ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ
Team Udayavani, Jan 7, 2020, 3:41 PM IST
ಶಿರಸಿ: ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ನಿಧನ ಹೊಂದಿದರು. ಅವರು ಕಳೆದ ಒಂದು ತಿಂಗಳುಗಳಿಂದ ಸೋಂದಾ – ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು. ಅವರಿಗೆ 80 ವರ್ಷ ಪ್ರಾಯವಾಗಿತ್ತು.
ಮಂಜುನಾಥ ಭಾಗವತರ ಪಾರ್ಥಿವ ಶರೀರವನ್ನು ಸಂಜೆ 5.30 ಕ್ಕೆ ಶಿರಸಿ ನಗರದ ಹೊಟೇಲ್ ಸಾಮ್ರಾಟ್ ಎದುರುಗಡೆ ಇರುವ ಸದ್ಗತಿ – ವಿದ್ಯಾನಗರ ರುದ್ರಭೂಮಿಗೆ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಶಿಷ್ಯರು ಹಾಗೂ ಅಭಿಮಾನಿಗಳು ಸದ್ಗತಿಗೆ ಆಗಮಿಸಬೇಕಾಗಿ ಯಕ್ಷಶಾಲ್ಮಲಾದ ಅಧ್ಯಕ್ಷ ಆರ್.ಎಸ್.ಹೆಗಡೆ ಭೈರುಂಬೆ ಅವರು ವಿನಂತಿ ಮಾಡಿಕೊಂಡಿದ್ದಾರೆ. ಸಾರ್ವಜನಿಕ ದರ್ಶನದ ಬಳಿಕ ಅವರ ಅಂತ್ಯಕ್ರಿಯೆಯನ್ನು ‘ಸದ್ಗತಿ’ ರುದ್ರಭೂಮಿಯಲ್ಲಿ ರಾತ್ರಿ ನೆರವೇರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