ಯಕ್ಷಗಾನಕ್ಕಾಗಿ ಬದುಕನ್ನೇ ಮುಡಿಪಾಗಿರಿಸಿದ್ದ ಯಕ್ಷ ಋಷಿ ಹೊಸ್ತೋಟ


Team Udayavani, Jan 7, 2020, 5:00 PM IST

Hosthota-02

ಹೊಸ್ತೋಟ ಮಂಜುನಾಥ ಭಾಗವತರು ಒಂದರ್ಥದಲ್ಲಿ ಯಕ್ಷಗಾನ ಕಲೆಗಾಗಿ ತನ್ನ ಸರ್ವಸ್ವವನ್ನೂ ಸಮರ್ಪಿಸಿಕೊಂಡಿದ್ದ ಕಲಾ ತಪಸ್ವಿ. ಅವರು ಬಡಗುತಿಟ್ಟಿನ ಯಕ್ಷಗಾನದ ಅಧ್ಯಯನ-ಪರಾಮರ್ಶೆ-ಪ್ರಸರಣೆಗಾಗಿ ಜಂಗಮರಂತೆ ಏಕಾಂಗಿಯಾಗಿ ಊರೂರು ಸುತ್ತುತ್ತಿದ್ದ ಯಕ್ಷ ಭೈರಾಗಿ.

ಶಿರಸಿ ತಾಲೂಕಿನ ಹನುಮಂತಿ ಗ್ರಾಮದ ಹೊಸ್ತೋಟದಲ್ಲಿ ಮಂಜುನಾಥ ಭಾಗವತರು 1940ರಲ್ಲಿ ಜನಿಸಿದರು. ಆರನೇ ತರಗತಿಗೆ ಮಂಜುನಾಥ ಭಾಗವತರ ಶಾಲಾ ಕಲಿಕೆ ನಿಂತರೂ ಯಕ್ಷಗಾನದ ಕಡೆಗೆ ಬಾಲ್ಯದಿಂದಲೇ ಅವರಿಗಿದ್ದ ಆಸಕ್ತಿ ಅವರನ್ನು ಕೆರೆಮನೆ ಶಿವರಾಮ ಹೆಗಡೆ ಮತ್ತು ಕೆರೆಮನೆ ಮಹಾಬಲ ಹೆಗಡೆ ಅವರ ಸಂಪರ್ಕಕ್ಕೆ ಬರುವಂತೆ ಮಾಡುತ್ತದೆ. ಮುಂದೆ ಸುಮಾರು 28 ವರ್ಷಗಳವರೆಗೆ ಯಕ್ಷಗಾನದ ಸರ್ವಾಂಗೀಣ ವಿಭಾಗಗಳಲ್ಲಿ ಪ್ರಾವಿಣ್ಯತೆಯನ್ನು ಸಾಧಿಸಿದ್ದು ಮಾತ್ರವಲ್ಲದೇ ಜೊತೆಯಲ್ಲೇ ಕನ್ನಡ ಸಾಹಿತ್ಯ ಹಾಗೂ ಛಂದಸ್ಸುಗಳ ಅಧ್ಯಯನವನ್ನೂ ಮಾಡುತ್ತಾರೆ.

ಈ ನಡುವೆ 1966ರಲ್ಲಿ ಕಾರವಾರದ ರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಪ್ರಭಾನಂದಜೀ ಅವರಿಂದ ಆಧ್ಯಾತ್ಮಿಕ ದೀಕ್ಷೆಯನ್ನು ಪಡೆದುಕೊಂಡು ಪಾರಿವ್ರಾಜಕ ವೃತವನ್ನು ಸ್ವೀಕರಿಸಿದರು. ಆ ಬಳಿಕ ಹೊಸ್ತೋಟ ಮಂಜುನಾಥ ಭಾಗವತರು ತಮ್ಮ ಸಂಪೂರ್ಣ ಜೀವನವನ್ನು ಯಕ್ಷಗಾನಕ್ಕಾಗಿಯೇ ಮುಡುಪಾಗಿಟ್ಟಿದ್ದು ವಿಶೇಷ.

