ಶಿವಮೊಗ್ಗ ಎಸಿ ಪತ್ನಿ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್: ಫೋನ್ ಕಾಲ್ ನಿಂದ ಬಯಲಾಯ್ತು ರಹಸ್ಯ
Team Udayavani, Jan 7, 2020, 11:17 AM IST
ಶಿವಮೊಗ್ಗ: ಇಲ್ಲಿನ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಆಕೆ ಕೆಲಸ ನಿರ್ವಹಿಸುತ್ತಿದ್ದ ಶಾಲಾ ಮುಖ್ಯಶಿಕ್ಷಕಿಯ ಮೇಲೆ ಅನುಮಾನ ವ್ಯಕ್ತವಾಗಿದೆ.
ವಲಯ ಉಪವಿಭಾಗಾಧಿಕಾರಿ ಪ್ರಕಾಶ್ ಅವರ ಪತ್ನಿ ಸುಮಾ (45) ಅವರು ಇಲ್ಲಿನ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಡಿಸೆಂಬರ್ 24ರಂದು ಆತ್ಮಹತ್ಯೆಗೆ ಶರಣಾಗಿದ್ದರು.
ಈ ಹಿಂದೆ ಮಕ್ಕಳಾಗಿಲ್ಲ ಎಂದು ಮನನೊಂದು ಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಆದರೆ ಸದ್ಯ ಪೊಲೀಸ್ ತನಿಖೆಯಲ್ಲಿ ಮತ್ತಷ್ಟು ವಿಚಾರಗಳು ಬಯಲಾಗಿದ್ದು, ಸುಮಾ ಕೆಲಸ ಮಾಡುತ್ತಿದ್ದ ಶಾಲೆಯ ಮುಖ್ಯಶಿಕ್ಷಕಿಯ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಸುಮಾ ಅವರು ಇತ್ತೀಚೆಗಷ್ಟೇ ಇಲ್ಲಿನ ಸರ್ಕಾರಿ ಬಾಲಕಿಯರ ಶಾಲೆಗೆ ವರ್ಗವಾಗಿ ಬಂದಿದ್ದರು. ಶಾಲಾ ಮುಖ್ಯಶಿಕ್ಷಕಿಯವರು ಸುಮಾಗೆ ಇಲ್ಲ- ಸಲ್ಲದ ಕೆಲಸ ಹೇಳಿ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಮನನೊಂದು ಸುಮಾ ನೇಣಿಗೆ ಶರಣಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಖ್ಯ ಶಿಕ್ಷಕಿಯ ಮಾನಸಿಕ ಕಿರುಕುಳದ ವಿಷಯವನ್ನು ಸುಮಾ ಅವರು ಪತಿ ಎಸಿ ಪ್ರಕಾಶ್ ಅವರ ಗಮನಕ್ಕೆ ಸಹ ತಂದಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಸುಮಾ ಅವರು ‘ಕೆಜಿಎಸ್’ ಎಂಬುವರಿಗೆ ಕಾಲ್ ಮಾಡಿ ಬೇಸರ ಹೇಳಿ ಕೊಂಡಿದ್ದರು. ಪೊಲೀಸ್ ತನಿಖೆ ವೇಳೆ ಈ ಫೋನ್ ಕಾಲ್ ವಿಚಾರ ಬೆಳಕಿಗೆ ಬಂದು ಪ್ರಕರಣ ಹೊಸ ತಿರುವು ಪಡೆದಿದೆ.
ಡಿಸೆಂಬರ್ 24ರಂದು ಸುಮಾ ಶಿವಮೊಗ್ಗ ಹೊರವಲಯದ ನಿಸರ್ಗ ಬಡಾವಣೆಯಲ್ಲಿರುವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ತುಂಗಾ ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’