ನಿರ್ಭಯಾ ಕೇಸ್; ಮರಣದಂಡನೆ ವಿರುದ್ಧ ಸುಪ್ರೀಂಗೆ ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಅಪರಾಧಿ ವಿನಯ್
ಡೆತ್ ವಾರಂಟ್ ಜಾರಿಗೊಳಿಸಿದ 14 ದಿನದ ನಂತರ ಶಿಕ್ಷೆ ಜಾರಿಯಾಗಲಿದೆ.
Team Udayavani, Jan 9, 2020, 1:42 PM IST
ನವದೆಹಲಿ:2012ರ ದಿಲ್ಲಿ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾಗಿರುವ ವಿನಯ್ ಕುಮಾರ್ ಶರ್ಮಾ ಗುರುವಾರ ಸುಪ್ರೀಂಕೋರ್ಟ್ ನಲ್ಲಿ ಕ್ಯುರೇಟಿವ್(ಲೋಪ ಸರಿಪಡಿಸಲು ಸಲ್ಲಿಸುವ ಅರ್ಜಿ) ಅರ್ಜಿ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 7ರಂದು ದಿಲ್ಲಿ ಪಟಿಯಾಲಾ ಹೌಸ್ ಕೋರ್ಟ್ ಹೆಚ್ಚುವರಿ ಸೆಷನ್ಸ್ ಜಡ್ಜ್ ಸತೀಶ್ ಕುಮಾ್ ಆರೋರಾ ಅವರು ನಾಲ್ವರು ಅಪರಾಧಿಗಳಾದ ವಿನಯ್, ಪವನ್, ಅಕ್ಷಯ್ ಮತ್ತು ಮಖೇಶ್ ಸಿಂಗ್ ಗೆ ಜನವರಿ 22ರ ಬೆಳಗ್ಗೆ 7ಗಂಟೆಗೆ ಗಲ್ಲಿಗೇರಿಸುವಂತೆ ಡೆತ್ ವಾರಂಟ್ ಹೊರಡಿಸಿದ್ದರು.
ವಿನಯ್ ಸೇರಿದಂತೆ ಪವನ್, ಅಕ್ಷಯ್ ಠಾಕೂರ್ ಹಾಗೂ ಮಹೇಶ್ ಸಿಂಗ್ ಕೂಡಾ ಮರಣದಂಡನೆ ಶಿಕ್ಷೆ ಎದುರು ನೋಡುತ್ತಿದ್ದಾರೆ. ಕೋರ್ಟ್ ಇದೀಗ ನಾಲ್ವರ ಹೆಸರಿನಲ್ಲಿ ಬ್ಲ್ಯಾಕ್ ವಾರಂಟ್ ಹೊರಡಿಸಿದೆ. ಈ ಸಂದರ್ಭದಲ್ಲಿ ಡೆತ್ (ಬ್ಲ್ಯಾಕ್) ವಾರಂಟ್ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಕ್ಯುರೇಟಿವ್ ಅರ್ಜಿ ಸಲ್ಲಿಸಲು ಪಟಿಯಾಲಾ ಹೌಸ್ ಕೋರ್ಟ್ ಎರಡು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೇ ರಾಷ್ಟ್ರಪತಿ ಬಳಿ ಇನ್ನೊಮ್ಮೆ ಕ್ಷಮಾದಾನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಅಥವಾ ರಾಷ್ಟ್ರಪತಿಗಳು ಅರ್ಜಿ ಸ್ವೀಕರಿಸಿದರೆ ಡೆತ್ ವಾರಂಟ್ ಗೆ ತಡೆ ಸಿಗಲಿದೆ.
ಡೆತ್ ವಾರಂಟ್ ಜಾರಿ ಸುದ್ದಿ ಕೇಳಿ ನಾಲ್ವರು ತಿಹಾರ್ ಜೈಲಿನೊಳಗೆ ಕುಸಿದು ಬಿದ್ದಿರುವ ಘಟನೆ ನಡೆದಿತ್ತು. ಡೆತ್ ವಾರಂಟ್ ಜಾರಿಗೊಳಿಸಿದ 14 ದಿನದ ನಂತರ ಶಿಕ್ಷೆ ಜಾರಿಯಾಗಲಿದೆ. ಕಾನೂನಿನ ಪ್ರಕಾರ ಈ ಕಾಲಾವಕಾಶದಲ್ಲಿ ಅಪರಾಧಿಗಳು ತಮಗಿರುವ ಕೊನೆಯ ಕಾನೂನು ಅವಕಾಶ ಬಳಸಿಕೊಳ್ಳಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