ಸೂರ್ಗೋಳಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣ

ಫೆಬ್ರವರಿಯೊಳಗೆ ಕಾಮಗಾರಿ ಪೂರ್ಣ; ವಿದ್ಯುತ್‌ ಚಾಲಿತ ಗೇಟು

Team Udayavani, Jan 8, 2020, 3:13 AM IST

20

ಗೋಳಿಯಂಗಡಿ: ಬೆಳ್ವೆ, ನಾಲ್ಕೂರು, ಹಿಲಿಯಾಣ ಗ್ರಾಮದ ನೂರಾರು ಕೃಷಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೂರ್ಗೋಳಿಯಲ್ಲಿ ಸೀತಾನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದೆ. ಈಗಾಗಲೇ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು, ಲೋಕಾರ್ಪಣೆಗೊಳ್ಳುವ ನಿರೀಕ್ಷೆಯಿದೆ.

4.95 ಕೋ.ರೂ. ಅನುದಾನ ಬಿಡುಗಡೆ
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಮುತುವರ್ಜಿಯಲ್ಲಿ ಸಣ್ಣ ನೀರಾವರಿ ಇಲಾಖೆಯಡಿ ಈ ಕಿಂಡಿ ಅಣೆಕಟ್ಟು ಮಂಜೂರಾಗಿದ್ದು, ಇದಕ್ಕಾಗಿ 4.95 ಕೋ.ರೂ. ಅನುದಾನ ಬಿಡುಗಡೆಗೊಂಡಿದೆ.

ಕೃಷಿಗೆ ಅನುಕೂಲ
ಗ್ರಾಮೀಣ ಭಾಗದ ಕೃಷಿ ಪ್ರದೇಶಗಳಿಗೆ ಅನುಕೂಲ ವಾಗುವ ಹಾಗೂ ಅಲ್ಲಿನ ಅಂತರ್ಜಲ ವೃದ್ಧಿಯ ಉದ್ದೇಶದಿಂದ ಈ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದೆ. ಈ ಭಾಗದ ರೈತರ ಬಹು ವರ್ಷಗಳ ಬೇಡಿಕೆ ಇದಾಗಿದೆ. ಮೂರು ಗ್ರಾಮಗಳಾದ ಹಿಲಿಯಾಣ, ನಾಲ್ಕೂರು, ಬೆಳ್ವೆಯ ಊರುಗಳಾದ ಸೂರ್ಗೋಳಿ, ಗುಮ್ಮೊಲ, ಅಬ್ಲಿಕಟ್ಟೆ, ಅರ್ಬಿ, ನಂಚಾರು, ಬೆಳ್ವೆ ಹೀಗೆ ಅನೇಕ ಊರುಗಳ ನೂರಾರು ರೈತರಿಗೆ ಪ್ರಯೋಜನವಾಗಲಿದೆ.

ವಿದ್ಯುತ್‌ ಚಾಲಿತ ಗೇಟು
ಈ ಕಿಂಡಿ ಅಣೆಕಟ್ಟಿನಲ್ಲಿ ಒಟ್ಟು 17 ಗೇಟುಗಳು ಇರಲಿವೆ. ವಿದ್ಯುತ್‌ಚಾಲಿತ ಗೇಟು ಹಾಕಬೇಕೆಂದಾಗ ಬಟನ್‌ ಒತ್ತಿದರೆ ಸಾಕು. ಇದರಿಂದ ಆಗಾಗ ಹಲಗೆ ಹಾಕುವ ಅಥವಾ ತೆಗೆಯುವ ಕಿರಿ-ಕಿರಿ ಇರುವುದಿಲ್ಲ. ಕರೆಂಟ್‌ ಇಲ್ಲದಾಗಲೂ ಮಾನವ ಚಾಲಿತವಾಗಿಯೂ ಗೇಟು ಅಳವಡಿಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಒಮ್ಮೆ ಗೇಟು ಹಾಕಲು ಕನಿಷ್ಠ 15 ನಿಮಿಷ ಬೇಕಾಗುತ್ತದೆ ಎನ್ನುವುದಾಗಿ ಇದರ ಕಾಮಗಾರಿ ನಿರ್ವಹಿಸುತ್ತಿರುವ ರತ್ನಾಕರ್‌ ಶೆಟ್ಟಿ ಮಾಹಿತಿ ನೀಡುತ್ತಾರೆ.

ನೀರಿನ ಪ್ರಮಾಣ ಹೆಚ್ಚುವ ನಿರೀಕ್ಷೆ
ಫೆಬ್ರವರಿ, ಮಾರ್ಚ್‌ ಬಂದರೆ ಸಾಕು. ಈ ಭಾಗದ ರೈತರು ಅಡಿಕೆ, ತೆಂಗಿನ ತೋಟ, ಗದ್ದೆಗಳಲ್ಲಿ ತರಕಾರಿ ಮತ್ತಿತರರ ಕೃಷಿ ಚಟುವಟಿಕೆಗಳಿಗೆ ನೀರಿನ ಸಮಸ್ಯೆ ಎದುರಾಗುತ್ತಿತ್ತು. ಇದಲ್ಲದೆ ಇಲ್ಲಿ ಮೇ ತಿಂಗಳ ಕೊನೆಯಲ್ಲಿ ಬಾವಿಗಳಲ್ಲಿಯೂ ನೀರು ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿದ್ದು, ಆದರೆ ಈ ಕಿಂಡಿ ಅಣೆಕಟ್ಟಿನಿಂದ ಕೃಷಿಗೂ ಅನುಕೂಲವಾಗಲಿದ್ದು, ಬಾವಿಗಳಲ್ಲಿಯೂ ನೀರಿನ ಪ್ರಮಾಣ ಹೆಚ್ಚುವ ನಿರೀಕ್ಷೆ ಈ ಭಾಗದ ಜನರದ್ದಾಗಿದೆ.

