಿ.ಆರ್‌.ಡಿ. ಆಸ್ಪತ್ರೆಯಲ್ಲಿ ಸುಮಾರು 70 ಮಕ್ಕಳು ಆಕ್ಸಿಜನ್‌ ಸಿಲಿಂಡರ್‌ ಕೊರತೆಯಿಂದಾಗಿ ಸಾವಿಗೀಡಾದದ್ದು ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ರಾಜಕೀಯ ಕಾರಣಕ್ಕಾಗಿ ಈ ಸಾವುಗಳನ್ನು ನೆಪವಾಗಿಟ್ಟುಕೊಂಡು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಸಾಕಷ್ಟು ವಾಗ್ಯುದ್ಧವೂ ನಡೆದಿತ್ತು. ಹೀಗೆ ಪ್ರತಿ ವರ್ಷ ಒಂದಿಲ್ಲೊಂದು ರಾಜ್ಯದಲ್ಲಿ ಮಕ್ಕಳ ಸಾವು ಸಂಭವಿಸುತ್ತಿದ್ದರೂ ನಮ್ಮ ವ್ಯವಸ್ಥೆ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ದುರದೃಷ್ಟಕರ.

ನಿಜಕ್ಕಾದರೆ ಗೋರಖಪುರದ ಪ್ರಕರಣವೇ ಆಳುವವರಿಗೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲೊಂದು ಎಚ್ಚರಿಕೆಯಾಗಬೇಕಿತ್ತು. ಆದರೆ ನಮ್ಮ ಆಳುವ ವ್ಯವಸ್ಥೆ ಎಚ್ಚೆತ್ತುಕೊಳ್ಳುವುದು ದುರಂತ ಸಂಭವಿಸಿದಾಗ ಮಾತ್ರ. ಕೋಟಾದ ಆಸ್ಪತ್ರೆಯೇ ಇದಕ್ಕೆ ಅತ್ಯುತ್ತಮ ಉದಾಹರಣೆ. ಈ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ವಾರ್ಡಿನಲ್ಲಿ ಕಿಟಿಕಿಗಳಿಗೆ ಬಾಗಿಲುಗಳೇ ಇಲ್ಲ. ಇದ್ದರೂ ಅವುಗಳಿಗೆ ಅಳವಡಿಸಿದ ಗಾಜು ಮುರಿದು ಹೋಗಿ ಶೀತ ಗಾಳಿ ಒಳ ಬರುತ್ತಿತ್ತು. 19 ವೆಂಟಿಲೇಟರ್‌ಗಳ ಪೈಕಿ 13 ವೆಂಟಿಲೇಟರ್‌, 111 ಇನ್‌ ಫ್ಯೂಶನ್‌ ಪಂಪ್‌ಗಳ ಪೈಕಿ 81 ಪಂಪ್‌, 38 ಓಕ್ಸಿಮೀಟರ್ ಪೈಕಿ 32 ಹಾಗೂ 28 ನೆಬುಲೈಸರ್ ಪೈಕಿ 22 ಕಾರ್ಯವೆಸಗುತ್ತಿರಲಿಲ್ಲ ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಆಸ್ಪತ್ರೆಯಲ್ಲಿ ಹಂದಿಗಳು, ನಾಯಿಗಳು ಹಾಯಾಗಿ ಅಡ್ಡಾಡುತ್ತಿದ್ದವು. ನರ್ಸ್‌ಗಳು, ವೈದ್ಯರು ಸಾಕಷ್ಟು ಸಂಖ್ಯೆಯಲ್ಲಿ ಇರಲಿಲ್ಲ. ಹೀಗೆ ಅವ್ಯವಸ್ಥೆಗಳ ಸರಮಾಲೆಯೇ ಅಲ್ಲಿತ್ತು. ಕೋಟಾದ ಆಸ್ಪತ್ರೆ ಎಂದಲ್ಲ ದೇಶದ ಬಹುತೇಕ ಸರಕಾರಿ ಆಸ್ಪತ್ರೆಗೆ ಹೋದರೂ ಈ ಚಿತ್ರಣವನ್ನು ಕಾಣಬಹುದು. ವೈದ್ಯಕೀಯ ಉಪಕರಣಗಳನ್ನು ನಿರ್ವಹಿಸುವಲ್ಲಿ ನಮ್ಮದು ಸಾರ್ವತ್ರಿಕ ಕಳಪೆ ದಾಖಲೆ. ತುರ್ತು ಸಂದರ್ಭದಲ್ಲಿ ಯಾವ ಉಪಕರಣವೂ ಸರಿಯಿರುವುದಿಲ್ಲ. ಯಾವ ಆಸ್ಪತ್ರೆಯೂ ನಿಗದಿತ ಪ್ರಮಾಣದ ವೈದ್ಯರನ್ನಾಗಲಿ, ಅರೆ ವೈದ್ಯಕೀಯ ಸಿಬಂದಿಯನ್ನಾಗಲಿ ಹೊಂದಿರುವುದಿಲ್ಲ. ವೈದ್ಯರೇ ನರ್ಸ್‌ಗಳು ಮಾಡಬೇಕಾಗಿರುವ ಕೆಲಸಗಳನ್ನು ಮಾಡುವ ಸ್ಥಿತಿ ಅನೇಕ ಆಸ್ಪತ್ರೆಗಳಲ್ಲಿದೆ.

