ಫಾರಿನ್‌ ಸನ್ಯಾಸಿ

ನನಗೇಕೆ ಹಂಪಿ ಸೆಳೆಯಿತು?

Team Udayavani, Jan 11, 2020, 6:00 AM IST

40

ಹೊಳೆ ದಂಡೆಯ ಮೇಲೆ, ಅಲ್ಲಲ್ಲಿ ಬಿದ್ದ ಒಣ ಕಟ್ಟಿಗೆಗಳಿಗೆ ಬೆಂಕಿ ಹಚ್ಚಿ, ಕ್ಯಾರೆಟ್‌, ಬೀಟ್‌ರೂಟ್‌, ಗೆಣಸು, ಕಾಯಿ- ಪಲ್ಲೆಗಳನ್ನು ಬೇಯಿಸಿ ಸೇವಿಸುತ್ತಾ, ಅಪ್ಪಟ ಸನ್ಯಾಸಿಯಂತೆ ವಾಸಿಸುವ ಈತನ ಹೆಸರು, ಅಡ್ರಿಯನ್‌. ಇಟಲಿಯಿಂದ ಬಂದವ…

ಎತ್ತಿಕಟ್ಟಿದ ಪಂಚೆ, ಖಾದಿ ಅಂಗಿ, ಕನ್ನಡಕ, ತಲೆಗೆ ಕೇಸರಿ ಟವೆಲ್‌, ಕೊರಳಲ್ಲಿ ರುದ್ರಾಕ್ಷಿ, ವಿಷ್ಣು ಚಕ್ರದ ಪದಕ, ಬಗಲಲ್ಲಿ ಒಂದು ಕೈಚೀಲ, ಅದರೊಳಗೆ ಒಂದಿಷ್ಟು ಅಗತ್ಯ ವಸ್ತುಗಳು… ಇಷ್ಟೇ ಈತನ ಸ್ವತ್ತು. ಅಸಲಿಗೆ ಈತ ವಿದೇಶಿಗ. ಇಟಲಿಯ ಈ ಪ್ರಜೆ ಭಾರತಕ್ಕೆ ಬಂದಾಗ, ಚಪ್ಪಲಿಯನ್ನೇ ಧರಿಸುವುದಿಲ್ಲ. ಅಡ್ರಿಯನ್‌ ಪಾಲಿಗೆ ಇದು ಪುಣ್ಯನೆಲ. ಹಂಪಿ ಈತನ ಅಧ್ಯಾತ್ಮ ತವರು.

ನಿತ್ಯ ಬ್ರಾಹ್ಮಿ ಮಹೂರ್ತದಲ್ಲಿ ತಣ್ಣೀರು ಜಳಕ ಮಾಡಿ, ಮಾತಂಗ ಪರ್ವತ ಏರಿ, ಸೂರ್ಯೋದಯ ವೀಕ್ಷಿಸಿ, ನಂತರ ಧ್ಯಾನ- ಪ್ರಾಣಾಯಾಮಕ್ಕೆ ಕೂರುತ್ತಾನೆ. ವಿರೂಪಾಕ್ಷನಿಗೆ ಮೊದಲ ಆರತಿ ಸಲ್ಲುವ ವೇಳೆಗೆ ಸರಿಯಾಗಿ ಆತನ ಮುಂದೆ ಮಂಡಿಯೂರಿರುತ್ತಾನೆ. ಪ್ರಖರ ಬಿಸಿಲು, ಕತ್ತಲು, ಕಲ್ಲು- ಮುಳ್ಳಿನ ಹಾದಿ… ಇದ್ಯಾವುದನ್ನೂ ಲೆಕ್ಕಿಸದೇ ಬರಿಗಾಲಲ್ಲಿ, ಹಂಪಿಯ ಬಿಸಿಬಂಡೆಯ ಮೇಲೆ ನಡೆಯುವುದರಲ್ಲೇ ಖುಷಿ ಕಾಣುತ್ತಾನೆ. ಭಗವಾನ್‌ ನಾಮ ಜಪಿಸುತ್ತಾ, ಏಕಾಂತದಲ್ಲಿ ಕಳೆದು ಹೋಗುವುದೆಂದರೆ, ಅಡ್ರಿಯನ್‌ಗೆ ಮಹದಾನಂದ.

