ರಾಗಿ ಖರೀದಿ ಕೇಂದ್ರ ತೆರೆಯಲು ಮೀನಮೇಷ


Team Udayavani, Jan 11, 2020, 3:00 AM IST

ragi-karidi

ಹುಳಿಯಾರು: ರಾಗಿ ಬೆಳೆಗೆ ಹೆಸರಾಗಿರುವ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ದಶಕಗಳ ನಂತರ ಉತ್ತಮ ಇಳುವರಿ ಬಂದಿದ್ದು, ಆದರೆ ದಿಢೀರ್‌ ಬೆಲೆ ಕುಸಿದಿರುವುದು ರೈತರನ್ನು ಕಂಗಾಲಾಗಿಸಿದ್ದು, ತಕ್ಷಣ ರಾಗಿ ಖರೀದಿ ಕೇಂದ್ರ ತೆರೆಯಬೇಕಿದೆ.

ಕೃಷಿ ಇಲಾಖೆ ಮಾಹಿತಿ ಪ್ರಕಾರ 2018-19ನೇ ಸಾಲಿನಲ್ಲಿ 26,020 ಹೆಕ್ಟೇರ್‌ ರಾಗಿ ಬಿತ್ತನೆ ಗುರಿಯಲ್ಲಿ 19,700 ಹೆಕ್ಟೇರ್‌ ಪ್ರಗತಿ ಸಾಧಿಸಲಾಗಿದೆ. 1 ಹೆಕ್ಟೇರ್‌ಗೆ 20 ಕ್ವಿಂಟಲ್‌ ಇಳುವರಿ ಬಂದಿದೆಯಾದರೂ ತಾಲೂಕಿನಲ್ಲಿ 3.5 ಲಕ್ಷಕ್ಕೂ ಹೆಚ್ಚು ಕ್ವಿಂಟಲ್‌ ಇಳುವರಿ ಬಂದಿರಬಹುದೆಂದು ಅಂದಾಜಿಸಲಾಗಿದೆ.

ಸುಗ್ಗಿ ಕಾಲ ಆರಂಭಕ್ಕೂ ಮುನ್ನ ಕ್ವಿಂಟಲ್‌ ರಾಗಿಗೆ ಮೂರ್‍ನಾಲ್ಕು ಸಾವಿರ ಇದ್ದ ಬೆಲೆ ರಾಗಿ ಕೂಯ್ಲು ಆರಂಭವಾದ ತಕ್ಷಣ ದಿಢೀರ್‌ 2 ಸಾವಿರ ರೂ. ಆಸುಪಾಸಿಗೆ ಕುಸಿದಿದೆ. ಅವಕ ಹೆಚ್ಚಾಗಿರುವ ಜೊತೆಗೆ ರಾಗಿ ತೆನೆ ಮಳೆಗೆ ಸಿಲುಕಿ ಕಪ್ಪು ಬಣ್ಣಕ್ಕೆ ತಿರುಗಿದ್ದು, ಕೆಂಪು ರಾಗಿ ರಫ್ತು ಆಗುತ್ತಿದ್ದ ತಮಿಳುನಾಡು, ಕೇರಳ, ಮಹರಾಷ್ಟ್ರ ರಾಜ್ಯಗಳಲ್ಲಿ ಬೇಡಿಕೆ ಕುಸಿತದಿಂದ ಬೆಲೆ ಕಡಿಮೆಯಾಗಿದೆ ಎನ್ನುತ್ತಾರೆ ಹುಳಿಯಾರಿನ ರಾಗಿ ವರ್ತಕ ಎಲ್‌.ಆರ್‌.ಬಾಲಾಜಿ.

ಕಳೆದ 7-8 ವರ್ಷಗಳಿಂದ ಬಿತ್ತಿದ್ದ ರಾಗಿ ಕೈ ಸೇರದೆ ನಷ್ಟ ಅನುಭವಿಸಿದ್ದ ರೈತರಿಗೆ ಸರ್ಕಾರ 3200 ರೂ. ಬೆಂಬಲ ಬೆಲೆ ಘೋಷಿಸಿತ್ತು. ಆದರೆ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿದ್ದರೂ ಇನ್ನೂ ಖರೀದಿ ಕೇಂದ್ರ ಆರಂಭಿಸದಿದ್ದರಿಂದ ಹಣದ ಅಗತ್ಯ ಇರುವ ರೈತರು ಸಿಗುವ ಬೆಲೆಗೆ ರಾಗಿ ಮಾರುತ್ತಿದ್ದಾರೆ. ಒಂದು ಕ್ವಿಂಟಲ್‌ ರಾಗಿ ಬೆಳೆಯಲು ಕನಿಷ್ಠ 2 ಸಾವಿರ ರೂ. ಖರ್ಚಾಗುತ್ತಿದ್ದು, ಅದಕ್ಕಿಂತಲೂ ಕಡಿಮೆ ಬೆಲೆ ಮಾರುಕಟ್ಟೆಯಲ್ಲಿದೆ.

