ಶಿವಸೇನೆ ನಿಷೇಧಕ್ಕೆ ಕರವೇ ಆಗ್ರಹ
Team Udayavani, Jan 7, 2020, 12:44 PM IST
ದಾವಣಗೆರೆ: ಶಿವಸೇನೆ ಪುಂಡಾಟಿಕೆ ನಡೆಸುತ್ತಿದೆ ಮತ್ತು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ನಾಡದ್ರೋಹದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸೋಮವಾರ ಕರ್ನಾಟಕ ರಕ್ಷಣಾ ವೇದಿಕೆ(ಸ್ವಾಭಿಮಾನ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶ್ರೀ ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಮಹಾರಾಷ್ಟ್ರದ ಕೊಲ್ಲಾಪುರದ ಶಿವಸೇನೆ ಮುಖ್ಯಸ್ಥ ದೀಪಕ್ ದೀವಾನಿ ಮತ್ತು 20ಕ್ಕೂ ಹೆಚ್ಚು ಪುಂಡರು ಕನ್ನಡ ಧ್ವಜ ಸುಡುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಶಿವಸೇನೆಯ ಪುಂಡಾಟವನ್ನು ಕನ್ನಡಿಗರು ಸಹಿಸುವುದೇ ಇಲ್ಲ. ನಾಡದ್ರೋಹಿ ಕೆಲಸ ಮಾಡುತ್ತಿರುವ ಶಿವಸೇನೆಯನ್ನು ಕೂಡಲೇ ನಿಷೇಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಎದುರಾಳಿಯ ಬಗ್ಗೆ ಮಾತನಾಡುವ ಭರದಲ್ಲಿ ಕನ್ನಡ ನಾಡ ದ್ರೋಹಿ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಎಂದು ದೂರಿದರು. ವೇದಿಕೆ ರಾಜ್ಯ ಸಂಚಾಲಕಿ ಎನ್. ಎಸ್. ಸುವರ್ಣಮ್ಮ, ಮಂಜುನಾಥ್ ಬಣಕಾರ್, ಶೈಲಜಾ, ಶಿವಮ್ಮ, ಕೆ.ಟಿ. ಪ್ರಭು, ಮಲ್ಲಮ್ಮ, ಎನ್. ಮಂಜುನಾಥ್, ಮಂಜಮ್ಮ, ಮಂಜುಳಾ, ಹುಲಿಗೆಮ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