10 ರೂಗೆ ಅನ್ನ ನೀಡಿ ಹಸಿವು ನೀಗಿಸಿದ ವಾತ್ಸಲ ಟ್ರಸ್ಟ್


Team Udayavani, Jan 12, 2020, 1:32 PM IST

12-Janauary-11

ಹೊಸಪೇಟೆ: ಹತ್ತು ರೂಪಾಯಿಗೆ ಒಂದು ಲೀಟರ್‌ ನೀರು ಸಿಗದಂತ ಕಾಲದಲ್ಲಿ ಕೇವಲ ಹತ್ತು ರೂಪಾಯಿಗೆ ಊಟ ನೀಡಿ, ಜನರಿಗೆ ಹಸಿವು ನೀಗಿಸಲು ನಗರದ ವಾತ್ಸಲ ಟ್ರಸ್ಟ್‌ನ ಆಕಾಂಕ್ಷ ವಿಶೇಷ ಮಕ್ಕಳ ಶಾಲೆ ಮುಂದಾಗಿದೆ.

ನಗರದ ಅನಂತಶಯನ ಗುಡಿ ಗ್ರಾಮದ ಅಮೃತ್‌ ಶಕ್ತಿ ಬಡವಾಣೆಯಲ್ಲಿರುವ ವಾತ್ಸಲ ಟ್ರಸ್ಟ್‌ನ ಆಕಾಂಕ್ಷ ವಿಶೇಷ ಮಕ್ಕಳ ಶಾಲೆ ಈ ಬಾರಿ ಹಂಪಿ ಉತ್ಸವದಲ್ಲಿ ಪ್ರಥಮ ಬಾರಿಗೆ 10 ರೂ ಬಾಳೆ ಎಲೆಯಲ್ಲಿ ಊಟ ಮಣ್ಣಿನ ಮಡಿಕೆಯಲ್ಲಿ ಕುಡಿಯುವ ನೀರು ನೀಡುತ್ತಿದೆ.

ಹಂಪಿ ಪಾರ್ಕಿಂಗ್‌ ಪ್ರದೇಶ ತೆರೆಯಲಾದ ಊಟದ ಮಳಿಗೆಯಲ್ಲಿ ದೇಶಿ ಊಟ ಹಾಗೂ ದೇಶಿ ವಸ್ತುಗಳ ಬಳಕೆ ಮಾಡುವುದರ ಜೊತೆಗೆ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಷೇ ಧಿಸಬೇಕು ಎಂಬ ಜಾಗೃತಿ ಮೂಡಿಸುತ್ತಿದೆ. ಸ್ಥಳದಲ್ಲಿ ಚಿತ್ರನ್ನ, ಪುದಿನಾ ರೈಸ್‌, ಪಾಲಕ್‌ ರೈಸ್‌ ಸೇರಿದಂತೆ ನಾನಾ ರೈಸ್‌ ಐಟಂ ತಯಾರಿಸಿ, ಪ್ರವಾಸಿಗರಿಗೆ ಉಣ ಬಡಿಸುತ್ತಿದ್ದಾರೆ.

