ಹಿರಿಯರಿಗೆ ಮಣೆ‌, ಕಿರಿಯರಿಗೆ ಮನ್ನಣೆ

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ

Team Udayavani, Jan 11, 2020, 7:05 AM IST

Raghavendra-Rajakumar

2018ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಚಿತ್ರ ಪ್ರಶಸ್ತಿ ಶುಕ್ರವಾರ (ಜ. 10) ಘೋಷಣೆಯಾಗಿದೆ. ಹಿರಿಯ ನಿರ್ದೇಶಕ ಜೋ ಸೈಮನ್‌ ನೇತೃತ್ವದ ಆಯ್ಕೆ ಸಮಿತಿ ಸುಮಾರು 162 ಚಿತ್ರಗಳನ್ನ ವೀಕ್ಷಿಸಿ, ಅಂತಿಮವಾಗಿ ಚಿತ್ರಗಳನ್ನು ಪ್ರಶಸ್ತಿ ಪಟ್ಟಿಗೆ ಆಯ್ಕೆ ಮಾಡಿದೆ. ಇದರ ಜೊತೆಗೆ ಹಿರಿಯ ನಿರ್ಮಾಪಕ ಬಸಂತ ಕುಮಾರ್‌ ಪಾಟೀಲ್‌ ನೇತೃತ್ವದ ಆಯ್ಕೆ ಸಮಿತಿ ಜೀವಮಾನ ಸಾಧನೆಗಳ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಯಡಿಯೂರಪ್ಪ ಪ್ರಶಸ್ತಿ ಪ್ರಕಟಿಸಿದ್ದಾರೆ. ಈ ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಪುರಸ್ಕೃತರು “ಉದಯವಾಣಿ’ ಜೊತೆ ತಮ್ಮ ಅಭಿಪ್ರಾಯಗಳ ಹಂಚಿಕೊಂಡಿದ್ದಾರೆ.

“ನಾನು “ಅಮ್ಮನ ಮನೆ’ ಚಿತ್ರದಲ್ಲಿ ಮತ್ತೆ ಬಣ್ಣ ಹಚ್ಚುತ್ತೇನೆ ಅಂತಾನೇ ಅಂದುಕೊಂಡಿರಲಿಲ್ಲ. ಈಗ ನಿರೀಕ್ಷಿಸದೆಯೇ ಅದಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಕೂಡ ಬಂದಿದೆ. ಇಷ್ಟು ವರ್ಷಗಳಲ್ಲಿ ನನ್ನನ್ನು ಹೊರತುಪಡಿಸಿ, ನಮ್ಮ ಕುಟುಂಬದಲ್ಲಿ ಎಲ್ಲರಿಗೂ ಬೇರೆ ಬೇರೆ ಪ್ರಶಸ್ತಿಗಳು ಬಂದಿದ್ದವು. ಈಗ ನನಗೂ ಪ್ರಶಸ್ತಿ ಬರುವ ಮೂಲಕ ಇಡೀ ಕುಟುಂಬದಲ್ಲಿ ಎಲ್ಲರಿಗೂ ಪ್ರಶಸ್ತಿ ಬಂದಂತಾಗಿದೆ. ಅನಿರೀಕ್ಷಿತವಾಗಿ ಇಂಥದ್ದೊಂದು ಪ್ರಶಸ್ತಿ ಹುಡುಕಿಕೊಂಡು ಬಂದಿರುವುದಕ್ಕೆ ತುಂಬ ಖುಷಿಯಾಗುತ್ತಿದೆ.’
-ರಾಘವೇಂದ್ರ ರಾಜಕುಮಾರ್‌, ನಟ

