ಪ್ರತಿಯೊಬ್ಬರ ಬದುಕಿನಲ್ಲಿ ಗಣಿತ ಹಾಸುಹೊಕ್ಕಾಗಿದೆ


Team Udayavani, Jan 12, 2020, 3:00 AM IST

pratiyobba

ಚನ್ನರಾಯಪಟ್ಟಣ/ಶ್ರವಣಬೆಳಗೊಳ: ಗಣಿತ ಪ್ರತಿಯೊಬ್ಬರಿಗೂ ಅಗತ್ಯ ಇರುವುದರಿಂದ ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಆಸಕ್ತಿಯಿಂದ ಕಲಿಸುವುದು ಮುಖ್ಯ ಎಂದು ಸಮಾವೇಶದ ಅಧ್ಯಕ್ಷೆ ಪದ್ಮಾವತಮ್ಮ ತಿಳಿಸಿದರು.

ತಾಲೂಕಿನ ಶ್ರವಣಬೆಳಗೊಳದ ಜೈನಮಠದ ಆವರಣದಲ್ಲಿನ ಚಾವುಂಡರಾಯ ಸಭಾ ಮಂಟಪದಲ್ಲಿ ನಡೆದ ಅಖೀಲ ಕರ್ನಾಟಕ ಗಣಿತ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೀವನದಲ್ಲಿ ಗಣಿತ ಅತಿ ಮುಖ್ಯವಾಗಿದ್ದು ಉತ್ತಮವಾಗಿ ಬದುಕು ನಡೆಸಬೇಕೆಂದರೆ ಗಣಿತ ತಿಳಿವಳಿಕೆ ಅಗತ್ಯವಿದೆ. ಆರ್ಯಭಟ, ಮಹಾವೀರಾಚಾರ್ಯ ಈ ಬಗ್ಗೆ ಅನೇಕ ಸಂಗತಿಗಳನ್ನು ವಿವರವಾಗಿ ತಿಳಿಸಿದ್ದಾರೆ ಎಂದರು.

ಪ್ರಾಚೀನ ಕಾಲದಿಂದಲೂ ಗಣಿತ ಜ್ಯೋತಿಷ್ಯಕಾರರ ಹಿಡಿತದಲ್ಲಿತ್ತು. 9ನೇ ಶತಮಾನದ ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಆಸ್ಥಾನದಲ್ಲಿದ್ದ ಮಹಾವೀರಾಚಾರ್ಯರು ಗಣಿತ ಸಾರ ಸಂಗ್ರಹವನ್ನು ಸಂಸ್ಕೃತದಲ್ಲಿ ರಚಿಸಿದ್ದು, ಅದರಲ್ಲಿ ಗಣಿತಕ್ಕೆ ಸಂಬಂಧಿಸಿದ ಎಲ್ಲಾ ವಿಷಗಳೂ ಇದ್ದವು, ಹಾಗೆಯೇ ನೇಮಿಚಂದ್ರ ಸಿದ್ಧಾಂತ ಚಕ್ರವರ್ತಿಗಳ ಗೊಮ್ಮಟಸಾರ, ಲಬ್ಧಿಸಾರ, ಮತ್ತು ತ್ರಿಲೋಕಸಾರ ಗ್ರಂಥಗಳಲ್ಲಿಯೂ ಗಣಿತ ವಿಷಯಗಳಿವೆ ಎಂದರು.

ಸಕಾರಾತ್ಮಕ ಗುಣಗಳನ್ನು ಸಂಕಲನ ಮಾಡಿ: ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಜೈನ ಮಠದ ಪೀಠಾಧ್ಯಕ್ಷ ಚಾರುಕೀರ್ತಿ ಭಟ್ಟಾರಕರು ಆಶೀರ್ವಚನ ನೀಡಿದರು. ಸಕಾರಾತ್ಮಕ ಗುಣಗಳನ್ನು ಸಂಕಲನ ಮಾಡಿ, ನಕಾರಾತ್ಮಕತೆಯನ್ನು ದೇಹದಿಂದ ಹೊರ ಹಾಕುವ ವ್ಯವಕಲನ ಮಾಡಿ, ದಿವ್ಯತೆಯ ಗುಣಗಳನ್ನು ತಮ್ಮ ಜ್ಞಾನಾರ್ಜನೆಯಿಂದ ಗುಣಿಸಿ, ಬೇಡವಾದುದನ್ನು ಭಾಗಿಸಿ ಒಳಿತನ್ನು ಎಲ್ಲರಿಗೂ ಹಂಚುವುದರ ಮೂಲಕ ನಮ್ಮ ಸಂಸ್ಕೃತಿಯನ್ನು ವೃದ್ಧಿಗೊಳಿಸಬೇಕು ಎಂದು ನುಡಿದರು.

