ಜಿಹಾದಿ ದಾಳಿ ಸಂಚು ವಿಫಲ; ಬೆಂಗಳೂರಿನ ಮೂವರು ಸೇರಿ 8 ಆರೋಪಿಗಳ ಬಂಧನ
ಆರೋಪಿಗಳನ್ನು ಚೆನ್ನೈ ಕೋರ್ಟ್ ಗೆ ಹಾಜರುಪಡಿಸಿದ್ದು, ಎಂಟು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ
Team Udayavani, Jan 9, 2020, 11:58 AM IST
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ದಾಳಿ ನಡೆಸುವ ಸಂಚನ್ನು ಇತ್ತೀಚೆಗೆ ತಮಿಳುನಾಡು ಪೊಲೀಸರು ವಿಫಲಗೊಳಿಸಿದ್ದು, ಪ್ರಕರಣದಲ್ಲಿ ತಮಿಳುನಾಡಿನ ಐವರು ಹಾಗೂ ಬೆಂಗಳೂರಿನ ಮೂವರು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.
ಆರೋಪಿಗಳನ್ನು ಚೆನ್ನೈ ಕೋರ್ಟ್ ಗೆ ಹಾಜರುಪಡಿಸಿದ್ದು, ಎಂಟು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ ಎಂದು ವರದಿ ವಿವರಿಸಿದೆ.
ಬೆಂಗಳೂರಿನ ಮೊಹಮ್ಮದ್ ಹನೀಫ್ ಖಾನ್ (29ವರ್ಷ), ಇಮ್ರಾನ್ ಖಾನ್ (32ವರ್ಷ) ಮತ್ತು ಮೊಹಮ್ಮದ್ ಝೈದ್ (24ವರ್ಷ)ನನ್ನು ಬಂಧಿಸಿರುವುದಾಗಿ ತಮಿಳುನಾಡು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲಾ ಜಿಹಾದಿ ದಾಳಿ ನಡೆಸಲು ಸಂಚು ರೂಪಿಸಿದ್ದು ಕರ್ನಾಟಕ ಪೊಲೀಸರು ಹಾಗೂ ಇತರ ಗುಪ್ತಚರ ಇಲಾಖೆ ಸಹಾಯದೊಂದಿಗೆ ತಮಿಳುನಾಡು ಕ್ಯೂ ಬ್ರ್ಯಾಂಚ್ ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಮೂಲಭೂತವಾದಿ ಜಿಹಾದಿಗಳು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಂಚು ರೂಪಿಸಿರುವ ಬಗ್ಗೆ ತಮಿಳುನಾಡು ಗುಪ್ತಚರ ವಿಭಾಗ ಮಾಹಿತಿಯನ್ನು ಪಡೆದಿತ್ತು. ಈ ಮಾಹಿತಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ಎಂಟು ಆರೋಪಿಗಳನ್ನು ಸೆರೆ ಹಿಡಿಯಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?