ಬಾಕ್ಸ್ ಆಫೀಸಿನಲ್ಲಿ ಛಪಾಕ್ – ತಾನಾಜಿ ಫೈಟ್ ; ಇಲ್ಲಿದೆ ಕಲೆಕ್ಷನ್ ರಿಪೋರ್ಟ್!

ಜೆ.ಎನ್.ಯು. ವಿದ್ಯಾರ್ಥಿ ಪ್ರತಿಭಟನೆಗೆ ದೀಪಿಕಾ ಬೆಂಬಲ ಸೂಚಿಸಿದ್ದೇ ‘ಛಪಾಕ್’ಗೆ ಮುಳುವಾಯಿತೇ?

Team Udayavani, Jan 12, 2020, 8:10 PM IST

Chappak-12-1

ಮುಂಬಯಿ: ಒಂದು ಸಾಮಾಜಿಕ ಸಮಸ್ಯೆಯನ್ನು ಆಧಾರವಾಗಿಟ್ಟುಕೊಂಡು ನೈಜ ಘಟನೆಯಿಂದ ಪ್ರೇರಿತವಾಗಿ ತಯಾರಾಗಿರುವ ಚಿತ್ರ ಇನ್ನೊಂದು ಐತಿಹಾಸಿಕ ಘಟನೆಯ ಆಧಾರದಲ್ಲಿ ಸಿದ್ಧಗೊಂಡಿರುವ ಚಿತ್ರ. ವಿಶೇಷವೆಂದರೆ ಈ ಎರಡೂ ಬಾಲಿವುಡ್ ಚಿತ್ರಗಳೂ ಸಹ ಒಂದೇ ದಿನ ದೇಶಾದ್ಯಂತ ಬಿಡುಗಡೆಗೊಂಡಿದೆ. ಇವೇ ದೀಪಿಕಾ ಪಡುಕೋಣೆ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಛಪಾಕ್’ ಮತ್ತು ಅಜಯ್ ದೇವಗನ್, ಸೈಫ್ ಆಲಿಖಾನ್, ಕಾಜೊಲ್ ಮುಖ್ಯ ಭೂಮಿಕೆಯಲ್ಲಿರುವ ‘ತಾನಾಜಿ – ದಿ ಅನ್ ಸಂಗ್ ವಾರಿಯರ್’ ಚಿತ್ರಗಳು.

ಜನವರಿ 10ರಂದು ಬಿಡುಗಡೆಗೊಂಡಿರುವ ಈ ಎರಡೂ ಚಿತ್ರಗಳು ಇದೀಗ ಬಾಕ್ಸ್ ಆಫೀಸ್ ಕಲೆಕ್ಷನ್ ನಲ್ಲಿ ಪೈಪೋಟಿಗೆ ಬಿದ್ದಿವೆ. ಮೆಟ್ರೋ ನಗರಗಳು, ಮಾಸ್ ವಿಕ್ಷಕ ಪ್ರದೇಶಗಳಲ್ಲಿ ಮತ್ತು ಸಿಂಗಲ್ ಸ್ಕ್ರೀನ್ ಗಳಲ್ಲಿ ‘ತಾನಾಜಿ’ಯ ಆರ್ಭಟವೇ ಜೋರಾಗಿದೆ. ಮಹಾರಾಷ್ಟ್ರದಲ್ಲಂತೂ ‘ತಾನಾಜಿ’ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿ ಮುನ್ನುಗ್ಗುತ್ತಿದೆ ಎಂದು ಖ್ಯಾತ ಚಿತ್ರ ವಿಮರ್ಶಕ ಮತ್ತು ಉದ್ಯಮ ವಿಶ್ಲೇಷಕ ತರಣ್ ಆದರ್ಶ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಾಕ್ಸ್ ಆಫೀಸ್ ಕಲೆಕ್ಷನ್ ವಿವರಗಳನ್ನು ಪ್ರಕಟಿಸಿದ್ದಾರೆ.
#Tanhaji roars on Day 2… Metros *and* mass belt, multiplexes *and* single screens, #Tanhaji is simply remarkable… #Maharashtra is record-smashing… Other circuits – decent on Day 1 – join the celebrations on Day 2… Fri 15.10 cr, Sat 20.57 cr. Total: ₹ 35.67 cr. #India biz