ಸೊನ್ನೆಯ ರೀತಿ ಸಮಚಿತ್ತರಾಗಿ: ಸೊನ್ನೆಯನ್ನು ಯಾವುದೇ ಚಿಕ್ಕ ಅಥವಾ ದೊಡ್ಡ ಸಂಖ್ಯೆಯಿಂದ ಸಂಕಲನ, ವ್ಯವಕಲನ ಕ್ರಿಯೆ ಮಾಡಿದರೂ ಅದು ವ್ಯತ್ಯಾಸವಾಗುವುದಿಲ್ಲ ಹಾಗೇಯೇ , ಸೊನ್ನೆಗೆ ಸೊನ್ನೆ ಸೇರಿಸಿದರೂ ಸಹ ಯಾವುದೇ ವ್ಯತ್ಯಾಸವಾಗುವುದಿಲ್ಲ ಅದೇ ರೀತಿ ಮನುಷ್ಯ ಸುಖ ದುಃಖಗಳಲ್ಲಿ, ಕಷ್ಟ ನಷ್ಟಗಳಲ್ಲಿ ವಿಚಲಿತನಾಗದೇ ಸಮಚಿತ್ತನಾಗಿ ಸ್ಥಿರವಾಗಿರುವುದನ್ನು ಕಲಿಯಬೇಕು ಮತ್ತು ಪೂರ್ಣತೆಯನ್ನು ಹೊಂದಬೇಕು ಎಂದು ಸಲಹೆ ನೀಡಿದರು.

ಹುಟ್ಟಿನಿಂದಲೇ ಗಣಿತ ಆರಂಭ: ಮನುಷ್ಯ ಹುಟ್ಟಿನಿಂದಲೇ ಗಣಿತ ಆರಂಭವಾಗುತ್ತದೆ. ಯಾವ ಧರ್ಮವೇ ಆಗಲಿ, ಯಾವ ಶಾಸ್ತ್ರಗಳೇ ಆಗಲಿ ಅಲ್ಲಿ ಗಣಿತ ಇರುತ್ತದೆ. ಇಂದಿನ ಸಮಾವೇಶದ ಅಧ್ಯಕ್ಷರಾದ ಪದ್ಮಾವತಮ್ಮ ಕರ್ನಾಟಕದಲ್ಲಿ ಗಣಿತಕ್ಕೋಸ್ಕರ ಶ್ರಮಿಸಿದ ಆಚಾರ್ಯರ ಬಗ್ಗೆ ಪ್ರಪಂಚಕ್ಕೆ ಪರಿಚಯಿಸುವ ಪ್ರಯತ್ನ ಮಾಡಿದ್ದಾರೆ. ಗಣಿತ ಕಷ್ಟವೆಂದು ಅನಿಸದೇ ಇಷ್ಟವೆಂದು ಅನಿಸುವಂತೆ ಮಾಡಬೇಕು ಎಂದರು.

ಶಾಸಕ ಸಿ.ಎನ್‌.ಬಾಲಕೃಷ್ಣ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಕತ್ತರಿಘಟ್ಟ ಮೆಳ್ಳಿಯಮ್ಮ ಆಧ್ಯಾತ್ಮಕ ಕೇಂದ್ರದ ಚಂದ್ರಶೇಖರ ಗುರೂಜಿ, ಡಿಡಿಪಿಐ ಕೆ.ಎಸ್‌.ಪ್ರಕಾಶ್‌ ಮಾತನಾಡಿದರು.

ತಾಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಜಿಪಂ ಸದಸ್ಯೆ ಮಮತಾ, ತಾಪಂ ಸದಸ್ಯರಾದ ಮಹಾಲಕ್ಷ್ಮಿ, ಪ್ರಮೀಳಾ, ಗ್ರಾಪಂ.ಅಧ್ಯಕ್ಷೆ ಲತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಲುವನಾರಾಯಣಸ್ವಾಮಿ, ನಿವೃತ್ತ ನಿರ್ದೇಶಕ ಎಸ್‌.ಜಯಕುಮಾರ, ನಿವೃತ್ತ ಜಂಟಿ ನಿರ್ದೇಶಕ ರಂಗೇಗೌಡ, ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಲಕ್ಷ್ಮಣ, ಬಿಇಒಗಳಾದ ಎನ್‌.ಜೆ.ಸೋಮನಾಥ, ಶಿವಾನಂದ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮೇಳನಾಧ್ಯಕ್ಷರ ಅದ್ದೂರಿ ಮೆರವಣಿಗೆ: ಅಖೀಲ ಕರ್ನಾಟಕ ಗಣಿತ ಸಮಾವೇಶದ ಸಮ್ಮೇಳನಾಧ್ಯಕ್ಷೆ ಮೈಸೂರು ಮಾನಸ ಗಂಗೋತ್ರಿಯ ನಿವೃತ್ತ ಪ್ರಾಧ್ಯಾಪಕಿ ಪದ್ಮಾವತಮ್ಮ ಅವರ ಮೆರವಣಿಗೆ ಶ್ರೀಕ್ಷೇತ್ರ ಶ್ರವಣಬೆಳಗೊಳದಲ್ಲಿ ಅದ್ದೂರಿಯಾಗಿ ನಡೆಯಿತು.

