ಧೀರ ಸನ್ಯಾಸಿಯ ಧ್ಯಾನಿಸುತ್ತಾ…

ನಾಳೆ ವಿವೇಕಾನಂದರ ಜನ್ಮದಿನ

Team Udayavani, Jan 11, 2020, 6:05 AM IST

dheera-sana

ಆಹಾ! ಅದೇನು ಕೂಗು; ಅದೇನು ಅಬ್ಬರದ ಸಂಗೀತ; ಮುಗಿಲು ಮುಟ್ಟುವ ಯುವ ಕರ ಹರ್ಷೋದ್ಗಾರ… ನಡು ರಾತ್ರಿ ಈ ನಶೆ ನಿಧಾನಕ್ಕೆ ಇಳಿಯುವಾಗ, ಬೆಂಗಳೂರಿನಲ್ಲಿ ಅಲ್ಲೆಲ್ಲೋ ಕೇಳಿ ತೊಂದು ಚಾಗಿಯ ಹಾಡು… ಅದು ವಿವೇಕಾನಂದರೇ ಕಟ್ಟಿದ ಹಾಡು, “ಗಗನವೇ ಮನೆ, ಹಸುರೇ ಹಾಸಿಗೆ, ಮನೆಯು ಸಾಲ್ವುದೇ ಚಾಗಿಗೆ, ಹಸಿಯೋ ಬಿಸಿಯೋ, ಬಿದಿಯು ಕೊಟ್ಟಾಹಾರವನ್ನವು ಯೋಗಿಗೆ’! ಎಲ್ಲವನ್ನೂ ತೊರೆದ ಸನ್ಯಾಸಿ, ಎಲ್ಲವೂ ಬೇಕೆನ್ನುವ ಈಗಿನ ಯುವಕರ ಕಂಡು ಏನನ್ನೋ ಹೇಳುತ್ತಿದ್ದಾರೆ… ಏನದು?

ಬದುಕು ಪ್ರತಿಯೊಬ್ಬರ ಹಕ್ಕು. ತನ್ನ ಜೀವನದ ದಿಕ್ಕುದಿಶೆಗಳನ್ನು ನಿರ್ಧರಿಸಿಕೊಳ್ಳಬೇಕಾಗಿರುವುದು ತನಗೆ ದೈವದತ್ತವಾಗಿ, ನಿಸರ್ಗದತ್ತವಾಗಿ ಬಂದಿರುವ ಅಧಿಕಾರ. ಹಾಗೊಂದು ಧೀಮಂತ ಬದುಕನ್ನು ಕಟ್ಟಿಕೊಂಡು, ಅಲ್ಲಿ ನಿಮ್ಮನ್ನು ನೀವು ಆಳಿಕೊಳ್ಳಿ ಎನ್ನುವುದು ವಿಶ್ವಕಂಡ ಮಹಾನ್‌ ಸಂತ ಸ್ವಾಮಿ ವಿವೇಕಾನಂದರ ಸಂದೇಶ. ಜ.12 ಆ ಪುಣ್ಯಪುರುಷನ ಜನ್ಮದಿನವಾಗಿದ್ದರಿಂದ, ಅದರ ನೆಪದಲ್ಲಿ ನಮ್ಮನ್ನು ಬಗೆದುಕೊಳ್ಳಲು ಇದೊಂದು ಅವಕಾಶ.