ಬ್ರಹ್ಮಚಾರಿ, ಸಸ್ಯಾಹಾರಿ…
ಭಾರತದ ಅಧ್ಯಾತ್ಮದ ಸೆಳೆತಕ್ಕೆ ಒಳಗಾದ ಅಡ್ರಿಯನ್‌, ಇಟಲಿಯಲ್ಲಿ ಮೂಲತಃ ಕೃಷಿಕನಂತೆ. ಎಣ್ಣೆಮಿಲ್‌ಗ‌ಳಲ್ಲಿ ಕೆಲಸ ಮಾಡುತ್ತಾನೆ. ವಷ‌ìದಲ್ಲಿ ಆರು ತಿಂಗಳು ಇಟಲಿಯಲ್ಲಿ ದುಡಿದು, ಕೂಡಿಟ್ಟ ಹಣದಲ್ಲಿ ಇನ್ನುಳಿದ ಅರ್ಧ ವರ್ಷ ಪ್ರಪಂಚ ಸುತ್ತುತ್ತಾನೆ. ಆ ಅವಧಿಯಲ್ಲಿ ಬಹುಪಾಲು ಭಾರತದ ಹಂಪಿಯಲ್ಲೇ ಇರುತ್ತಾನೆ. ಜರ್ಮನಿ, ಸ್ವಿಜರ್ಲೆಂಡ್‌, ಟರ್ಕಿ, ಇರಾನ್‌, ಪಾಕಿಸ್ತಾನ… ಹೀಗೆ ಅನೇಕ ದೇಶಗಳನ್ನು ಸುತ್ತಾಡಿ, ಈತ ಭಾರತಕ್ಕೆ ಬಂದಿದ್ದು 1982ರಲ್ಲಿ. ಹಂಪಿಯ ಸುಂದರ ಪರಿಸರ, ಪ್ರಶಾಂತತೆ, ಧಾರ್ಮಿಕ ಮತ್ತು ಪೌರಾಣಿಕ ಹಿನ್ನೆಲೆ ಈತನನ್ನು ಗಾಢವಾಗಿ ಪ್ರಭಾವಿಸಿದೆ. ಆರಂಭದಲ್ಲಿ ಹಂಪಿಗೆ ಬಂದಾಗ, ಮೂರು ತಿಂಗಳು ಇಲ್ಲಿಂದ ಕದಲಲೇ ಇಲ್ಲ. ಹಂಪಿ ಈತನನ್ನು ಅಷ್ಟು ಸೆಳೆದಿತ್ತು. ಅಂದಿನಿಂದಲೇ, ಲೌಕಿಕತೆಯಿಂದ ಅಧ್ಯಾತ್ಮದತ್ತ ಮನಸ್ಸು ವಾಲಿತು. ಜೀವನಪರ್ಯಂತ ಬ್ರಹ್ಮಚಾರಿ ಆಗಿರಲು ನಿರ್ಧರಿಸಿದ. ಮಾಂಸಾಹಾರ ತ್ಯಜಿಸಿ, ಶಾಖಾಹಾರಿ ಆದ. ಹಂಪಿಯ ಹೊಳೆ ದಂಡೆಯ ಮೇಲೆ, ಅಲ್ಲಲ್ಲಿ ಬಿದ್ದ ಒಣ ಕಟ್ಟಿಗೆಗಳಿಗೆ ಬೆಂಕಿ ಹಚ್ಚಿ, ಕ್ಯಾರೆಟ್‌, ಬೀಟ್‌ರೂಟ್‌, ಗೆಣಸು, ಕಾಯಿ- ಪಲ್ಲೆಗಳನ್ನು ಬೇಯಿಸಿ ಸೇವಿಸುತ್ತಾ, ಅಪ್ಪಟ ಸನ್ಯಾಸಿಯಂತೆ ವಾಸಿಸುತ್ತಿದ್ದಾನೆ.

