ಕುಂದಾಪುರದಲ್ಲಿ ಇವರೇ ನಮ್ಮ ಪ್ಯಾಡ್‌ಮ್ಯಾನ್‌!


Team Udayavani, Jan 9, 2020, 7:49 AM IST

14

23 ವರ್ಷಗಳಿಂದ ಶಿಕ್ಷಕರಾಗಿದ್ದಾರೆ
ಉಡುಪಿ ಜಿಲ್ಲೆಯ 34 ಕಡೆ ಅಳವಡಿಕೆ

ಕುಂದಾಪುರ: ಅಕ್ಷಯ್‌ ಕುಮಾರ್‌ ಅಭಿನಯದ ಹಿಂದಿ ಸಿನಿಮಾ ಪ್ಯಾಡ್‌ಮ್ಯಾನ್‌ ಸಾಕಷ್ಟು ಮಂದಿಗೆ ಪ್ರೇರಣೆ ನೀಡಿದೆ. ಸ್ಯಾನಿಟರಿ ಪ್ಯಾಡ್‌ಗಳ ಕುರಿತಾಗಿ ಜಾಗೃತಿ ಮೂಡಿಸಿದೆ. ಅದೇ ಮಾದರಿಯಲ್ಲಿ ಕುಂದಾಪುರ ತಾಲೂಕಿನಲ್ಲಿ ಒಬ್ಬ ಶಿಕ್ಷಕ ಕಾರ್ಯನಿರ್ವಹಿಸುತ್ತಿದ್ದಾರೆ. ಬಳಸಿದ ಸ್ಯಾನಿಟರಿ ಪ್ಯಾಡ್‌ಗಳ ನಿರ್ವಹಣೆಗೆ ಪಡುತ್ತಿದ್ದ ಬವಣೆ ನೀಗಿಸಲು ಪ್ರಯತ್ನಿಸಿ ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಅವರು ರೂಪಿಸಿದ ಘಟಕ ಉಡುಪಿ ಜಿಲ್ಲೆಯ 34 ಶಾಲೆಗಳಲ್ಲಿ ಅಳವಡಿಸಲಾಗಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ಯಾರಿವರು?
ಕುಂದಾಪುರದ ವಡೇರಹೋಬಳಿ ನಿವಾಸಿ, ಬಸ್ರೂರು ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಶ್ರೀಕಾಂತ ವಿ. ಈಗ ರಾಷ್ಟ್ರದ ಗಮನ ಸೆಳೆದ ಉತ್ಸಾಹಿ. 23 ವರ್ಷಗಳಿಂದ ಶಿಕ್ಷಕರಾಗಿದ್ದು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರು.

ಮೂರು ವರ್ಷದ ಹಿಂದೆ
ಬಸ್ರೂರು ಶಾಲೆಯಲ್ಲಿ ಮೂರು ವರ್ಷದ ಹಿಂದೆ ಸ್ಯಾನಿಟರಿ ಪ್ಯಾಡ್‌ ಎಸೆಯಲು ಹೊಸವಿಧಾನ ಅಳವಡಿಸಿ ಯಶಸ್ವಿಯಾದ ಶ್ರೀಕಾಂತ್‌, ಮಡಾಮಕ್ಕಿ, ಹೆಂಗವಳ್ಳಿ, ಮುದ್ರಾಡಿ, ಹಾಲಾಡಿ, ಬಿದ್ಕಲ್‌ಕಟ್ಟೆ, ಬಸ್ರೂರು, ಬೈಂದೂರು, ಉಪ್ಪುಂದ, ನಾವುಂದ, ಹಕ್ಲಾಡಿ, ಹೆಮ್ಮಾಡಿ, ತಲ್ಲೂರು, ಬೀಜಾಡಿ, ವಕ್ವಾಡಿ, ಪೊಲಿಪು, ಪಟ್ಲ, ಮಣಿಪಾಲದ ರಾಜೀವನಗರ, ಕೊಕ್ಕರ್ಣೆ, ಕುಂದಾಪುರ ನಗರದ ಕಾಲೇಜುಗಳು, ನಿಟ್ಟೂರು ಮೊದಲಾದೆಡೆ ಸೇರಿದಂತೆ 34 ಕಡೆ ಇಂತಹ ಘಟಕ ಅಳವಡಿಸಿದ್ದಾರೆ.