ವಿವೇಕಾನಂದರು ಮತ್ತು ಕನ್ನಡದ ನೆಲದ ನಡುವೆ ಇತಿಹಾಸ ಎಂದಿಗೂ ನೆನಪಿಡಬೇಕಾದ ಬಂಧವೊಂದಿದೆ. ಚಿಕ್ಕಮಗಳೂರಿನ ಅಳಸಿಂಗ ಪೆರುಮಾಳ್‌ ಪಟ್ಟ ಪರಿಶ್ರಮದಿಂದಲೇ ಅವರು ಅಮೆರಿಕದ ನೆಲಕ್ಕೆ ಕಾಲಿಟ್ಟಿದ್ದು. ಮೈಸೂರಿನ ಅಂದಿನ ಮಹಾರಾಜ ಚಾಮರಾಜ ಒಡೆಯರ್‌ ಬಹುತೇಕ ವೆಚ್ಚ ಭರಿಸಿದ್ದರಿಂದಲೇ, ಸಾವಿಲ್ಲದ, ರೂಹಿಲ್ಲದ, ಕೇಡಿಲ್ಲದ ಆ ಯುಗಪುರುಷನ ವಾಣಿ ವಿಶ್ವವೇದಿಕೆಯಲ್ಲಿ ಮೊಳಗಿದ್ದು.

“ಗಗನವೇ ಮನೆ, ಹಸುರೇ ಹಾಸಿಗೆ, ಮನೆಯು ಸಾಲ್ವುದೇ ಚಾಗಿಗೆ, ಹಸಿಯೋ ಬಿಸಿಯೋ, ಬಿದಿಯು ಕೊಟ್ಟಾಹಾರವನ್ನವು ಯೋಗಿಗೆ’ ಎಂಬ ಸಾಲುಗಳನ್ನು ವಿವೇಕಾನಂದರು ಅಮೆರಿಕದಲ್ಲಿಯೇ ರಚಿಸಿದ್ದು. ಅವರು “ಸಾಂಗ್‌ ಆಫ್ ಸನ್ಯಾಸಿನ್‌’ ಎಂದು ಇಂಗ್ಲಿಷ್‌ನಲ್ಲಿ ಬರೆದಿದ್ದನ್ನು “ಯುಗದ ಕವಿ, ಜಗದಕವಿ’ ಕುವೆಂಪು ಕನ್ನಡಕ್ಕೆ ಅನುವಾದಿಸಿದರು. ಶ್ರೀರಾಮಕೃಷ್ಣ ಪರಮಹಂಸರು ವೇದ, ಉಪನಿಷತ್‌, ಗೀತೆಗಳ ಮೂರ್ತೀಭವಿಸಿದ ರೂಪದಂತೆ ಬದುಕಿದರು.

ಆ ಪರಮಹಂಸರನ್ನು ಅಮೆರಿಕದಲ್ಲಿ ಪರಿಚಯಿಸಲು ಹೊರಟ ವಿವೇಕಾನಂದರು ಅದರ ಮೂಲಕ, ಭಾರತದ ದರ್ಶನಗಳನ್ನೇ ಪರಿಚಯಿಸಿದರು. ಅಷ್ಟು ಮಾತ್ರವಲ್ಲ, ಜಗತ್ತಿಗೆ ಭಾರತವನ್ನೇ ನೀಡಿದರು. ಅಲ್ಲಿಯವರೆಗೆ ಭಾರತವೆಂದರೆ ಬ್ರಿಟಿಷರ ಕಾಲಡಿ ಬಿದ್ದು, ಬಿಡಿಸಿಕೊಳ್ಳಲು ಪರದಾಡುತ್ತಿರುವ ಒಂದು ಅಸಹಾಯಕ ದೇಶವನ್ನಾಗಿ ವಿಶ್ವ ನೋಡುತ್ತಿತ್ತು. ಬಹುತೇಕ ದೇಶಗಳಿಗೆ ಇಂತಹ ದೇಶವೊಂದರ ಅಸ್ತಿತ್ವವೇ ಗೊತ್ತಿರಲಿಲ್ಲ.

