ಮಾಲಿನ್ಯದ ಬಗ್ಗೆ ಚರ್ಚೆಯಾಗಲಿ ದಿಲ್ಲಿ ಚುನಾವಣೆ


Team Udayavani, Jan 10, 2020, 5:17 AM IST

42

ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆಗೆ ಫೆ.8ರಂದು ಚುನಾವಣೆ ನಡೆಯಲಿದೆ. ಹಲವು ಕಾರಣಗಳಿಗಾಗಿ ದಿಲ್ಲಿಯ ಚುನಾವಣೆ ಗಮನಾರ್ಹವಾಗಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ ಪಾಲಿಗೆ ಇದು ಅಕ್ಷರಶಃ ಅಗ್ನಿಪರೀಕ್ಷೆಯಂಥ ಚುನಾವಣೆ. 2015ರಲ್ಲಿ 70ರ ಪೈಕಿ 67 ಸ್ಥಾನಗಳನ್ನು ಗೆಲ್ಲುವ ಮೂಲಕ ಅಚ್ಚರಿ ಮೂಡಿಸಿದ್ದ ಆಪ್‌ ತಾನು “ಒನ್‌ ಎಲೆಕ್ಷನ್‌ ವಂಡರ್‌’ ಅಲ್ಲ ಎಂಬುದನ್ನು ಸಾಬೀತುಪಡಿಸಬೇಕಾಗಿದೆ. ಇದೇ ವೇಳೆ ಬಿಜೆಪಿಯೂ ದಿಲ್ಲಿಯಲ್ಲಿ ಕಠಿನ ಸವಾಲನ್ನು ಎದುರಿಸುತ್ತಿದೆ.

ಬಿಜೆಪಿ ದಿಲ್ಲಿಯ ಅಧಿಕಾರ ಗದ್ದುಗೆಯಿಂದ ದೂರವಾಗಿ ಎರಡು ದಶಕವೇ ಕಳೆಯಿತು. ಮೋದಿಯ ಪ್ರಖರ ಅಲೆಯ ಹೊರತಾಗಿಯೂ ರಾಜಧಾನಿಯಿರುವ ರಾಜ್ಯದಲ್ಲೇ ಅಧಿಕಾರ ಹಿಡಿಯಲು ಸಾಧ್ಯವಾಗುತ್ತಿಲ್ಲ ಎನ್ನುವುದು ಬಿಜೆಪಿ ಪಾಲಿಗೆ ಬಹಳ ಮುಜುಗರ ತರುವ ವಿಚಾರ. ಕಾಂಗ್ರೆಸ್‌ ಕೂಡ ಚುನಾವಣಾ ಕಣದಲ್ಲಿದೆ. ಆದರೆ ಅದರ ಉಪಸ್ಥಿತಿ ಭಾರೀ ಪ್ರಮಾಣದ ಪರಿಣಾಮ ಉಂಟು ಮಾಡಬಹುದು ಎಂಬ ವಿಶ್ವಾಸ ಸ್ವತಹ ಕಾಂಗ್ರೆಸಿಗರಿಗೇ ಇಲ್ಲ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಆಪ್‌ನ್ನು ಮೂರನೇ ಸ್ಥಾನಕ್ಕೆ ತಳ್ಳಿತ್ತು. ಈ ಒಂದು ಅಂಶ ಕಾಂಗ್ರೆಸಿಗರಲ್ಲಿ ಚುನಾವಣೆ ಬಗ್ಗೆ ಕೆಲವು ನಿರೀಕ್ಷೆಗಳನ್ನು ಮೂಡಿಸಿದೆ. ಆದರೂ ಇನ್ನೂ ಇಲ್ಲಿ ಕಾಂಗ್ರೆಸಿನ ಒಳಜಗಳವೇ ಮುಗಿದಿಲ್ಲ. ಅಲ್ಲದೆ ಪಕ್ಷವನ್ನು ಚುನಾವಣೆಯಲ್ಲಿ ಮುನ್ನಡೆಸುವುದು ಯಾರ ಎನ್ನುವುದು ಕೂಡ ಇತ್ಯರ್ಥವಾಗಿಲ್ಲ. ಈ ಎಲ್ಲ ಇಲ್ಲಗಳ ನಡುವೆಯೂ ಕಾಂಗ್ರೆಸ್‌ ಚುನಾವಣೆಯಲ್ಲಿ ಏನಾದರೂ ಪರಿಣಾಮ ಬೀರಲು ಶಕ್ತವಾದರೆ ಅದರಿಂದ ಹಾನಿಯಾಗುವುದು ಆಪ್‌ಗೆ. ಏಕೆಂದರೆ ಈ ಎರಡೂ ಪಕ್ಷಗಳು ವೋಟ್‌ಬ್ಯಾಂಕ್‌ ಒಂದೇ.