ಇಲ್ಲಿನವರು ಕಂಡಂತೆ…
ಈಗ 25ನೇ ಬಾರಿಗೆ ಅಡ್ರಿಯನ್‌, ಹಂಪಿಗೆ ಬಂದಿದ್ದಾನೆ. ಹಂಪಿವಾಸಿಗಳನ್ನು ಗುರುತಿಸಬಲ್ಲ; ಕಂಡವರಿಗೆಲ್ಲಾ ಕಿರುನಗೆಯಲ್ಲೇ ಪ್ರೀತಿ ಹಂಚಬಲ್ಲ ಈತ, ಸರಸರ ನಡೆಯುತ್ತಾ ಗಮನ ಸೆಳೆಯುತ್ತಾನೆ. “ಅಡ್ರಿಯನ್‌ ಸರಳ ಜೀವಿ. ಮಿತ ಭಾಷಿ. ಸ್ವಲ್ಪ ಸಂಕೋಚದ ಸ್ವಭಾವದವ. ಅಧ್ಯಾತ್ಮದ ಬಗ್ಗೆ ಅಪಾರವಾಗಿ ತಿಳಿದಿದ್ದಾನೆ. ಹಿಂದೂ ಸಾಧು- ಸಂತರ ಬಹಳ ಮಾತಾಡುತ್ತಾನೆ. ಒಬ್ಬಂಟಿಯಾಗಿ ಹಂಪಿಯನ್ನು ಸುತ್ತಾಡುತ್ತಾ, ಏನೋ ಖುಷಿ ಕಾಣುತ್ತಾನೆ’ ಎನ್ನುತ್ತಾರೆ, ಭುವನೇಶ್ವರಿ ಗೆಸ್ಟ್‌ ಹೌಸ್‌ ಮಾಲಿಕ ವಿಜಯ್‌. ಅಡ್ರಿಯನ್‌ ಪ್ರತಿಸಲ ತಂಗುವುದೂ ಇಲ್ಲಿಯೇ. ಇಂಗ್ಲಿಷ್‌, ಫ್ರೆಂಚ್‌, ಹಿಂದಿಯನ್ನು ಸುಲಲಿತವಾಗಿ ಮಾತಾಡಬಲ್ಲ ಈತನಿಗೆ ಕನ್ನಡವೂ ತಕ್ಕಮಟ್ಟಿಗೆ ಗೊತ್ತು.

ಅಡ್ರಿಯನ್‌ ತನ್ನ ಚುರುಕು ಪಾದಗಳಿಂದ, ಹಂಪಿಯಲ್ಲಿ ನಿತ್ಯವೂ 5- 6 ಕಿ.ಮೀ. ತಿರುಗುತ್ತಾನೆ. ವಿದೇಶಿಗ ಪ್ರವಾಸಿಗರ ಮುಂದೆ ಹಂಪಿಯ ಸ್ಮಾರಕಗಳ ಕತೆ ಹೇಳುವಾಗ, ಈತ ಇಲ್ಲಿಯೇ ಹುಟ್ಟಿದವನೇನೋ ಅಂತನ್ನಿಸುತ್ತದೆ.

ಭಾರತ ತುಂಬಾ ಚೆಂದ. ಅದರಲ್ಲೂ ಹಂಪಿಯ ಇತಿಹಾಸ, ಪುರಾಣದ ಕತೆಗಳು ನನಗೆ ಇಷ್ಟ. ಇಲ್ಲಿ ಸನ್ಯಾಸಿಯಂತೆ ಇದ್ದು, ಕಳೆದುಹೋಗುವುದರಲ್ಲಿ ನನಗೇನೋ ಖುಷಿ ಇದೆ.
– ಅಡ್ರಿಯನ್‌, ಇಟಲಿ ಪ್ರಜೆ

ಚಿತ್ರ- ಲೇಖನ: ಸ್ವರೂಪಾನಂದ ಎಂ. ಕೊಟ್ಟೂರು

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.