ಆವಾಸ್‌ ಯೋಜನೆಗೆ ಅರ್ಜಿಯೇ ಇಲ್ಲ


Team Udayavani, Jan 12, 2020, 1:09 PM IST

gadaga-tdy-3

ಗಜೇಂದ್ರಗಡ: ಬಡ ಹಾಗೂ ಮಧ್ಯಮ ವರ್ಗದವರು ಸ್ವಂತ ಸೂರು ಹೊಂದಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಆವಾಸ್‌ ಯೋಜನೆ ಸಮರ್ಪಕ ಜಾರಿಗೆ ಬರುತ್ತಿಲ್ಲ. ಅಧಿಕಾರಿಗಳ ನಿರುತ್ಸಾಹದಿಂದಾಗಿ ಮಹತ್ವಾಕಾಂಕ್ಷೆ ಯೋಜನೆ ಲಾಭ ಜನ ಪಡೆಯುತ್ತಿಲ್ಲ.

ದೇಶದ ಪ್ರತಿಯೊಂದು ಕುಟುಂಬ ಸ್ವಂತ ಸೂರು ಹೊಂದಬೇಕು ಎನ್ನುವ ಮಹದಾಸೆಯಿಂದ ಕೇಂದ್ರ ಸರ್ಕಾರ ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದ ಕುಟುಂಬಗಳಿಗೆ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಸಹಕಾರಿಯಾಗುವ ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಜಾರಿಗೆ ತಂದಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿರಲ್ಲಿ ಜಾಗೃತಿ ಮೂಡಿಸದ ಪರಿಣಾಮ ಹಲವಾರು ಕುಟುಂಬಗಳು ಈ ಯೋಜನೆಯಿಂದ ವಂಚಿತರಾಗಿದ್ದಾರೆ.

ಏನಿದು ಯೋಜನೆ?: ಪ್ರಧಾನಮಂತ್ರಿ ಆವಾಸ್‌ ಯೋಜನೆಯಲ್ಲಿ ನಗರ, ಪಟ್ಟಣ ಮಧ್ಯಮ ವರ್ಗದ ಜನತೆಗೆ ಸಾಲ ಆಧಾರಿತ ಸಬ್ಸಿಡಿ ಯೋಜನೆ ಇದಾಗಿದೆ. ಯೋಜನೆಯ ಉಪ ಘಟಕವಾದ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಅಡಿಯಲ್ಲಿ ಬಹುತೇಕ ಎಲ್ಲ ನಗರ, ಪಟ್ಟಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಧ್ಯಮ ವರ್ಗದ ಕುಟುಂಬಗಳು ವಾರ್ಷಿಕ 18 ಲಕ್ಷ ರೂ. ವರೆಗೆ ಆದಾಯ ಹೊಂದಿದವರು ಬಡ್ಡಿ ಸಬ್ಸಿಡಿ ಪಡೆಯಬಹುದು. ಸ್ವಂತ ನಿವೇಶನದಲ್ಲಿ ಮನೆ ನಿರ್ಮಿಸುವವರಿಗೆ ಅಥವಾ ಫ್ಲಾಟ್‌ ಖರೀದಿಯ ಸಾಲಕ್ಕೂ ಈ ಯೋಜನೆ ಅನ್ವಯವಾಗುತ್ತದೆ. ಈ ಯೋಜನೆಯಲ್ಲಿ ಪತಿ, ಪತ್ನಿ ಮತ್ತು ಅವಿವಾಹಿತ ಮಕ್ಕಳು, ಅವಿವಾಹಿತರಾಗಿದ್ದರೂ ಸಂಪಾದನೆ ಮಾಡುತ್ತಿರುವ ವಯಸ್ಕ ವ್ಯಕ್ತಿ ಇದ್ದರೆ ಅವರನ್ನೂ ಪ್ರತ್ಯೇಕ ಕುಟುಂಬ ಎಂದು ಪರಿಗಣಿಸಿ ಸೌಲಭ್ಯ ನೀಡಲಾಗುತ್ತಿದೆ.