ದಿಲ್ಲಿ ಚುನಾವಣೆ ಉಳಿದ ರಾಜ್ಯಗಳಿಗಿಂತ ಭಿನ್ನವಾಗಿದೆ. ಇದು ಸಂಪೂರ್ಣವಾಗಿ ನಗರ ಪ್ರದೇಶ. ಒಂದು ರೀತಿಯಲ್ಲಿ ನಗರಪಾಲಿಕೆಯ ಚುನಾವಣೆ ನಡೆದಂತೆ. ಉಳಿದ ರಾಜ್ಯಗಳಂತೆ ಇಲ್ಲಿ ರೈತರ ಸಮಸ್ಯೆ, ಗ್ರಾಮೀಣ ಭಾಗದ ಅಭಿವೃದ್ಧಿ ಇತ್ಯಾದಿ ವಿಚಾರಗಳು ಮುಖ್ಯವಾಗುವುದಿಲ್ಲ. ಹಾಗೆಂದು ದಿಲ್ಲಿಯಲ್ಲಿ ಸಮಸ್ಯೆಗಳು ಇಲ್ಲ ಎಂದಲ್ಲ. ಮೈಲುದ್ದದ ಟ್ರಾಫಿಕ್‌, ಮಹಿಳೆಯರ ಸುರಕ್ಷತೆ, ತ್ಯಾಜ್ಯ ನಿರ್ವಹಣೆ ಹೀಗೆ ನಗರಗಳು ಎದುರಿಸುತ್ತಿರುವ ಹಲವಾರು ಸಮಸ್ಯೆಗಳು ದಿಲ್ಲಿಯಲ್ಲೂ ಇವೆ.

ಇವೆಲ್ಲಕ್ಕಿಂತ ಮುಖ್ಯವಾಗಿರುವುದು ದಿಲ್ಲಿಯ ವಾಯುಮಾಲಿನ್ಯ ಸಮಸ್ಯೆ. ಪ್ರತಿ ವರ್ಷ ಮಳೆಗಾಲ ಮುಗಿದು ಚಳಿಗಾಲ ಕಾಲಿಡಲು ಸನ್ನಾಹವಾಗುತ್ತಿರುವ ಹೊತ್ತಿನಲ್ಲಿ ದಿಲ್ಲಿ ಅಕ್ಷರಶಃ ಗ್ಯಾಸ್‌ ಚೇಂಬರ್‌ ಆಗಿ ಬದಲಾಗುತ್ತದೆ. ವಾಯುಮಾಲಿನ್ಯ ತಾರಕಕ್ಕೇರಿ ಜನರು ಉಸಿರಾಡಲು ಕಷ್ಟಪಡಬೇಕಾಗುತ್ತದೆ. ಶುದ್ಧ ಗಾಳಿ ಎನ್ನುವುದು ದಿಲ್ಲಿ ನಿವಾಸಿಗಳ ಪಾಲಿಗೆ ಮರೀಚಿಕೆಯಾಗಿ ಬಹಳ ಸಮಯವಾಯಿತು. ಪಂಜಾಬ್‌ ಮತ್ತು ಹರ್ಯಾಣದ ರೈತರು ಕೊಯ್ಲು ಮುಗಿದ ಬಳಿಕ ಹೊಲಕ್ಕೆ ಬೆಂಕಿ ಹಾಕಿ ಹುಲ್ಲು ಸುಡುವುದರಿಂದ ದಿಲ್ಲಿಯ ವಾತಾವರಣ ಹದಗೆಡುತ್ತದೆ ಎನ್ನುವ ಆರೋಪ ಸರಿಯಾಗಿದ್ದರೂ ಇದರ ಜೊತೆಗೆ ವಾಯುಮಾಲಿನ್ಯ ಹೆಚ್ಚಳಕ್ಕೆ ದಿಲ್ಲಿಯ ಜನರ ಕೊಡುಗೆಯೂ ಇದೆ ಎನ್ನುವುದು ವಾಸ್ತವ.