ಈಗ ವಿಶ್ವದ ಬಲಿಷ್ಠ ದೇಶವಾಗಿ ಬೆಳೆದುನಿಂತಿರುವ ಭಾರತದ ಭವಿಷ್ಯವನ್ನು ಅಂದೇ ಮೊಳಗಿಸಿದ್ದು “ನರೇಂದ್ರ’ನಾಥದತ್ತ. ಗುರು ವಿವೇಕರನ್ನು ನೆನೆಯುವಾಗ ಅಷ್ಟೆಲ್ಲ ಮನದುಂಬಿ, ಭಾವತುಂಬಿ ಬಂದರೂ, ಬೆಂಗಳೂರಿನ ಮೆಟ್ರೋ ರೈಲುಗಳು, ಕಬ್ಬನ್‌, ಲಾಲ್‌ಬಾಗ್‌ಗಳು, ಡಿ.31ರ ಮಧ್ಯರಾತ್ರಿಯ ಮಹಾತ್ಮಗಾಂಧಿ ರಸ್ತೆ, ಶನಿವಾರ, ಭಾನುವಾರ ಬೆಂಗಳೂರಿನ ಎಲ್ಲ ಪಂಚತಾರಾ ಹೋಟೆಲ್‌ಗ‌ಳ ಆವರಣಗಳನ್ನು ನೋಡುವಾಗ ಉದ್ವೇಗಕ್ಕೊಳಗಾಗುತ್ತೇವೆ.

ವಿವೇಕರು ಮೊದಲ ವಿದೇಶ ಪ್ರವಾಸದಲ್ಲಿದ್ದಾಗ ಒಮ್ಮೆ ಒಂದು ಜಾಗದಲ್ಲಿ ಏನನ್ನೊ ನೋಡುತ್ತಿರುತ್ತಾರೆ. ಆಗ ಅಲ್ಲಿದ್ದ ಒಂದಷ್ಟು ವೇಶ್ಯೆಯರು ಅವರತ್ತ ನೋಡಿ, ಸತತವಾಗಿ ಸಂಕೇತ ನೀಡುತ್ತಾರೆ. ಆ ವೇಶ್ಯೆಯರತ್ತ ಹೋದ ವಿವೇಕಾನಂದರು ಮಂಡಿಯೂರಿ ಕುಳಿತು, “ಅಮ್ಮಾ ಜಗನ್ಮಾತೆ… ಎಲ್ಲ ಕಡೆ ಅಷ್ಟು ಪವಿತ್ರಳಾಗಿ ಪ್ರಕಟಗೊಳ್ಳುವ ನೀನು, ಇಲ್ಲಿ ಏಕಮ್ಮಾ ಹೀಗೆ ಕಾಣಿಸಿಕೊಳ್ಳುತ್ತಿದ್ದಿ?’ ಎಂದು ಕಣ್ಣೀರು ಹಾಕುತ್ತಾರೆ. ಆ ವೇಶ್ಯೆಯರು ದಿಗ್ಭ್ರಮೆಗೊಂಡು ನಿಲ್ಲುತ್ತಾರೆ.

ಹೊಸವರ್ಷವೆಂಬ ಸಡಗರದಲ್ಲಿ ಯುವಕರು ಮೈಮರೆತು ನಡೆಸುವ ಹುಚ್ಚಾಟಗಳನ್ನು ನೋಡಿದಾಗ ಹೀಗೊಂದು ಖನ್ನತೆ ಕಾಡುತ್ತದೆ. ಮಧ್ಯರಾತ್ರಿ ಇನ್ನೊಬ್ಬನ ಬದುಕಿನ ಬಗ್ಗೆ ಸ್ವಲ್ಪವೂ ಚಿಂತಿಸದೇ ವ್ಹೀಲಿಂಗ್‌ ಮಾಡಿಕೊಂಡು ಭರ್ರನೆ, ಮಲ್ಲೇಶ್ವರದ ಕುವೆಂಪು ಮಹಾಕವಿ ರಸ್ತೆಯಲ್ಲಿ ಬೈಕ್‌ ನುಗ್ಗಿಸುವ ಯುವಕರನ್ನು ನೋಡಿದಾಗಲೂ, ಮನಸ್ಸು ಚಿಂತಾಕ್ರಾಂತಗೊಳ್ಳುತ್ತದೆ. ಕೆಲ ಪಂಚತಾರಾ ಹೋಟೆಲ್‌ಗ‌ಳಲ್ಲಿ ಮಾದಕವಸ್ತುಗಳನ್ನು ಸೇವಿಸಿ ಬಿದ್ದುಕೊಳ್ಳುವ ವ್ಯಕ್ತಿಗಳನ್ನು ನೋಡಿದಾಗ,

