ಶೀಘ್ರ ವಸತಿ-ಸಾರಿಗೆ ವ್ಯವಸ್ಥೆ ವರದಿ ನೀಡಿ


Team Udayavani, Jan 7, 2020, 12:26 PM IST

gb-tdy-1

ಕಲಬುರಗಿ: ಸಮ್ಮೇಳನ ಯಶಸ್ವಿಯಲ್ಲಿ ವಸತಿ ಹಾಗೂ ಸಾರಿಗೆ ವ್ಯವಸ್ಥೆಯೂ ಪ್ರಮುಖವಾಗಿರುವುದರಿಂದ ಈ ಎರಡರಲ್ಲಿ ಎಳ್ಳು ಕಾಳಷ್ಟು ಲೋಪವಾಗದಂತೆ ಕ್ರಮ ಕೈಗೊಳ್ಳುವುದು ಬಹಳ ಅಗತ್ಯವಿದೆ ಎಂದು ಅಖೀಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಸತಿ ಹಾಗೂ ಸಾರಿಗೆ ವ್ಯವಸ್ಥೆಯ ಅಧ್ಯಕ್ಷ ಹಾಗೂ ಶಾಸಕರಾದ ಪ್ರಿಯಾಂಕ್‌ ಖರ್ಗೆ ಹೇಳಿದರು.

ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಭಾಗವಹಿಸುವ ಆಹ್ವಾನಿತರಿಗೆ ವಸತಿ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಗುರುವಾರದ ಸಂಜೆಯೊಳಗೆ ವಸತಿ ಹಾಗೂ ಸಾರಿಗೆ ವ್ಯವಸ್ಥೆ ಕುರಿತಂತೆ ವರದಿ ನೀಡಿ ಎಂದು ಸೂಚಿಸಿದರು.

ಮೂರು ದಶಕಗಳ ನಂತರ ನುಡಿಹಬ್ಬ ಆಯೋಜಿಸುವ ಅವಕಾಶ ಜಿಲ್ಲೆಗೆ ದೊರಕಿದ್ದು, ತಾವು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ಕೇಂದ್ರ ಸಮಿತಿಯೊಂದಿಗೆ ಮಾತನಾಡಿ ಈ ಸಲದ ಸಮ್ಮೇಳನ ಕಲಬುರಗಿಯಲ್ಲಿ ನಡೆಸುವಂತೆ ಒತ್ತಾಯಿಸಿದ್ದೆ. ಈಗ ಸಮ್ಮೇಳನ ನಡೆಸುವ ಅವಕಾಶ ಸಿಕ್ಕಿದೆ. ನಾವೆಲ್ಲ ಸೇರಿ ಸಮ್ಮೇಳನ ಯಶಸ್ವಿಗೆ ಸಹಕಾರದೊಂದಿಗೆ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ನಗರದಲ್ಲಿ ಇರುವ ಹೊಟೇಲ್‌, ವಸತಿ ಶಾಲೆಗಳು, ಹೌಸಿಂಗ್‌ ಬೋರ್ಡ್‌ ವಸತಿ ನಿಲಯಗಳು, ಕಲ್ಯಾಣ ಮಂಟಪಗಳನ್ನು ವಸತಿಗೆ ಹಾಗೂ ಖಾಸಗಿ ಶಾಲೆಗಳ, ಖಾಸಗಿ ವಾಹನಗಳ ಡೀಲರ್‌ಗಳೊಂದಿಗೆ ಮಾತನಾಡಿ ವಾಹನ ಸೌಲಭ್ಯ ಕಲ್ಪಿಸಲು ಮುಂದಾಗಬೇಕಿದೆ. ಒಟ್ಟು 1,200 ರೂಮ್‌ ಗಳನ್ನು ವ್ಯವಸ್ಥೆ ಮಾಡಬೇಕಾಗಿದ್ದು, ಈಗ 850 ರೂಮ್‌ ಗಳನ್ನು ಗುರುತಿಸಲಾಗಿದೆ. ನಗರದ ಹೊಟೇಲ್‌ಗ‌ಳು, ಕಲ್ಯಾಣ ಮಂಟಪಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಮ್ಮೇಳನದ ಆಹ್ವಾನಿತರಿಗೆ ಹಾಗೂ ಸಮ್ಮೇಳನಕ್ಕೆ ಬರುವ ಸಾರ್ವಜನಿಕರಿಗೆ ಅನುಕೂಲವಾಗಲು ಅಗತ್ಯ ಸಾರಿಗೆ ಮಾಡಲಾಗುತ್ತಿದೆ. 50 ಇನ್ನೋವಾ, 50 ಕ್ರೂಸರ್‌ಗಳನ್ನು, 20 ಸರಕಾರಿ ಬಸ್‌ಗಳು, ಪ್ರತಿ ತಾಲೂಕಿನಿಂದ ಕಲಬುರಗಿಗೆ ಬೆಳಿಗ್ಗೆ ಹಾಗೂ ರಾತ್ರಿ ಮತ್ತೆ ವಾಪಸ್‌ ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ. ಸಮ್ಮೇಳನಕ್ಕೆ ಬರುವ ಆಹ್ವಾನಿತರನ್ನು ಎ, ಬಿ ಹಾಗೂ ಸಿ ಕೆಟಗರಿ ಎಂದು ವಿಭಾಗಿಸಲಾಗಿದೆ ಎಂದು ಸಿಇಒ ರಾಜಾ ತಿಳಿಸಿದರು.