ಕರ್ನಾಟಕಾದ್ಯಂತ ಸಂಚರಿಸುತ್ತಾ ಹಲವಾರು ಕಡೆಗಳಲ್ಲಿ ಯಕ್ಷಗಾನ ಕಲಿಕಾ ಶಿಬಿರಗಳನ್ನು ನಡೆಸುತ್ತಾರೆ. ಅದರಲ್ಲೂ ವಿಶೇಷವಾಗಿ ಶಾಲಾ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಅಂಧರಿಗೆ ಯಕ್ಷಗಾನ ತರಬೇತಿ ನೀಡಿದ ಹೆಗ್ಗಳಿಕೆ ಹೊಸ್ತೋಟ ಭಾಗವತರದ್ದು. ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ವಿವಿಧ ಮಟ್ಟುಗಳ ಅಧ್ಯಯನ ಹಾಗೂ ಸಂಗ್ರಹವನ್ನು ಮಾಡುತ್ತಾರೆ.

ಯಕ್ಷಗಾನದ ಸಮಗ್ರ ವಿಚಾರಗಳ ಅಧ್ಯಯನ ಮತ್ತು ಅಧ್ಯಾಪನಕ್ಕೆ ತನ್ನ ಸಂಪೂರ್ಣ ಬದುಕನ್ನು ಸಮರ್ಪಿಸಿಕೊಂಡು ಒಂದರ್ಥದಲ್ಲಿ ‘ಯಕ್ಷ ಋಷಿ’ಯಾಗಿಯೇ ಬದುಕಿದವರು ಹೊಸ್ತೋಟ ಭಾಗವತರು. ಭಾಗವತಿಕೆ, ಮೃದಂಗ, ವೇಷಭೂಷಣ, ನೃತ್ಯ, ಭಾವಾಭಿನಯ,ಪ್ರಾತ್ಯಕ್ಷತೆಯ ಗೋಷ್ಠಿಗಳು, ಬೇಸಿಗೆ ಶಿಬಿರಗಳು, ಜಾನಪದ ವಿಚಾರ ಮಂಡನೆ ಸೇರಿದಂತೆ ತಮ್ಮ ಬದುಕಿನುದ್ದಕ್ಕೂ ಯಕ್ಷಗಾನದ ಬೆಳವಣಿಗೆಗಾಗಿ ಶ್ರಮಿಸಿದ ಸಂತ ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು.

ರಾಮಾಯಣದ 19 ಪ್ರಸಂಗಗಳು, ಮಹಾಭಾರತದ 50 ಪ್ರಸಂಗಗಳು, ಭಾಗವತದ 20 ಪ್ರಸಂಗಗಳನ್ನು ಹೊಸ್ತೋಟ ಭಾಗವತರು ರಚಿಸಿದ್ದಾರೆ. ಪಂಚತಂತ್ರ ಕಥೆಗಳನ್ನು ಆಧರಿಸಿ ಮಕ್ಕಳಿಗಾಗಿ ಚೈತ್ರ ಪೂರ್ಣಿಮಾ ಹೆಸರಿನಲ್ಲಿ 15 ಪ್ರಸಂಗಗಳನ್ನು ರಚಿಸಿದ್ದಾರೆ. ಶೆಕ್ಸ್ ಪಿಯರ್ ನ ಮ್ಯಾಕ್ ಬೆತ್ ನಾಟಕವನ್ನು ಆಧರಿಸಿ ‘ಮೇಘಕೇತ’, ಹೋಮರನ ಒಡಿಸ್ಸಿ ಕಾವ್ಯವನ್ನಾಧರಿಸಿ ‘ಉಲ್ಲಾಸದತ್ತ ಚರಿತ್ರೆ’, ಕಾಳಿದಾಸನ ‘ಮೆಘದೂತ’, ‘ಶಾಕುಂತಲ’, ಉತ್ತರರಾಮಚರಿತೆ, ದೂತವಾಕ್ಯ ಸಹಿತ 250ಕ್ಕೂ ಹೆಚ್ಚು ಪ್ರಸಂಗಗಳನ್ನು ಇವರು ರಚಿಸಿದ್ದಾರೆ.