ಮುಖ್ಯವಾಗಿ ದಿಲ್ಲಿಯ ನಿಯಂತ್ರಣಕ್ಕೆ ಸಿಗದ ವಾಹನಗಳ ಸಂಖ್ಯೆ, ಮಾಲಿನ್ಯದ ಎಲ್ಲ ಮಾನದಂಡಗಳನ್ನು ದಾಟಿರುವ ನರ್ಮದಾ ನದಿ ಈ ಎಲ್ಲ ಸಮಸ್ಯೆಗಳತ್ತವೂ ರಾಜಕೀಯ ಪಕ್ಷಗಳು ಗಮನ ಹರಿಸಬೇಕಾದ ಅಗತ್ಯವಿದೆ. ಉಚಿತ ವಿದ್ಯುತ್‌, ನೀರು, ಪ್ರಯಾಣ ಸೌಲಭ್ಯ ಇವೆಲ್ಲ ತತ್‌ಕ್ಷಣಕ್ಕೆ ಒಂದಿಷ್ಟು ಮತಗಳನ್ನು ಗಳಿಸಿಕೊಡುವ ಮಾರ್ಗಗಳೇ ಹೊರತು ಒಂದು ರಾಜ್ಯವನ್ನು ದೂರಗಾಮಿ ನೆಲೆಯಲ್ಲಿ ಸುಸ್ಥಿರವಾಗಿ ಕಟ್ಟುವ ಕ್ರಮವಲ್ಲ. ದುರದೃಷ್ಟವೆಂದರೆ ಮೂರೂ ಪಕ್ಷಗಳು ಇಷ್ಟರ ತನಕ ವಾಯುಮಾಲಿನ್ಯವಾಗಲಿ, ವಾಹನಗಳ ಸಂಖ್ಯೆಯನ್ನು ನಿಯಂತ್ರಿಸುವ ಬಗ್ಗೆಯಾಗಲಿ ಗಂಭೀರವಾದ ಮಾತುಗಳನ್ನು ಆಡುತ್ತಿಲ್ಲ. ಎಲ್ಲ ಪಕ್ಷಗಳು ಇನ್ನೂ ಅದೇ ಪುಕ್ಕಟೆ ಕೊಡುಗೆಗಳ ಗುಂಗಿನಲ್ಲೇ ಇವೆ. ಚುನಾವಣೆಯಲ್ಲಿ ನಿಜವಾಗಿ ಚರ್ಚೆಯಾಗಬೇಕಿರುವುದು ಜನರ ಭವಿಷ್ಯವನ್ನು ಉಜ್ವಲಗೊಳಿಸುವ ವಿಚಾರಗಳ ಕುರಿತಾಗಿಯೇ ಹೊರತು ತತ್‌ಕ್ಷಣಕ್ಕೆ ಸಿಗುವ ಸೌಲಭ್ಯಗಳ ಕುರಿತಾಗಿ ಅಲ್ಲ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.