ಹೆಕ್ಟೇರ್‌ ಕೃಷಿ ಪ್ರದೇಶ
ಹಿಲಿಯಾಣ, ಬೆಳ್ವೆ, ನಾಲ್ಕೂರು ಗ್ರಾಮಗಳ 120 ಹೆಕ್ಟೇರ್‌ (2 ಸಾವಿರಕ್ಕೂ ಮಿಕ್ಕಿ ಎಕರೆ) ಕೃಷಿ ಭೂಮಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದೆ. ಈಗಿರುವ ಪಂಪ್‌ಸೆಟ್‌ ಹೊಂದಿರುವ ರೈತರನ್ನು ಹೊರತುಪಡಿಸಿ, ಈ ಭಾಗದ 150ಕ್ಕೂ ಹೆಚ್ಚಿನ ರೈತರು ಇದರ ಲಾಭ ಪಡೆಯಬಹುದು. 4 ಮೀಟರ್‌ವರೆಗೂ ನೀರು ಶೇಖರಣೆಯಾಗುತ್ತದೆ. ಸುತ್ತಮುತ್ತಲಿನ 2 ಕಿ.ಮೀ. ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ಸಂಗ್ರಹವಾಗಲಿದ್ದು, ಇದರಿಂದ ಈ ಭಾಗದ ಅಂತರ್ಜಲ ಮಟ್ಟವು ವೃದ್ಧಿಗೆ ಸಹಕಾರಿಯಾಗಲಿದೆ.

ರೈತರಿಗೆ ಪ್ರಯೋಜನ
ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಪ್ರಮುಖವಾಗಿ ಬೆಳ್ವೆ, ನಾಲ್ಕೂರು, ಹಿಲಿಯಾಣ ಗ್ರಾಮಗಳ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ. ಇದರಿಂದ ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ. ಆದರೆ ಕಿಂಡಿ ಅಣೆಕಟ್ಟಿನ ಗೇಟು ಅಳವಡಿಕೆ ಕಾರ್ಯ ಸರಿಯಾದ ರೀತಿಯಲ್ಲಿ ಆಗಬೇಕಾಗಿದೆ.
– ಸತೀಶ್‌ ಕಿಣಿ ಬೆಳ್ವೆ, ಪ್ರ. ಕಾರ್ಯದರ್ಶಿ, ರೈತ ಸಂಘದ ಉಡುಪಿ

ಫೆಬ್ರವರಿಯೊಳಗೆ ಪೂರ್ಣ
ಕಳೆದ ವರ್ಷದ ಎಪ್ರಿಲ್‌ನಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಮೇ ಹಾಗೂ ಜೂನ್‌ವರೆಗೆ ಕಾಮಗಾರಿ ನಡೆದಿದ್ದು, ಮಳೆಗೆ ಸ್ಥಗಿತಗೊಳಿಸಿ, ಈಗ ಮತ್ತೆ ಆರಂಭಿಸಲಾಗಿದೆ. ಬಹುತೇಕ ಮುಗಿದಿದ್ದು, ಅಂತಿಮ ಹಂತದ ಕಾಮಗಾರಿ ಬಾಕಿಯಿದ್ದು, ಫೆಬ್ರವರಿಯೊಳಗೆ ಪೂರ್ಣಗೊಳ್ಳಲಿದೆ.
– ರಾಜೇಶ್‌, ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ, ಉಡುಪಿ

ಅಣೆಕಟ್ಟಿಗೆ ಬೇಡಿಕೆ ಇಟ್ಟಿದ್ದೆವು
ಸೀತಾನದಿಯಲ್ಲಿ ಉತ್ತಮ ಪ್ರಮಾಣದ ನೀರಿದ್ದರೂ ಅದು ಈ ಭಾಗದ ರೈತರ ಕೃಷಿಗೆ ಅಷ್ಟೇನೂ ಪ್ರಯೋಜನವಾಗುತ್ತಿರಲಿಲ್ಲ. ಈ ಹಿಂದೆಯೇ ಕಿಂಡಿ ಅಣೆಕಟ್ಟಿಗೆ ಬೇಡಿಕೆ ಇಟ್ಟಿದ್ದೆವು. ಅದೀಗ ನೆರವೇರುತ್ತಿದೆ. ಇದರಿಂದ ಇಲ್ಲಿನ ಅನೇಕ ಅಡಿಕೆ ಕೃಷಿಕರಿಗೆ ನೆರವಾಗಲಿದೆ. ಹೈನುಗಾರರಿಗೂ ಸಾಕಷ್ಟು ಪ್ರಯೋಜನವಾಗಲಿದೆ.
-ಕೃಷ್ಣ ನಾಯ್ಕ ಸೆಟ್ಟೊಳ್ಳಿ, ಕೃಷಿಕರು

 ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.