ಇಂಥ ದುರಂತ ಸಂಭವಿಸಿದಾಗಲೆಲ್ಲ ಹೇಳಿಕೆಗಳನ್ನು ನೀಡುವುದು, ಮೃತ ಮಕ್ಕಳ ಹೆತ್ತವರನ್ನು ಸಂತೈಸುವುದು ಅಥವಾ ಪರಸ್ಪರ ಕೆಸರು ಎರಚುವುದರಿಂದ ಸಮಸ್ಯೆ ಪರಿಹಾರವಾಗುವುದಿಲ್ಲ. ಒಟ್ಟಾರೆ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಬೇಕಾದ ಅಗತ್ಯವನ್ನು ಈ ದುರಂತಗಳು ಸಾರುತ್ತಿವೆ. ಆರೋಗ್ಯ ಆಯಾಯ ರಾಜ್ಯಗಳ ವ್ಯಾಪ್ತಿಗೆ ಒಳಪಡುವ ವಿಚಾರವಾದರೂ ಕೇಂದ್ರವೂ ತನ್ನ ಜವಾಬ್ದಾರಿಯಿಂದ ಜಾರಿಕೊಳ್ಳುವಂತಿಲ್ಲ. ಮುಖ್ಯವಾಗಿ ಆರೋಗ್ಯ ಕ್ಷೇತ್ರಕ್ಕೆ ನೀಡುವ ಅನುದಾನದ ಮೊತ್ತವನ್ನು ಹೆಚ್ಚಿಸುವ ಮೂಲಕ ಸರಕಾರಿ ಆಸ್ಪತ್ರೆಗಳಿಗೆ ಕನಿಷ್ಠ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರಸ್ತುತ ಜಿಡಿಪಿಯ ಶೇ. 1.1 ಮೊತ್ತ ವನ್ನು ಮಾತ್ರ ನಾವು ಆರೋಗ್ಯ ಕ್ಷೇತ್ರಕ್ಕಾಗಿ ವಿನಿಯೋಗಿಸುತ್ತಿದ್ದೇವೆ.

ಎಲ್ಲರೂ ಆರೋಗ್ಯವಂತರಾಗಿರಬೇಕು, ಆರೋಗ್ಯವಂತ ಪ್ರಜೆಗಳೇ ದೇಶದ ಸಂಪತ್ತು ಎಂದೆಲ್ಲ ಹೇಳಿದರೆ ಸಾಲದು. ಆರೋಗ್ಯವನ್ನು ಪಡೆದುಕೊಳ್ಳುವ ಸೌಲಭ್ಯಗಳು ಇರಬೇಕು. ಅದು ಇಲ್ಲದಿದ್ದರೆ ಆಯುಷ್ಮಾನ್‌ ಭಾರತ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನದಂಥ ಕಾರ್ಯಕ್ರಮಗಳಿಗೆ ಅರ್ಥವೇ ಇಲ್ಲ.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.