ಪ್ರಮುಖ ಸ್ಥಳಗಳಲ್ಲಿ ಬಸ್ ಶೆಲ್ಲ ರ್ ನಿರ್ಮಿಸಿ
Team Udayavani, Jan 10, 2020, 1:19 PM IST
ಚಾಮರಾಜನಗರ: ಜಿಲ್ಲಾ ಕೇಂದ್ರವಾದ ಚಾಮರಾಜನಗರದ ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಶೆಲ್ಟರ್ ನಿರ್ಮಿಸಬೇಕು ಎಂದು ಡಿ. ದೇವರಾಜ್ ಅರಸ್ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಂ.ನಾಗಬಸವಣ್ಣ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಡಿ. ದೇವರಾಜ್ ಅರಸ್ ಹಿಂದುಳಿದ ವರ್ಗಗಳ ವೇದಿಕೆ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಿಂದ ಬರುವ ಜನರು ಸಂತೇಮರಹಳ್ಳಿ ಬಸ್ನಿಲ್ದಾಣ, ಗುಂಡ್ಲುಪೇಟೆ ವೃತ್ತ, ಎಲ್ಐಸಿ ಕಚೇರಿ ಎದುರು, ಜಿಲ್ಲಾ ಸರ್ಕಾರಿ ಆಸ್ಪತ್ರೆ ಎದುರು ಹಾಗೂ ಲಾರಿ ನಿಲ್ದಾಣ ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಪ್ರಯಾಣಿಕರು ಬಿಸಿಲು, ಮಳೆ, ಗಾಳಿಯಲ್ಲಿ ಗಂಟೆಗಟ್ಟಲೇ ನಿಂತು ಬಸ್ ಏರಬೇಕಿದೆ. ಇವರ ಅನುಕೂಲಕ್ಕಾಗಿ ಜಿಲ್ಲಾಡಳಿತ, ನಗರಸಭೆ ಬಸ್ ಶೆಲ್ಟರ್ ನಿರ್ಮಿಸಬೇಕು ಎಂದರು.
ಗ್ರಾಪಂನಲ್ಲಿ ಆಧಾರ್ ಕೇಂದ್ರ ತೆರೆಯಿರಿ: ವೇದಿಕೆಯ ಗೌರವ ಅಧ್ಯಕ್ಷ ಪಿ. ಲಿಂಗರಾಜು ಮಾತನಾಡಿ, ಗ್ರಾಮೀಣ ಜನತೆ ಚಾ.ನಗರದ ಆಧಾರ್ ಕೇಂದ್ರಕ್ಕೆ ಮಕ್ಕಳ ಸಮೇತವಾಗಿ ಮುಂಜಾನೆಗೆ ಬಂದು ಕಾದುಕುಳಿತರೂ ಕೇವಲ 20 ಮಂದಿಗೆ ಮಾತ್ರ ಆಧಾರ್ ಕಾರ್ಡ್ ಮಾಡಲಾಗುತ್ತಿದೆ. ಇದರಿಂದ ಪ್ರತಿ ಗ್ರಾಪಂನಲ್ಲೂ ಆಧಾರ್ ಕೇಂದ್ರ ತೆರೆದು ಸಾರ್ವಜನಕರಿಗೆ ಆಧಾರ್ ಸೇವೆ ದೊರೆಯುವಂತೆ ಮಾಡಬೇಕು ಎಂದರು. ಸಭೆಯಲ್ಲಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ರೇವಣ್ಣ, ಸಂಘಟನಾ ಕಾರ್ಯದರ್ಶಿ ಕೆ.ನೀಲಶೇಖರ್, ಕೃಷ್ಣರಾಜು, ಸಂಚಾಲಕ ರಂಗಸ್ವಾಮಿ, ನಟರಾಜು, ಗೌರವ ಸಲಹೆಗಾರ ಅಬ್ಟಾಸ್, ಶಂಕರಶೆಟ್ಟಿ, ಅಲ್ತಾಫ್, ಕಮರಶೆಟ್ಟಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