ಸಿಎಎ ಪ್ರತಿಭಟನೆ: ಹೈದರಾಬಾದ್ ನಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಡಿಮಾಂಡ್!
Team Udayavani, Jan 9, 2020, 11:15 PM IST
ಹೈದರಾಬಾದ್: ಪೌರತ್ವ ತಿದ್ದುಪಡಿ ಕಾಯ್ದೆ, ಎನ್.ಆರ್.ಸಿ ಹಾಗೂ ಎನ್.ಪಿ.ಆರ್. ವಿಚಾರಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪರ-ವಿರೋಧ ಚರ್ಚೆ ಹಾಗೂ ಪರ-ವಿರೋಧ ಮೆರವಣಿಗೆಗಳು ನಡೆಯುತ್ತಿವೆ. ವಿಶೇಷವೆಂದರೆ ಪೌರತ್ವ ಕಾಯ್ದೆಯನ್ನು ವಿರೋಧಿಸುವವರು ಮತ್ತು ಸಮರ್ಥಿಸುವವರೂ ಸಹ ತಾವು ನಡೆಸುವ ಮೆರವಣಿಗೆಗಳ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಪ್ರದರ್ಶಿಸುತ್ತಿದ್ದಾರೆ.
ಇದೀಗ ಮುಸ್ಲಿಂ ಸಮುದಾಯ ಬಹುಸಂಖ್ಯೆಯಲ್ಲಿರುವ ಹೈದರಾಬಾದ್ ನಲ್ಲಿ ರಾಷ್ಟ್ರಧ್ವಜಕ್ಕೆ ವಿಪರೀತ ಬೇಡಿಕೆ ಬಂದಿದೆ. ಎಲ್ಲಿಯವರೆಗೆ ಎಂದರೆ ರಾಷ್ಟ್ರಧ್ವಜವನ್ನು ತಯಾರಿಸುವವರಿಗೆ ಈ ಬೇಡಿಕೆಯನ್ನು ಪೂರೈಸಲಾಗರಾದಷ್ಟು ಮಟ್ಟಿಗೆ!
ಅಸಾದುದ್ದೀನ್ ಒವೈಸಿ ಅವರ ಎ.ಐ.ಎಂ.ಐ.ಎಂ. ಪಕ್ಷದ ಬಿಗಿ ಹಿಡಿತವಿರುವ ಹೈದರಾಬಾದ್ ನಗರದಲ್ಲಿ ಸಿ.ಎ.ಎ., ಎನ್.ಆರ್.ಸಿ. ಮತ್ತು ಎನ್.ಪಿ.ಆರ್.ಗಳನ್ನು ವಿರೋಧಿಸಿ ಶುಕ್ರವಾರದಂದು ಬೃಹತ್ ತಿರಂಗಾ ಜಾಥಾ ನಡೆಯಲಿದೆ. ಈ ಜಾಥಾಗೆ ಅಗತ್ಯವಿರುವ ರಾಷ್ಟ್ರಧ್ವಜಗಳನ್ನು ತಯಾರಿಸಲು ಧ್ವಜ ತಯಾರಕರು ಹಗಲಿರುಳೂ ಕಾರ್ಯನಿರತರಾಗಿದ್ದಾರೆ.
ನಾಳೆ ನಡೆಯಲಿರುವ ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಪ್ರತಿಭಟನಾಕಾರರು 25 ಅಡಿ ಅಗಲದ ಮತ್ತು 12 ಅಡಿ ಉದ್ದವಿರುವ ಈ ಬೃಹತ್ ರಾಷ್ಟ್ರಧ್ವಜವನ್ನು ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಈ ಬೃಹತ್ ಧ್ವಜಕ್ಕೆ ಅಂತಿಮ ರೂಪು ಕೊಡುವ ಕಾರ್ಯ ಇದೀಗ ಭರದಿಂದ ಸಾಗುತ್ತಿದೆ.
ಒಟ್ಟಿನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪೌರತ್ವ ವಿಚಾರದ ಮೇಲಿನ ಪರ-ವಿರೋಧ ಮೆರವಣಿಗೆ, ಕಾರ್ಯಕ್ರಮಗಳಿಂದಾಗಿ ದೇಶದಲ್ಲಿ ರಾಷ್ಟ್ರಧ್ವಜಗಳನ್ನು ಸಿದ್ಧಪಡಿಸುವವರಿಗೆ ಭರ್ಜರಿ ಕೆಲಸ ಲಭಿಸಿರುವುದಂತೂ ಸುಳ್ಳಲ್ಲ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು