ಜುಬ್ಬಾ, ಪೈಜಾಮಾ, ಬ್ಯಾಗೇ ಆಸ್ತಿ !


Team Udayavani, Jan 12, 2020, 3:06 AM IST

jubba

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆ ಮಾತಿನಂತೆ ಡಾ.ಚಿದಾನಂದಮೂರ್ತಿಯವರು ಕನ್ನಡ ಕಟ್ಟುವ ಕಾಯಕವೇ ಕೈಲಾಸ ಎಂದು ನಂಬಿ ಬಹು ಎತ್ತರಕ್ಕೆ ಬೆಳೆದವರು. ಅಸಂಖ್ಯಾತ ಅಭಿಮಾನಿ, ಗೆಳೆಯರನ್ನು ಸಂಪಾದಿಸಿದವರು. ಸಂಶೋಧನೆ ಕ್ಷೇತ್ರದ ಬಹುದೊಡ್ಡ ಸಾಧಕ.

ಕನ್ನಡಕ್ಕೆ ಧಕ್ಕೆ ಬಂದಾಗ, ಇತಿಹಾಸ ತಿರುಚುವ ಕೆಲಸ ನಡೆಯುತ್ತಿದೆ ಎಂದೆನಿಸಿದಾಗ, ಕನ್ನಡಕ್ಕೆ ಸಂಬಂಧಿಸಿದ ಪುರಾತನ ಶಾಸನ, ವಿಗ್ರಹ, ಸ್ಮಾರಕದ ಸಂಶೋಧನೆಯಾದಾಗ, ಟಿಪ್ಪು ಜಯಂತಿ ವಿವಾದ ಕೇಳಿ ಬಂದಾಗ ಬೆಂಗಳೂರು ಪ್ರಸ್‌ಕ್ಲಬ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿದಾನಂದಮೂರ್ತಿಯವರು ಸ್ವತಃ ಕೈಯಾರೆ ಬರೆದಿದ್ದ ಹೇಳಿಕೆ ಕೊಡುತ್ತಿದ್ದರು. ಒಮ್ಮೊಮ್ಮೆ ಪ್ರತಿಗಳು ಸಾಕಾಗದಿದ್ದಾಗ ಮತ್ತೆ ಕೈಯಲ್ಲೇ ಬರೆದು ಪತ್ರಿಕಾ ಕಚೇರಿಗಳಿಗೆ ಕಳುಹಿಸಿದ್ದೂ ಇದೆ.

ಬಿಳಿ ಬಣ್ಣದ ಜುಬ್ಬಾ, ಪೈಜಾಮಾ, ಊರುಗೋಲು, ಚಳಿ ಇದ್ದರೆ ಸ್ವೆಟರ್‌, ಕುಲಾಯಿ ಹಾಕಿಕೊಂಡು ಬರುತ್ತಿದ್ದ ಚಿದಾನಂದಮೂರ್ತಿಯವರು ಒಂದು ಬ್ಯಾಗ್‌ ನೇತಾಕಿಕೊಂಡು ಅದರಲ್ಲಿ ತಾವು ಮಾತನಾಡುವ ವಿಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇರಿಸಿಕೊಂಡಿರುತ್ತಿದ್ದರು. ತಾವು ಪ್ರತಿಪಾದಿಸುತ್ತಿದ್ದ ವಿಚಾರಕ್ಕೆ ನಿಷ್ಠರಾಗಿರುತ್ತಿದ್ದರು. ಹೇಳಿಕೆಗೆ ಬದ್ಧರಾಗುತ್ತಿದ್ದರು.

ಕನ್ನಡದ ವಿಚಾರಗಳಷ್ಟೇ ಅಲ್ಲದೆ ಲಿಂಗಾಯಿತ ಪ್ರತ್ಯೇಕ ಧರ್ಮ, ಟಿಪ್ಪು ಜಯಂತಿ, ಶಾಲಾ ಪಠ್ಯಕ್ರಮ ವಿಚಾರಗಳಲ್ಲೂ ತನ್ನ ಅನಿಸಿಕೆ- ಅಭಿಪ್ರಾಯ ಯಾವುದೇ ಅಂಜಿಕೆ ಇಲ್ಲದೆ ಮುಲಾಜಿಗೆ ಒಳಗಾಗದೆ ಖಡಕ್‌ ಆಗಿ ಹೇಳುತ್ತಿದ್ದರು. ಅಭಿಮಾನಿಗಳು, ಶಿಷ್ಯರು ಎಷ್ಟೇ ಒತ್ತಾಯ ಮಾಡಿದರೂ ಚಿ.ಮೂ ಅವರು ಕೊನೆವರೆಗೂ ಮೊಬೈಲ್‌ ಬಳಸಲೇ ಇಲ್ಲ.

ತಮ್ಮ ಸಂಪರ್ಕ ಮಾಡಬೇಕಾದರೆ ಹೇಗೆ ಎಂದು ಅವರನ್ನು ಕೇಳಿದರೆ, ಕನ್ನಡದಲ್ಲೇ ಸೊನ್ನೆ ಎಂಟು ಸೊನ್ನೆ ಎರಡು ಮೂರು ಮೂರು ಸೊನ್ನೆ ಸೊನ್ನೆ ಆರು ಎಂಟು ಏಳು (080-23300687) ಎಂದು ಹೇಳುತ್ತಿದ್ದರು. ಯಾವುದಾದರೂ ವಿಷಯದ ಬಗ್ಗೆ ಪ್ರತಿಕ್ರಿಯೆ, ಅಭಿಪ್ರಾಯ, ಸಂದರ್ಶನ ನೀಡಲು ಕೇಳಿದಾಗ, ಎಷ್ಟು ಹೊತ್ತು ಮಾತನಾಡಲಿ, ಎರಡು ನಿಮಿಷ, ಐದು ನಿಮಿಷ, ಹತ್ತು ನಿಮಿಷ, ಇಪ್ಪತ್ತು ನಿಮಿಷ ಎಂದು ಕೇಳುತ್ತಿದ್ದರು.

ನಾನು, ಚಿದಾನಂದ ಮೂರ್ತಿ, ಸಂಶೋಧಕ….: ಒಮ್ಮೆ ಪ್ರಸ್‌ಕ್ಲಬ್‌ನಲ್ಲಿ ಯುವ ಪತ್ರಕರ್ತರೊಬ್ಬರು ಡಾ.ಚಿದಾನಂದಮೂರ್ತಿ ಅವರ ಬಗ್ಗೆ ತಿಳಿಯದೆ ನಿಮ್ಮನ್ನು ಪರಿಚಯ ಮಾಡಿಕೊಳ್ಳಿ ಎಂದು ಹೇಳಿಬಿಟ್ಟರು. ಅಲ್ಲಿದ್ದ ಇತರೆ ಹಿರಿಯ ಪತ್ರಕರ್ತರು ಏನಪ್ಪಾ ನಿನಗೆ ಚಿಮೂ ಗೊತ್ತಿಲ್ಲವಾ? ಎಂದು ದಬಾಯಿಸಿದರು.

ಆದರೆ, ಚಿದಾನಂದಮೂರ್ತಿ ಅವರು, ನಾನು ಚಿದಾನಂದಮೂರ್ತಿ, ಸಂಶೋಧಕ, ಕನ್ನಡ ಹೋರಾಟಗಾರ ಎಂದು ಸಮಾಧಾನದಿಂದಲೇ ಪರಿಚಯಿಸಿಕೊಂಡಿದ್ದರು. ಆ ನಂತರದ ಪ್ರತಿ ಪತ್ರಿಕಾಗೋಷ್ಠಿಯಲ್ಲೂ ಮೊದಲಿಗೆ ತಾವೇ ಸ್ವಯಂ ಪ್ರೇರಿತವಾಗಿ ನಾನು ಚಿದಾನಂದಮೂರ್ತಿ ಸಂಶೋಧಕ ಹಾಗೂ ಕನ್ನಡ ಹೋರಾಟಗಾರ ಎಂದು ಪರಿಚಯಿಸಿಕೊಳ್ಳಲು ಪ್ರಾರಂಭಿಸಿದರು.

* ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.