ಮಂಗನ ಕಾಯಿಲೆಗೆ ಸಾಗರ ಮಹಿಳೆ ಬಲಿ
Team Udayavani, Jan 12, 2020, 3:00 AM IST
ಸಾಗರ: ಕಳೆದ ವರ್ಷದಿಂದ ಮಲೆನಾಡಿನ ಸಾಗರ ತಾಲೂಕನ್ನು ತೀವ್ರವಾಗಿ ಕಾಡುತ್ತಿರುವ ಮಂಗನ ಕಾಯಿಲೆ ಈ ಬಾರಿ ವರ್ಷಾರಂಭದಲ್ಲೇ ಮೊದಲ ಬಲಿ ಪಡೆದಿದೆ. ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಚದರವಳ್ಳಿ ಸಮೀಪದ ಶೀಗೆಮಕ್ಕಿಯ ಹೂವಮ್ಮ (58) ಶನಿವಾರ ಚಿಕಿತ್ಸೆ ಫಲಿಸದೆ ಮಣಿಪಾಲದ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಜ.8ರಂದು ಜ್ವರ ಕಾಣಿಸಿಕೊಂಡಾಗ ಕೆಎಫ್ಡಿ ವೈರಸ್ ಸೋಂಕು ತಗುಲಿರಬಹುದು ಎಂಬ ಶಂಕೆಯಿಂದ ಮಣಿಪಾಲದ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ರಕ್ತ ಪರೀಕ್ಷೆ ನಡೆಸಲಾಗಿತ್ತು. ಗುರುವಾರವಷ್ಟೇ ಇವರ ದೇಹದಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆಯ ವೈರಸ್ ಇರುವುದು ದೃಢಪಟ್ಟಿತ್ತು.
ಚಿಕಿತ್ಸೆ ಮುಂದುವರಿದಿದ್ದರೂ ಅವರ ಆರೋಗ್ಯದಲ್ಲಿ ಸುಧಾರಣೆ ಆಗಿರಲಿಲ್ಲ. ಇವರ ಮನೆಯಲ್ಲಿನ ಎಲ್ಲರೂ ಕೆಎಫ್ಡಿ ಲಸಿಕೆ ಹಾಕಿಸಿಕೊಂಡಿದ್ದರೂ ಹೂವಮ್ಮ ಮಾತ್ರ ಹಾಕಿಸಿಕೊಂಡಿರಲಿಲ್ಲ ಎನ್ನಲಾಗಿದೆ. ಕಳೆದ ವರ್ಷ ತಾಲೂಕಿನ ಅರಳಗೋಡು ಭಾಗದಲ್ಲಿ 23 ಜನ ಕೆಎಫ್ಡಿಗೆ ಬಲಿಯಾದುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