ರೈತನ ಗೋಳು ಕೇಳುವವರೂ ಇಲ್ಲ. ರಾಗಿ ಕೊಯ್ಲು ಆರಂಭದ ದಿನದಲ್ಲೇ ಸರ್ಕಾರ ಖರೀದಿ ಕೇಂದ್ರ ಆರಂಭಿಸಿದರೆ ಮಾರುಕಟ್ಟೆಯಲ್ಲಿ ರಾಗಿ ಬೆಲೆ ಪಾತಾಳ ಸೇರುತ್ತಿರಲಿಲ್ಲ. ಆದರೆ ಸರ್ಕಾರದ ಈ ನಿರ್ಲಕ್ಷ್ಯದಿಂದ ವರ್ತಕರಿಗೆ ಲಾಭವಾಗುತ್ತಿದೆ. ಹಬ್ಬ, ಮದುವೆ, ವಿದ್ಯಾಭ್ಯಾಸ ಎಂದು ರೈತ ಬೆಳೆದ ರಾಗಿಯನ್ನೆಲ್ಲಾ ಮಾರುವ ಮುಂಚೆ ಖರೀದಿ ಕೇಂದ್ರ ತೆರೆಯುವ ಅಗತ್ಯವಿದೆ.

ಬೆಂಬಲ ಬೆಲೆಗಿಂತ ಮಾರುಕಟ್ಟೆ ಬೆಲೆ ಕಡಿಮೆಯಾದ ತಕ್ಷಣ ನಫೆಡ್‌ ಕೇಂದ್ರ ತೆರೆಯಬೇಕು. ಆದರೆ 2 ತಿಂಗಳಿಂದ 2 ಸಾವಿರ ಆಸುಪಾಸಿಗೆ ರಾಗಿ ಬೆಲೆ ಮಾರುಕಟ್ಟೆಯಲ್ಲಿದ್ದರೂ ಸರ್ಕಾರ ಖರೀದಿ ಕೇಂದ್ರ ತೆರೆಯುತ್ತಿಲ್ಲ. ರೈತ ತನ್ನಲ್ಲಿದ್ದ ರಾಗಿಯನ್ನೆಲ್ಲಾ ಮಾರುವ ಮುಂಚೆ ಖರೀದಿ ಕೇಂದ್ರ ತೆರೆದರೆ ರೈತನ ನೆರವಾಗುತ್ತದೆ.
-ಕೆಂಕೆರೆ ಸತೀಶ್‌, ರಾಜ್ಯ ಉಪಾಧ್ಯಕ್ಷ, ರೈತ ಸಂಘ

ಸರ್ಕಾರ ಜಿಲ್ಲಾದ್ಯಂತ ರಾಗಿ ಖರೀದಿ ಕೇಂದ್ರ ತೆರೆಯಲು ನಿರ್ಧರಿಸಿದ್ದು, ಸೋಮವಾರ ಚಿಕ್ಕನಾಯಕನಹಳ್ಳಿ ಮತ್ತು ಹುಳಿಯಾರಿನಲ್ಲಿ ರಾಗಿ ಮಾರಾಟಗಾರರ ನೋಂದಣಿ ಆರಂಭವಾಗಲಿದ್ದು, ಎಪಿಎಂಸಿ ಆವರಣದಲ್ಲಿ ಸ್ಥಳ ನಿಗದಿ ಮಾಡಲಾಗಿದೆ. ಆದರೆ ಖರೀದಿ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಗೋದಾಮು, ಟ್ರಾನ್ಸ್‌ಪೊರ್ಟ್‌, ಹಮಾಲಿಗಳ ಟೆಂಡರ್‌ ಪ್ರಕ್ರಿಯೆ ಇನ್ನಷ್ಟೇ ನಡೆಸಬೇಕಿದೆ. ಇದು ಮುಗಿದ ನಂತರ ಖರೀದಿ ಆರಂಭಿಸಲಾಗುವುದು.
-ಲಕ್ಷ್ಮೀನರಸಿಂಹಯ್ಯ, ರಾಗಿ ಖರೀದಿ ಅಧಿಕಾರಿ, ಹುಳಿಯಾರು

ಟಾಪ್ ನ್ಯೂಸ್

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.