ಪ್ರತ್ಯೇಕ ವಿವಿ ಆರಂಭಿಸಲು ಆಗ್ರಹ

ತಾರಾನಾಥ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು-ಸಿಬ್ಬಂದಿ ಪ್ರತಿಭಟನಾ ರ್ಯಾಲಿ

Team Udayavani, Jan 12, 2020, 3:37 PM IST

12-Janauary-18

ರಾಯಚೂರು: ಬಹುಕಾಲದಿಂದ ನನೆಗುದಿಗೆ ಬಿದ್ದಿರುವ ರಾಯಚೂರು ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಪೂರ್ಣ ಪ್ರಮಾಣದಲ್ಲಿ ಶೀಘ್ರವೇ ಆರಂಭಿಸಲು ಆಗ್ರಹಿಸಿ ತಾರಾನಾಥ ಶಿಕ್ಷಣ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನದಲ್ಲಿ ಸೇರಿ ಧರಣಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿ ಯಲ್ಲಿ ರಾಯಚೂರಿಗೆ ಪ್ರತ್ಯೇಕ ವಿವಿ ಘೋಷಣೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಕಾಲೇಜುಗಳು ಗುಲ್ಬರ್ಗ ವಿವಿ ವ್ಯಾಪ್ತಿಗೆ ಒಳಪಡುವುದರಿಂದ ಶೈಕ್ಷಣಿಕ ವರ್ಷ ಅನಗತ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅಡಚಣೆಯಾಗುತ್ತಿದೆ. ಪ್ರತ್ಯೇಕ ವಿವಿ ಕಾರ್ಯಾರಂಭವಾದಲ್ಲಿ ಈ ಭಾಗದ ವಿದ್ಯಾರ್ಥಿಗಳಿಗೆ ಅಲೆದಾಟ ತಪ್ಪಲಿದೆ ಎಂದು ವಿವರಿಸಿದರು.

ಪ್ರತ್ಯೇಕ ವಿವಿ ಸ್ಥಾಪನೆ ಸಂಬಂಧ ಅನೇಕ ಹೋರಾಟ ನಡೆಸಲಾಗಿದೆ. 2017ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಕ್ಕೆ ಮುಂದಾದರೆ ರಾಜ್ಯಪಾಲರು ತಡೆ ಹಿಡಿದಿದ್ದಾರೆ. ಈಗಿನ ಸರ್ಕಾರ ಬಂದು ಆರು ತಿಂಗಳಾಗಿದ್ದು ಇನ್ನಾದರೂ ವಿವಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿವಿಗೆ ಅಧಿಕಾರಿಯನ್ನು ನೇಮಿಸಿದ್ದು, ಅಲ್ಲಿ ಕೆಲಸವೇ ಇಲ್ಲ. ಈಗ ಸ್ನಾತಕೋತ್ತರಕ್ಕೆ ಮಂಜೂರಾದ ಕೆಲವೊಂದು ತರಗತಿಗಳು ಮಾತ್ರ ನಡೆಯುತ್ತಿವೆ. ಉಳಿದಂತೆ ಮತ್ತೇನೂ ನಡೆಯುತ್ತಿಲ್ಲ. ವಿವಿಗೆ ಸಂಬಂಧಿಸಿದ ಆಯವ್ಯಯ
ಮುಂಗಡ ಪತ್ರದಲ್ಲಿ ಯಾವುದೇ ಹಂಚಿಕೆ ನೀಡಿಲ್ಲ. ಇದರಿಂದ ಅದೊಂದು ಗೊಂದಲದ ಗೂಡಾಗಿ ಪರಿಣಮಿಸಿದೆ ಎಂದು ದೂರಿದರು.

ಜಿಲ್ಲೆಗೆ ನ್ಯಾಯೋಚಿತವಾಗಿ ದಕ್ಕಬೇಕಿದ್ದ ಐಐಟಿ ಕೈ ತಪ್ಪಿದೆ. ಕನಿಷ್ಠ ಪಕ್ಷ ರಾಯಚೂರು ವಿವಿಗೆ ಆಡಳಿತಾತ್ಮಕ ಚಾಲನೆ ನೀಡದಿರುವುದು ವಿಪರ್ಯಾಸ. ಅಧಿ ವೇಶನದಲ್ಲಿ ಈ ಬಾರಿ ಮುಂಗಡ ಪತ್ರಕ್ಕೆ ಮೊದಲು ರಾಜ್ಯಪಾಲರ ಅನುಮೋದನೆಗೆ ಬೇಕಾದ ಎಲ್ಲ ಪ್ರಕ್ರಿಯೆ ಮುಗಿಸಬೇಕು. ವಿವಿ ಸ್ಥಾಪನೆಗೆ ಮತ್ತು ಹಣಕಾಸಿನ ವ್ಯವಸ್ಥೆಗೆ ಅನುಮೋದನೆ ನೀಡಿ ಎರಡು ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಸಂಸ್ಥೆ ಅಧ್ಯಕ್ಷ ಪಾರಸಮಲ್‌ ಸುಖಾಣಿ, ಮುಖಂಡರಾದ ಮಸ್ಕಿ ನಾಗರಾಜ, ಕೆ.ಶಾಂತಪ್ಪ, ಶಿವಮೂರ್ತಿ, ರುದ್ರಪ್ಪ ಅಂಗಡಿ, ದರೂರು ಬಸವರಾಜ, ಜಿ.ಸುರೇಶ, ಅಬ್ದುಲ್‌ ಕರೀಂ, ಶ್ರೀನಿವಾಸ, ಹನುಮಂತ ನಾಯಕ, ಭೀಮನಗೌಡ ಇಟಗಿ, ರಾಜೇಶ ಮಡಿವಾಳ, ವೀರೇಶ, ಅಶ್ವಿ‌ನಿಕುಮಾರ, ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.