ಅಜಯ್ ದೇವಗನ್ ಅವರ ನೂರನೇ ಚಿತ್ರವಾಗಿ ತೆರೆಗೆ ಅಪ್ಪಳಿಸಿರುವ ‘ತಾನಾಜಿ’ ಬಿಡುಗಡೆಗೊಂಡ ಮೊದಲ ದಿನ 15.10 ಕೋಟಿ ಕಲೆಕ್ಷನ್ ಮಾಡಿದ್ದರೆ ಶನಿವಾರ 20.57 ಕೋಟಿ ಗಳಿಸುವ ಮೂಲಕ ಕೇವಲ ಎರಡು ದಿನದಲ್ಲಿ 35.67 ಕೋಟಿ ಗಳಿಸಿದೆ.

ಇನ್ನೊಂದೆಡೆ ಆ್ಯಸಿಡ್ ಸಂತ್ರಸ್ತರ ಕಥಾ ಹಿನ್ನಲೆಯನ್ನು ಹೊಂದಿರುವ ದೀಪಿಕಾ ಪಡುಕೋಣೆ ಅಭಿನಯದ ‘ಛಪಾಕ್’ ಬಿಡುಗಡೆಯಾದ ಶುಕ್ರವಾರದಂದು ಕೇವಲ 4.77 ಕೋಟಿ ಕಲೆಕ್ಷನ್ ಮಾಡಿತ್ತು ಆದರೆ ಶನಿವಾರದಂದು ಈ ಚಿತ್ರ ಕಲೆಕ್ಷನ್ ನಲ್ಲಿ ಸ್ವಲ್ಪ ಏರುಗತಿಯನ್ನು ತೋರಿದೆ ಎರಡನೇ ದಿನದ ಕಲೆಕ್ಷನ್ 6.90 ಕೋಟಿ ರೂಪಾಯಿಗಳಾಗಿತ್ತು. ಮತ್ತು ಎರಡು ದಿನಗಳಲ್ಲಿ ಈ ಚಿತ್ರ ಒಟ್ಟು 11.67 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ.
#Chhapaak witnesses an upward trend on Day 2, but the 2-day total is underwhelming… Decent at premium multiplexes, but unable to connect *and* collect beyond metros… Needs to cover lost ground on Day 3… Fri 4.77 cr, Sat 6.90 cr. Total: ₹ 11.67 cr. #India biz.


ನಟಿ ದೀಪಿಕಾ ಪಡುಕೋಣೆ ಜೆ.ಎನ್.ಯು. ಕ್ಯಾಂಪಸ್ ಗೆ ಭೇಟಿ ನೀಡಿ ಅಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ಗುರುತಿಸಿಕೊಂಡಿದ್ದು ಬಲಪಂಥೀಯ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಮತ್ತು ದೇಶದ್ರೋಹಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ದೀಪಿಕಾ ಅವರ ಛಪಾಕ್ ಚಿತ್ರವನ್ನು ಬಹಿಷ್ಕರಿಸಬೇಕೆಂದು ಹಲವಾರು ಬಲಪಂಥೀಯ ಸಂಘಟನೆಗಳು ಹಾಗೂ ನಾಯಕರು ಬಹಿರಂಗ ಕರೆ ನೀಡಿದ್ದರು.

ಆದರೆ ಸಾಮಾಜಿಕ ಕಳಕಳಿಯ ಕಥಾಹಂದರವನ್ನು ಹೊಂದಿರುವ ಈ ಚಿತ್ರವನ್ನು ಬಹಿಷ್ಕರಿಸುವ ಕರೆ ನೀಡದಂತೆ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರು ಮನವಿ ಮಾಡಿಕೊಂಡಿದ್ದರು.

ಮೇಘಾ ಗುಲ್ಜಾರ್ ಅವರು ‘ಛಪಾಕ್’ ಚಿತ್ರವನ್ನು ನಿರ್ದೇಶನ ಮಾಡಿದ್ದರೆ ಓಂ ರಾವುತ್ ಅವರು ‘ತಾನಾಜಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಛಪಾಕ್ ಚಿತ್ರದ ಮೂಲಕ ದೀಪಿಕಾ ಅವರು ನಿರ್ಮಾಪಕಿಯಾಗಿಯೂ ತಮ್ಮ ವೃತ್ತಿ ಜೀವನದಲ್ಲಿ ಹೊಸ ಇನ್ನಿಂಗ್ಸ್ ಅನ್ನು ಪ್ರಾರಂಭಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.