ಹೊಸ್ತೋಟ ಭಾಗವತರು ರಚಿಸಿರುವ ‘ನಿಸರ್ಗಾನುಸಂಧಾನ’ ಎಂಬ ಪರಿಸರ ರಕ್ಷಣೆಯ ಆಶಯಕ್ಕೆ ಪೂರಕವಾಗಿರುವ ಪ್ರಸಂಗವು ಕನ್ನಡ, ಹಿಂದಿ, ಸಂಸ್ಕೃತ ಭಾಷೆಗಳಲ್ಲಿ ದೇಶಾದ್ಯಂತ ಹಲವಾರು ಪ್ರದರ್ಶನಗಳನ್ನು ಕಂಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ, ಜಾನಪದ ಅಕಾಡೆಮಿಯ ವಿಶೇಷ ಪ್ರಶಸ್ತಿ, ಅಗ್ನಿ ಟ್ರಸ್ಟ್ ನಿಂದ ಕೊಡಮಾಡುವ ಪರಮದೇವ ಪ್ರಶಸ್ತಿ, ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ, ಸೀತಾನದಿ ಗಣಪಯ್ಯ ಭಾಗವತ ಪ್ರಶಸ್ತಿ, ಕಲಾರಂಗ ಉಡುಪಿಯಿಂದ ಕೊಡಮಾಡುವ ಉಪ್ಪೂರು ನಾರಾಯಣ ಭಾಗವತ ಪ್ರಶಸ್ತಿ, ಪೇಜಾವರ ಮಠದ ರಾಮ ವಿಠಲ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿ ಗೌರವಗಳು ಹೊಸ್ತೋಟ ಭಾಗವತರನ್ನು ಅರಸಿಕೊಂಡು ಬಂದಿವೆ.

ಯಕ್ಷಗುರು, ಯಕ್ಷಭೀಷ್ಮ, ಯಕ್ಷಋಷಿ ಎಂದೆಲ್ಲಾ ಕರೆಯಲ್ಪಡುವ ಮಂಜುನಾಥ ಭಾಗವತರು ಒಂದರ್ಥದಲ್ಲಿ ಅವಧೂತರಂತೆ ಬದುಕಿ ಬಾಳಿದವರು. ಈ ಮಹಾನ್ ವ್ಯಕ್ತಿತ್ವ ನಿರ್ಯಾಣ ಹೊಂದುವುದರೊಂದಿಗೆ ಯಕ್ಷರಂಗದ ‘ಮಹಾನ್ ಚೇತನ’ವೊಂದು ಅದೃಶ್ಯವಾದಂತಾಗಿದೆ. ಆದರೆ ತಮ್ಮ ಸುದೀರ್ಘ ಜೀವನಯಾನದಲ್ಲಿ ಹೊಸ್ತೋಟ ಭಾಗವತರು ಯಕ್ಷರಂಗಕ್ಕೆ ಸಲ್ಲಿಸಿದ ನಿಸ್ವಾರ್ಥ ಸೇವೆ ಯಕ್ಷಾಭಿಮಾನಿಗಳ ಮನಸ್ಸಿನಲ್ಲಿ ಅವರ ನೆನಪನ್ನು ಸದಾ ಹಸಿರಾಗಿಸಿದೆ.

ಪೂರಕ ಮಾಹಿತಿ: ಹೊಸ್ತೋಟ ಮಂಜುನಾಥ ಭಾಗವತ – ಒಡಲಿನ ಮಡಿಲು ಯಕ್ಷತಾರೆ, ಬಯಲಾಟದ ನೆನಪುಗಳು

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.