ಮೈಸೂರು ಬ್ಯಾಂಡ್ಸೆಟ್‌, ಚಿಟ್ಟಿಮೇಳ, ಕಳಶ ಹೊತ್ತ ಕೂಷ್ಮಾಂಡಿನಿ ಮಹಿಳಾ ಸಮಾಜದ ಸದಸ್ಯರು, ಕನ್ನಡ ಧ್ವಜ ಹಿಡಿದ ಅಂಬಿಕಾ ಶಾಲೆ ವಿದ್ಯಾರ್ಥಿಗಳು, ಸ್ಕೌಟ್‌ ವಿದ್ಯಾರ್ಥಿಗಳ ತಂಡದವರು ಮೆರವಣಿಗೆಯಲ್ಲಿ ಸಾಗಿದರು. ವಿದ್ಯಾನಂದ ಧರ್ಮ ಶಾಲಾ ಆವರಣದಲ್ಲಿ ಕ್ಷೇತ್ರದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕರು ಸಮಾವೇಶದ ಅಧ್ಯಕ್ಷರನ್ನು ಸ್ವಾಗತಿಸಿ ಕನ್ನಡಾಂಬೆಗೆ ಜಯವಾಗಲಿ ಎಂದು ಜೈಕಾರ ಹಾಕಿದರು. ಡಿಡಿಪಿಐ ಕೆ.ಎಸ್‌.ಪ್ರಕಾಶ್‌ ಮೆರವಣಿಗೆಗೆ ಚಾಲನೆ ನೀಡಿದರು. ಶ್ರವಣಬೆಳಗೊಳದ ಚಾವುಂಡರಾಯ ಸಭಾ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.

700 ಗಣಿತ ಶಿಕ್ಷಕರು ಭಾಗಿ: ಸಮಾವೇಶದಲ್ಲಿ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ 700 ಕ್ಕೂ ಹೆಚ್ಚು ಗಣಿತ ಶಿಕ್ಷಕರು ಪಾಲ್ಗೊಂಡಿದ್ದರು, ಜೈನಕಾಶಿ ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಮಾವೇಶದ ಅಧ್ಯಕ್ಷೆ ಪದ್ಮಾವತಮ್ಮ ಅವರಿಗೆ ಹಾರ ಮತ್ತು ಗಣಿತ ಮಾದರಿ ಒಳಗೊಂಡ ಪೇಟ ಧಾರಣೆ ಮಾಡುವ ಮೂಲಕ ಪೂರ್ಣಕುಂಭ ಸ್ವಾಗತ ನೀಡಿ, ವೇದಿಕೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು.

ಗಮನ ಸೆಳೆದ ಮಾದರಿಗಳು: ಸಭಾ ಮಂಟಪದಲ್ಲಿ ಅಂಕಗಣಿತ, ಬೀಜಗಣಿತ, ರೇಖಾಗಣಿತಕ್ಕೆ ಸಂಬಂಧಿಸಿದ ಬ್ಯಾನರ್‌, ಮಾದರಿಗಳು ಒಂದೆಡೆಯಾದರೆ, ಗಣಿತ ಶಾಸ್ತ್ರಕ್ಕೆ ಕೊಡುಗೆ ನೀಡಿದ ದಾರ್ಶನಿಕರಾದ ಬ್ರಹ್ಮಗುಪ್ತ, ಆರ್ಯಭಟ, ಶ್ರೀನಿವಾಸ ರಾಮಾನುಜಂ, ಮಹಾವೀರಾಚಾರ್ಯ ವಿವರಗಳೊಂದಿಗೆ ಭಾವಚಿತ್ರಗಳು ಗಮನ ಸೆಳೆದವು.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.