ಉಕ್ಕಿನಂತಹ ನರಗಳು, ಕಬ್ಬಿಣದಂಥ ಮಾಂಸಖಂಡಗಳು, ಅದರ ಅಂತರಾಳದಲ್ಲಿ ನೆಲೆಸಿರುವ ಸಿಡಿಲಿನಂಥ ಮನೋಶಕ್ತಿ ಎಲ್ಲಿ ಹೋಯಿತು ಎಂದು ವೇದನೆಯಾಗುತ್ತದೆ. ಇಡೀ ದೇಶವನ್ನು ಎರಡು ಬಾರಿ ಸುತ್ತಿದ ವಿವೇಕಾನಂದರು, ಭಾರತ ಅಂದು ತುಂಬಿಕೊಂಡಿದ್ದ ದುಃಖ, ದಾರಿದ್ರವನ್ನು ಕಣ್ಣಾರೆ ಕಂಡರು. ಆಗ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸಮುದ್ರದ ಮಧ್ಯೆ ಬಂಡೆಯ ಮೇಲೆ ಮೂರು ದಿನ ಧ್ಯಾನನಿರತರಾದರು.

ಆಗ ಅವರಿಗೆ ತಾಯಿ ಭಾರತಿಯ ದರ್ಶನವಾಗುತ್ತದೆ. ಅದೇ ಅವರನ್ನು ಅಮೆರಿಕಕ್ಕೆ ಹೋಗಲು ಪ್ರೇರೇಪಿಸುತ್ತದೆ. ಜಗನ್ಮಾತೆಯನ್ನು ಭಾರತಮಾತೆಯೆಂದು ಕಂಡು, ಭಾರತಿ ಬೇರೆಯಲ್ಲ, ದುರ್ಗೆ ಬೇರೆಯಲ್ಲ ಎಂದು ಭಾವಿಸಿದ್ದ ವಿವೇಕಾನಂದರು ಎಲ್ಲಿ? ಮೆಟ್ರೋ ಟ್ರೈನುಗಳಲ್ಲಿ ಪಕ್ಕದವರು ಇದ್ದಾರೆಂದೂ ತಲೆಕೆಡಿಸಿಕೊಳ್ಳದೇ ಮುತ್ತುಕೊಡುವ, ತೀರಾ ಹತ್ತಿರ ಸರಿದು ಅಕ್ಷರಶಃ ತಬ್ಬಿಕೊಂಡಂತೆ ವರ್ತಿಸಿ, ಅಸಹ್ಯ ಹುಟ್ಟಿಸುವ ಈ ಯುವಜನತೆಯೆಲ್ಲಿ?

ತನ್ನ ದೇಶದ ಬಂಧುಭಗಿನಿಯರು ಕಷ್ಟದಲ್ಲಿರುವಾಗ ತಾನು ಮಂಚದ ಮೇಲೆ ಹೇಗೆ ಮಲಗಿರಲಿ ಎಂದು ತಳಮಳಿಸುವ ಆ ವಿವೇಕಾನಂದರಿಗೂ, ಮೋಜಿ ನಲ್ಲಿ ತೇಲುವ ಈಗಿ ನ ಕೆಲ ಯುವಕರಿಗೂ ಎಲ್ಲಿಂದೆಲ್ಲಿಗೆ ತಾಳಮೇಳ? ಬೆಂಗಳೂರು ಬೆಳೆಯುತ್ತಿದೆ, ಭಾರತವೂ ಬೆಳೆಯುತ್ತಿದೆ, ಓ ಯುವಕರೇ ವಿವೇಕಾನಂದರನ್ನು ನೆನಪಿಸಿಕೊಂಡು ನೀವೂ ಬೆಳೆಯಬಾರದೇಕೆ?

* ನಿರೂಪ

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.