ಕಾಂಗ್ರೆಸ್ನಿಂದ ಪೌರತ್ವ ಕಾಯ್ದೆ ಗೊಂದಲ ಸೃಷ್ಟಿ
ಕಾಯಿದೆ ತಿದ್ದುಪಡಿಯಿಂದ ಯಾರಿಗೂ ಇಲ್ಲತೊಂದರೆಬಿಜೆಪಿಯಿಂದ ಮನೆ ಮನೆಗೆ ಜಾಗೃತಿ
Team Udayavani, Jan 9, 2020, 1:41 PM IST
ಅಕ್ಕಿಆಲೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ವಿನಾಕಾರಣ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ತಾಲೂಕು ಬಿಜೆಪಿ ಸಂಚಾಲಕ ಡಾ| ಸುನೀಲ ಹಿರೇಮಠ ಹೇಳಿದರು.
ತಿಳವಳ್ಳಿ ಗ್ರಾಮದಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಯ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಯಿದೆಯ ತಿದ್ದುಪಡಿಯಿಂದಾಗಿ ದೇಶದ ಯಾರೊಬ್ಬರಿಗೂ ತೊಂದರೆ ಯಾಗುವುದಿಲ್ಲ. ಈ ಕುರಿತು ಕಾಂಗ್ರೆಸ್ ವಿನಾಕಾರಣ ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ. ಜನರ ದಿಕ್ಕು ತಪ್ಪಿಸಿ ತನ್ನ ರಾಜಕೀಯದ ಬೆಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರ ಮಾತಿಗೆ ಯಾರೂ ಕಿವಿಗೊಡಬಾರದು. ಈ ಹಿಂದೆಯೂ ದೇಶದ ಪ್ರಧಾನಿಗಳಾಗಿದ್ದ ಜವಾಹರ್ ಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರು ಈ ಕಾಯ್ದೆ ಜಾರಿಗೆ ತಂದಿದ್ದರು. ಆದರೆ, ಯಾವುದೇ ರೀತಿಯ ವಿರೋಧವೂ ವ್ಯಕ್ತವಾಗಿರಲಿಲ್ಲ. ದೇಶದಲ್ಲಿ ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವ ಉದ್ದೇಶದಿಂದ ಬಿಜೆಪಿ ಮನೆ-ಮನೆಗೆ ತೆರಳಿ ಕಾಯಿದೆ ಕುರಿತು ಜಾಗೃತಿ ಮೂಡಿಸುತ್ತಿದೆ ಎಂದರು.
ಮುಖಂಡರಾದ ಶಿವಲಿಂಗಪ್ಪ ತಲ್ಲೂರು ಮಾತನಾಡಿ, ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಅಲ್ಪಸಂಖ್ಯಾತರಲ್ಲಿ ವಾಸ್ತವ ಸಂಗತಿಗಳನ್ನು ತಿರುಚಿ ಹೇಳುತ್ತಿದೆ. ಕಾಯಿದೆ ದೇಶದ ವಾಸಿಗಳಿಗೆ
ಯಾವುದೇ ರೀತಿಯಲ್ಲಿ ತೊಂದರೆ ಮಾಡದು ಎಂದರು.
ನಿಂಗಪ್ಪ ಗೊಬ್ಬೇರ, ಅಪ್ಪು ಶೆಟ್ಟರ, ಪರಶುರಾಮ ಗೌಳಿ,
ಭರಮಣ್ಣ ಕುರುಬರ, ಶಿವಯೋಗಿ ವಡೆಯರ, ದಯಾನಂದ ಹಾವೇರಿ, ಮಾರುತಿ ಈಳಗೇರ, ಕುಮಾರ ಲಕ್ಮೋಜಿ, ಸುನೀಲ ಬಾರ್ಕಿ, ಗಿರೀಶ ಸಜ್ಜನಶೆಟ್ಟರ, ಮಧುಕರ ಹುನಗುಂದ, ನಿಂಬಣ್ಣ ಜಾಡರ, ಚೌಡಪ್ಪ ಶಿರಿಹಳ್ಳಿ, ಪರಶುರಾಮ ಸವಣೂರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