JNU ಹಿಂಸಾಚಾರ: ಐಶೆ ಘೋಷ್ ಸಹಿತ ಎಂಟು ಮಂದಿ ಶಂಕಿತರ ಪಟ್ಟಿ ಬಿಡುಗಡೆ


Team Udayavani, Jan 10, 2020, 8:19 PM IST

Joy-DCP-10-1

ನವದೆಹಲಿ: ಕಳೆದ ಭಾನುವಾರ ಜವಹರಲಾಲ್ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಂಟು ಮಂದಿ ಶಂಕಿತರ ಪಟ್ಟಿಯನ್ನು ಇಂದು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ. ರವಿವಾರ ಮಧ್ಯಾಹ್ನ ಪೆರಿಯಾರ್ ಹಾಸ್ಟೆಲ್ ನಲ್ಲಿ ನಡೆದಿದ್ದ ಘರ್ಷಣೆಗೆ ಸಂಬಂಧಿಸಿದ ಶಂಕಿತರ ಪಟ್ಟಿ ಇದಾಗಿದೆ.

ಇವರಲ್ಲಿ ಜೆ.ಎನ್.ಯು. ವಿದ್ಯಾರ್ಥಿ ಸಂಘಟನೆಯ ಮುಖ್ಯಸ್ಥೆ ಐಶೆ ಘೋಷ್ ಅವರ ಹೆಸರೂ ಸೇರಿದೆ. ಘರ್ಷಣೆಯಲ್ಲಿ ಮುಸುಕುಧಾರಿ ವ್ಯಕ್ತಿಗಳಿಂದ ಹಲ್ಲೆಗೊಳಗಾಗಿದ್ದ ಐಶೆ ಘೋಷ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಪೋಲಿಸರು ಗುರುತಿಸಿರುವ ಶಂಕಿತರಲ್ಲಿ ಹೆಚ್ಚಿನವರು ಎಡಪಂಥೀಯ ಸಂಘಟನೆಗಳಿಗೆ ಸೇರಿದವರಾಗಿದವರಾಗಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಡಿಸಿಪಿ (ಕ್ರೈಂ) ಜಾಯ್ ತಿರ್ಕೆ ಅವರು ಶಂಕಿತರ ಹೆಸರು ಮತ್ತು ಅವರ ಭಾವಚಿತ್ರಗಳನ್ನು ಬಹಿರಂಗಗೊಳಿಸಿದ್ದಾರೆ. ಆದರೆ ಹಿಂಸಾಚಾರಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಕಲೆಹಾಕಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಘರ್ಷಣೆ ಸಂಭವಿಸುವುದಕ್ಕೂ ಒಂದು ದಿನ ಮೊದಲೇ ಸರ್ವರ್ ಕೊಠಡಿಯನ್ನು ಹಾನಿಗೊಳಿಸಿ ಪುಡಿಗೈಯಲಾಗಿತ್ತು ಎಂಬ ಮಾಹಿತಿಯನ್ನು ತಿರ್ಕೆ ಅವರು ಇದೆ ಸಂದರ್ಭದಲ್ಲಿ ನೀಡಿದರು.

ಶಂಕಿತರ ಹೆಸರುಗಳು ಈ ರೀತಿಯಾಗಿವೆ:
1. ಐಶೆ ಘೋಷ್ – ಜೆ.ಎನ್.ಎಸ್.ಯು. ಅಧ್ಯಕ್ಷೆ, 2. ವಿಕಾಸ್ ಪಟೇಲ್ – ಎಂ.ಎ. ಕೊರಿಯನ್ ಸ್ಟಡೀಸ್, 3. ಪಂಕಜ್ ಮಿಶ್ರಾ – ಸ್ಕೂಲ್ ಆಫ್ ಸೋಷಿಯಲ್ ಸೈನ್ಸ್, 4. ಚುಂಚುನ್ ಕುಮಾರ್ – ಜೆ.ಎನ್.ಯು. ಹಳೇ ವಿದ್ಯಾರ್ಥಿ, 5. ಯೋಗೇಂದ್ರ ಭಾರದ್ವಜ್ – ಸಂಸ್ಕೃತ ಪಿ.ಹೆಚ್.ಡಿ. ವಿದ್ಯಾರ್ಥಿ, 6. ಡೋಲನ್ ಸಮನಾಟ – ಸ್ಕೂಲ್ ಆಫ್ ಸೋಷಿಯಲ್ ಸೈನ್ಸ್, 7. ಸುಚೇತಾ ತಾಲೂಕ್ದಾರ್ – ಸ್ಕೂಲ್ ಆಫ್ ಸೋಷಿಯಲ್ ಸೈನ್ಸ್, 8. ಪ್ರಿಯಾ ರಂಜನ್ – ಸ್ಕೂಲ್ ಆಫ್ ಲ್ಯಾಂಗ್ವೇಜ್ ಆ್ಯಂಡ್ ಕಲ್ಚರಲ್ ಸ್ಟಡೀಸ್


ಆದರೆ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಯಾರನ್ನೂ ವಶಕ್ಕೆ ಪಡೆದುಕೊಂಡಿಲ್ಲ ಮತ್ತು ಶಂಕಿತರೆಲ್ಲರಿಗೂ ನೊಟೀಸ್ ನೀಡಿ ಅವರಿಂದ ವಿವರಣೆಯನ್ನು ಪಡೆದುಕೊಳ್ಳಲಾಗುವುದು ಎಂದು ಡಿಸಿಪಿ ಜಾಯ್ ತಿರ್ಕೆ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮತ್ತು ಮುಂಬರುವ ದಿನಗಳಲ್ಲಿ ಇನ್ನಷ್ಟು ಶಂಕಿತರ ಹೆಸರುಗಳನ್ನು ಬಹಿರಂಗಪಡಿಸುವ ಸುಳಿವನ್ನು ಡಿಸಿಪಿ ಅವರು ನೀಡಿದ್ದಾರೆ.

ಆದರೆ ರವಿವಾರ ಸಾಯಂಕಾಲ ಜೆ.ಎನ್.ಯು. ಆವರಣದೊಳಗೆ ದಾಂಧಲೆ ನಡೆಸಿದ್ದ ಮುಸುಕುಧಾರಿಗಳ ಗುರುತು ಪತ್ತೆಯಾಗಿದೆಯೇ ಎಂಬ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಘಟನೆಗೆ ಸಂಬಂಧಿಸಿದಂತೆ ಶಂಕಿತರ ಪಟ್ಟಿಯಲ್ಲಿ ತನ್ನ ಹೆಸರು ಉಲ್ಲೇಖವಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಐಶೆ ಘೋಷ್ ಅವರು, ‘ದೆಹಲಿ ಪೊಲೀಸರು ಅವರ ತನಿಖೆಯನ್ನು ನಡೆಸಲಿ, ನನ್ನ ಮೇಲೆ ದಾಳಿ ನಡೆದಿರುವುದಕ್ಕೆ ನನ್ನ ಬಳಿ ಸಾಕ್ಷ್ಯಗಳಿವೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.