ಸರಕಾರಿ ವಸತಿ ಶಾಲೆಗಳಲ್ಲಿ ಕುಡಿಯುವ ನೀರು, ವಿದ್ಯುತ್‌, ವ್ಯವಸ್ಥೆ ಮಾಡಿ. ಕಲಾ ತಂಡಗಳಿಗೆ ಬೇರೆ ಕಡೆ ವ್ಯವಸ್ಥೆ ಮಾಡಿಸಿ ಅವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ವಸತಿ ನಿಲಯಗಳ ಸುತ್ತಮುತ್ತ ಫಾಗಿಂಗ್‌ ವ್ಯವಸ್ಥೆ, ಮೇಣಬತ್ತಿ ವ್ಯವಸ್ಥೆ ಮಾಡಿ. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಿಸಬೇಕು. ಅಗತ್ಯವಿರುವ ಕಡೆಗಳೆಲ್ಲ ಒನ್‌ ವೇ ಮಾಡಿ. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಖರ್ಗೆ ಸೂಚಿಸಿದರು.

ಆಹ್ವಾನಿತರಿಗೆ ಬೇಕಾಗುವ ಹಾಸಿಗೆ, ಮಗ್‌, ಬಕೆಟ್‌ ಇತ್ಯಾದಿಗಳನ್ನು ಖರೀದಿಸಿ ಅದರಲ್ಲಿ ಪಾರದರ್ಶಕತೆ ಇರಲಿ. ಸಮ್ಮೇಳನ ನಡೆಯುವ ಮೂರು ದಿನಗಳ ಕಾಲ ಪೊಲೀಸರು ಯಾವುದೇ ಅಹಿತಕರ ಘಟನೆಯಾಗದಂತೆ ನೋಡಿಕೊಳ್ಳಬೇಕು. ಜಾಸ್ತಿ ಜನರು (200ಕ್ಕೂ ಅಧಿಕ) ವಸತಿಯಿರುವ ಕಡೆಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ನಿರ್ದೇಶಿಸಿದರು. ಜಿಪಂ ವಿರೋಧ ಪಕ್ಷದ ನಾಯಕರಾದ ಶಿವಾನಂದ ಪಾಟೀಲ್‌ ಮರಗುತ್ತಿ, ಜಿಪಂ ಸಿಇಒ ಪ್ರವೀಣಾ ಪ್ರಿಯಾ ಡೇವಿಡ್‌, ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.