ಈ ಊಟಕ್ಕಾಗಿ ಜನರು, ಮುಗಿ ಬೀಳುತ್ತಿದ್ದು, ಸರದಿ ಕಾಲಿನಲ್ಲಿ ಕಾದು ನಿಂತ ಆಹಾರ ಪಡೆದುಕೊಳ್ಳುತ್ತಿದ್ದಾರೆ. ಬುದ್ದಿಮಾಂದ್ಯ ಮಕ್ಕಳ ಮನೋವಿಕಾಸಕ್ಕಾಗಿ ಹಗಲಿರಳು ಶ್ರಮಿಸುತ್ತಿರುವ ಆಂಕಾಕ್ಷ ಶಾಲೆಯ ಆಡಳಿತ ಮಂಡಳಿಯೊಂದಿಗೆ ಮಕ್ಕಳ ಪಾಲಕರು ಕೈಜೋಡಿಸಿದ್ದು, 15 ಸದಸ್ಯರ ತಂಡ, ಕಳೆದ ಎರಡು ದಿನಗಳಿಂದ ಹಗಲಿರಳು ಶ್ರಮಿಸುತ್ತಿದ್ದಾರೆ. ಊಟ ಮಾಡಿದ ಪ್ರತಿಯೊಬ್ಬ ಪ್ರವಾಸಿಗರು ರುಚಿಯಾದ ಊಟ ಸೇವಿಸಿ, ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಪಾರಾಂಪರಿಕ ಊಟ: ಮಾತಂಗ ಪರ್ವತ ಪ್ರದೇಶದ ತೆರೆಯಲಾಗಿರುವ ಮಳಿಗೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕಡಿಮೆ ಬೆಲೆಯಲ್ಲಿ ಬಡ-ಮಧ್ಯಮ ವರ್ಗದ ಜನರಿಗೂ ಕೈಗೆಟುವ ರೀತಿಯಲ್ಲಿ ರುಚಿಗಟ್ಟದ ಊಟವನ್ನು ನೀಡುತ್ತಿದ್ದಾರೆ ಹಂಪಿಯ ಶ್ರೀ ಶಾರದ ಮಹಿಳಾ ಸ್ವಸಹಾಯ ಸಂಘದ ಸದಸ್ಯರು. 150 ರೂಪಾಯಿಗೆ ಹೋಳಿಗೆ, ಅನ್ನ, ಸಂಬಾರು, ರಸಂ, ಮೊಸರು, ಉಪ್ಪಿನಕಾಯಿ, ಕಾಯಿಚಟ್ನಿ ನೀಡುತ್ತಿದ್ದಾರೆ. 70 ರೂಪಾಯಿ ಅನ್ನ ಸಂಬಾರು, ಅಪ್ಪಳ, ಚಟ್ನಿ ನೀಡುವ ಮೂಲಕ ಜನರ ಹಸಿವನ್ನು ತಣಿಸುತ್ತಿದ್ದಾರೆ.

ಹಂಪಿ ಉತ್ಸವದ ಅಂಗವಾಗಿ ವಾತ್ಸಲ ಟ್ರಸ್ಟ್‌ನ ಆಕಾಂಕ್ಷ
ವಿಶೇಷ ಮಕ್ಕಳ ಶಾಲೆವತಿಯಂದ ಹತ್ತು ರೂಪಾಯಿ ಬಾಳೆ ಎಲೆಯಲ್ಲಿ ಊಟವನ್ನು ನೀಡಲಾಗುತ್ತಿದೆ. ಈ ಮೂಲಕ ದೇಶಿ ಊಟ, ದೇಶಿಯ ವಸ್ತುಗಳನ್ನು ಬಳಕೆ ಮಾಡುವುದು ಸೇರಿದಂತೆ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧಕ್ಕಾಗಿ ಜಾಗೃತಿ ಮೂಡಿಸಲಾಗುತ್ತಿದೆ.
ಯಶ್ವಸಿನಿ, ವಾತ್ಸಲ ಟ್ರಸ್ಟ್‌,
ಅನಂತಶಯನ ಗುಡಿ, ಹೊಸಪೇಟೆ

ಹತ್ತಾರು ವರ್ಷದಿಂದ ಕುಟಂಬ ಸಮೇತ ಹಂಪಿ ಉತ್ಸವಕ್ಕೆ ಬರುತ್ತಿದ್ದೇವೆ. ಉತ್ಸವದಲ್ಲಿ ಹಣ ನೀಡಿದರೂ ಉತ್ತಮ ಗುಣಮಟ್ಟದ ಊಟ ಸಿಗುತ್ತಿರಲ್ಲಿಲ್ಲ. ಈ ವರ್ಷದ ಉತ್ಸವದಲ್ಲಿ ಕಡಿಮೆ ಬೆಲೆಯಲ್ಲಿ ಆಹಾರ ಸಿಗುತ್ತಿದೆ. ಇದರಿಂದ ತುಂಬ ಸಂತೋಷವಾಗಿದೆ.
ರಾಜೇಶ್‌ ಪ್ರವಾಸಿಗ,
ಶಿವಮೊಗ್ಗ

„ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.