ಏನಿದು ಘಟಕ
ಬಾಲಕಿಯರ ಶೌಚಾಲಯದ ಗೋಡೆಗೆ 3 ಇಂಚಿನ ರಂಧ್ರ ಕೊರೆದು ಅದಕ್ಕೆ ಪೈಪ್‌ ಅಳವಡಿಸಿ ಅದರ ಸಂಪರ್ಕವನ್ನು ಹೊರಗಿನ ತೊಟ್ಟಿಗೆ ನೀಡುವುದು. ಕಾಂಕ್ರಿಟ್‌ ರಿಂಗ್‌ಗಳ ಮೂಲಕ 2, 3,4 ಅಡಿ ಅಗಲದ, 4 ಅಡಿ ಎತ್ತರದ ತೊಟ್ಟಿ ನಿರ್ಮಿಸುವುದು. ತಿಂಗಳಿಗೊಮ್ಮೆ ಈ ತೊಟ್ಟಿಗೆ ಬ್ಲೀಚಿಂಗ್‌ ಪೌಡರ್‌ ಹಾಗೂ ನೀರು ಹಾಕಿದರೆ ಸಾಕು. ಪ್ಲಾಸ್ಟಿಕ್‌ ಮಾತ್ರ ಉಳಿಯುತ್ತದೆ, ಇತರೆಲ್ಲ ಕರಗುತ್ತದೆ. ಸುಮಾರು ಐದಾರು ವರ್ಷಗಳ ಅನಂತರ ಈ ತೊಟ್ಟಿಯಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ನ್ನು ಪಂಚಾಯತ್‌ ಮೂಲಕ ಶುಚಿಗೊಳಿಸಿದರೆ ಸಾಕಾಗುತ್ತದೆ. ಒಂದು ತೊಟ್ಟಿಗೆ 8ರಿಂದ 10 ಸಾವಿರ ಖರ್ಚಾಗುತ್ತದೆ.

ಏನು ಪ್ರೇರಣೆ
ವಡೇರಹೋಬಳಿ ಪ್ರೌಢಶಾಲೆಗೆ ಇವರ ಪುತ್ರಿ ಹೋಗುತ್ತಿದ್ದಾಗ ಅವರು ಅನುಭವಿಸಿದ ವೇದನೆಯೇ ಇವರ ಸಂಶೋಧನೆಗೆ ಪ್ರೇರಣೆ. ನೂರಾರು ಹೆಣ್ಣುಮಕ್ಕಳಿರುವ ಕಾಲೇಜು, ಪ್ರೌಢ ಶಾಲೆಗಳಲ್ಲಿ ನ್ಯಾಪ್‌ಕಿನ್‌ ಎಸೆಯಲು ದೊಡ್ಡ ಸಮಸೆಯಾಗುತ್ತದೆ. ಶೌಚಾಲಯಕ್ಕೆ ಹಾಕಿದರೆ
ಬ್ಲಾಕ್‌ ಆಗುತ್ತದೆ. ನ್ಯಾಪ್‌ಕಿನ್‌ ಬರ್ನರ್‌ ಇದ್ದರೂ ಅದಕ್ಕೆ ವಿದ್ಯುತ್‌ ಸರಬರಾಜು ಇಲ್ಲದಿದ್ದರೆ ಕಷ್ಟ. ಬೇಗನೇ ಹಾಳಾಗುತ್ತದೆ. ಹಾಗಾಗಿ ತೊಟ್ಟಿ ಅನುಕೂಲ ಎನ್ನುತ್ತಾರೆ ಶ್ರೀಕಾಂತ್‌.

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.