ಸ್ವಂತ ಮನೆ ಇಲ್ಲದವರು ಈ ಯೋಜನೆ ಪ್ರಯೋಜನ ಪಡೆಯಬಹುದು. ಪತಿ-ಪತ್ನಿ ಜಂಟಿಯಾಗಿಯೂ ಅರ್ಜಿ ಸಲ್ಲಿಸಬಹುದು. ಯಾವುದೇ ಇತರ ಸರಕಾರಿ ಹೌಸಿಂಗ್‌ ಯೋಜನೆಯ ನೆರವು ಹೊಂದಿರುವಂತಿಲ್ಲ. ಇದರಲ್ಲಿ ಆದಾಯವನ್ನು ಅವಲಂಬಿಸಿ 6 ಲಕ್ಷದಿಂದ 18 ಲಕ್ಷ ರೂ. ವರೆಗೆ ಸಾಲ ಪಡೆಯಬಹುದಾಗಿದೆ.

16 ಫಲಾನುಭವಿಗಳಿಗೆ ಮಾತ್ರ ಯೋಜನೆ ಲಾಭ : ಕೇಂದ್ರ ಸರ್ಕಾರ 2015ರಲ್ಲಿಯೇ ಈ ಯೋಜನೆ ಜಾರಿಗೊಳಿಸಲಾಗಿದೆ. ಆದರೆ ಗಜೇಂದ್ರಗಡ ಪುರಸಭೆ ವ್ಯಾಪ್ತಿಯಲ್ಲಿ ನಾಲ್ಕು ವರ್ಷದಲ್ಲಿ 70ಕ್ಕೂ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆ. ಕೇವಲ 16 ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ದೊರೆತಿದೆ. ಎಷ್ಟು ಜನರು ಅರ್ಜಿ ಸಲ್ಲಿಸುತ್ತಾರೋ ಅವರೆಲ್ಲರೂ ಸ್ಕಿಂ ಪ್ರಯೋಜನ ಪಡೆದುಕೊಳ್ಳಬಹುದು. ಆದರೆ ಸಮರ್ಪಕ ದಾಖಲೆಗಳು ಮತ್ತು ಬ್ಯಾಂಕಿನೊಂದಿಗಿನ ವಹಿವಾಟಿನ ಆಧಾರದ ಮೇಲೆ ಈ ಸೌಲಭ್ಯ ದೊರೆಯಲಿದೆ. ಆದರೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಯೋಜನೆ ಬಗ್ಗೆ ಸಾರ್ವಜನಿರಿಗೆ ಸರಿಯಾಗಿ ಮಾಹಿತಿ ನೀಡದಿರುವುದೇ ಮಹತ್ವಾಕಾಂಕ್ಷೆ ಯೋಜನೆ ಬಡ ಕುಟುಂಬಗಳಿಗೆ ತಲುಪುತ್ತಿಲ್ಲ ಎನ್ನುವುದು ಜನಸಾಮಾನ್ಯರ ಅಳಲಾಗಿದೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಕ್ರೆಡಿಟ್‌ ಲಿಂಕ್ಡ್ ಸಬ್ಸಿಡಿ ಸ್ಕಿಂ ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಕೆಲ ಅಧಿಕಾರಿಗಳು ನಿರುತ್ಸಾಹ ತೋರಿದ ಬಗ್ಗೆ ಗಮನಕ್ಕೆ ಬಂದಿದೆ. ಯೋಜನೆ ಕುರಿತು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಮತ್ತು ಬ್ಯಾಂಕ್‌ ಅಧಿಕಾರಿಗಳಿಗೆ ತರಬೇತಿ ನೀಡಿ ಯೋಜನೆ ಬಗ್ಗೆ ಸಮರ್ಪಕ ಮಾಹಿತಿ ನೀಡಲಾಗುವುದು. ಜೊತೆಗೆ ಜಿಲ್ಲೆಯ ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಸಭೆ ಕರೆದು ಯೋಜನೆ ಜಾರಿಗೆ ಸಹಕರಿಸಲು ಮನವಿ ಮಾಡಲಾಗುವುದು.  ಎನ್‌. ರುದ್ರೇಶ, ಜಿಲ್ಲಾ ಯೋಜನಾ ನಿರ್ದೇಶಕ

 

-ಡಿ.ಜಿ. ಮೋಮಿನ್‌

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.