ದುಬಾೖಯಲ್ಲಿ ಮಳೆ: ಜನಜೀವನ ಅಸ್ತವ್ಯಸ್ತ
Team Udayavani, Jan 12, 2020, 12:54 AM IST
ದುಬಾೖ: ಈ ವಾರಾಂತ್ಯಕ್ಕೆ ಸುರಿಯಲಾರಂಭಿಸಿರುವ ಭಾರೀ ಮಳೆಯಿಂದಾಗಿ ದುಬಾೖಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಶನಿವಾರ ಬೆಳಗ್ಗೆಯಿಂದಲೇ ಸುರಿದ ಮಳೆಯಿಂದ ನಗರದ ರಸ್ತೆಗಳು, ತಗ್ಗುಪ್ರದೇಶಗಳು ಜಲಾವೃತಗೊಂಡವು. ಶನಿವಾರದಂದು ಸುಮಾರು 151 ಮಿ.ಮೀ. ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ದುಬಾೖ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ವಿಮಾನಗಳ ಹಾರಾಟವನ್ನು ಮುಂದೂಡಬೇಕಾಯಿತು. ರನ್ವೇಯಲ್ಲಿ ಹೆಚ್ಚು ನೀರು ಆವರಿಸಿದ್ದರಿಂದಾಗಿ ಬಹುತೇಕ ವಿಮಾನಗಳು ಟೇಕಾಫ್ ಆಗದೇ ಉಳಿದವು. ಶನಿವಾರ ಬೆಳಗ್ಗೆ ಶುರುವಾದ ಮಳೆ, ಆಗಾಗ ಕೊಂಚ ಬಿಡುವು ಕೊಟ್ಟರೂ ಮಧ್ಯರಾತ್ರಿಯಿಂದ ಪುನರಾರಂಭ ವಾಗಿತ್ತು. ಮಳೆಯ ಅಗಾಧತೆ ಮುಂದುವರಿದ ಕಾರಣ, ರವಿ ವಾರ ದುಬಾೖಯ ಎಲ್ಲ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸೋಮವಾರ ಮೋಡ ಕವಿದ ವಾತಾವರಣ ವಿರಲಿದ್ದು, ಮತ್ತೆ ಮಳೆ ಸುರಿಯುವ ಸಾಧ್ಯತೆಯೂ ಇದೆ ಎಂದು ಸ್ಥಳೀಯ ಹವಾಮಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