“ನನ್ನ ವೃತ್ತಿ ಜೀವನದಲ್ಲಿ ಇಲ್ಲಿಯವರೆಗೆ ಮಾಡಿದ ಚಿತ್ರಗಳಲ್ಲಿ ಅತ್ಯುತ್ತಮ ಎನಿಸಿದ, ನನಗೆ ವೈಯಕ್ತಿಕವಾಗಿ ಅತಿ ಖುಷಿಕೊಟ್ಟ ಸಿನಿಮಾಗಳಲ್ಲಿ “ಆ ಕರಾಳ ರಾತ್ರಿ’ ಕೂಡ ಒಂದು. ಜನ ಇಷ್ಟಪಟ್ಟು ಗೆಲ್ಲಿಸಿದ ಸಿನಿಮಾಕ್ಕೆ ಈಗ ರಾಜ್ಯ ಪ್ರಶಸ್ತಿ ಬಂದಿರುವುದು ಖುಷಿಯನ್ನು ಡಬಲ್‌ ಮಾಡಿದೆ. ಈ ಪ್ರಶಸ್ತಿ ನನ್ನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಸಿನಿಮಾವನ್ನು ಪ್ರಶಸ್ತಿಗೆ ಗುರುತಿಸಿದ ಎಲ್ಲರಿಗೂ ಧನ್ಯವಾದಗಳು.’
-ದಯಾಳ್‌ ಪದ್ಮನಾಭನ್‌, “ಆ ಕರಾಳ ರಾತ್ರಿ’ ಚಿತ್ರದ ನಿರ್ದೇಶಕ

“ಸಾಮಾನ್ಯ ಪ್ರೇಕ್ಷಕನಿಗೆ ಮನರಂಜನೆ ಜೊತೆಗೊಂದು ಮೆಸೇಜ್‌ ಸಿಗಬೇಕು ಎಂಬುದಷ್ಟೆ ನಮ್ಮ “ಒಂದಲ್ಲಾ ಎರಡಲ್ಲಾ’ ಚಿತ್ರದ ಆಶಯವಾಗಿತ್ತು. ಅದರಂತೆ ಸಿನಿಮಾವನ್ನು ಜನ ಸ್ವೀಕರಿಸಿ, ಗೆಲ್ಲಿಸಿದರು. ಜನ ಇಷ್ಟಪಟ್ಟ ಮೇಲೆ ಅದು ಪ್ರಶಸ್ತಿಗಳಿಗೆ ಕರೆದುಕೊಂಡು ಹೋಗುತ್ತಿದೆ. ಅನಿರೀಕ್ಷಿತವಾಗಿ ಬಂದ ಪ್ರಶಸ್ತಿಯಿಂದ ಖುಷಿಯಾಗುತ್ತಿದೆ. ಈ ಗೆಲುವು ಇಡೀ ತಂಡಕ್ಕೆ ಸೇರಬೇಕು. ಈ ಪ್ರಶಸ್ತಿ ಮುಂದೆ ಇಂಥ ಇನ್ನಷ್ಟು ಚಿತ್ರಗಳನ್ನು ಮಾಡಲು ಉತ್ಸಾಹ ಕೊಟ್ಟಂತಿದೆ.’
-ಡಿ. ಸತ್ಯ ಪ್ರಕಾಶ್‌, “ಒಂದಲ್ಲಾ ಎರಡಲ್ಲಾ’ ಚಿತ್ರದ ನಿರ್ದೇಶಕ

“ಮೂಕಜ್ಜಿಯ ಕನಸುಗಳು’ ಕನ್ನಡಿಗರಿಗೆ ಚಿರಪರಿಚಿತ ಜನಪ್ರಿಯ ಕೃತಿ. ಅದು ರಚನೆಯಾಗಿ 50 ವರ್ಷಗಳ ನಂತರ ಅದನ್ನು ಚಿತ್ರರೂಪದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದೆವು. ಚಿತ್ರ ಇತ್ತೀಚೆಗಷ್ಟೆ ಬಿಡುಗಡೆಯಾಗಿ ಯಶಸ್ವಿ 50 ದಿನಗಳ ಪ್ರದರ್ಶನ ಕಾಣುತ್ತಿರುವಾಗಲೆ, ಚಿತ್ರಕಥೆಗೆ ಪ್ರಶಸ್ತಿ ಬಂದಿದೆ. ಇದು ನಿಜವಾಗಿಯೂ ಕಾರಂತರಿಗೆ ಸಂದ ಗೌರವ. ಇನ್ನು ವೈಯಕ್ತಿಕವಾಗಿ ನನ್ನ ಕೆಲಸವನ್ನು ಗುರುತಿಸಿ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಖುಷಿ ತಂದಿದೆ.’
-ಪಿ. ಶೇಷಾದ್ರಿ, ಹಿರಿಯ ನಿರ್ದೇಶಕ

ಟಾಪ್ ನ್ಯೂಸ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.