ಸಿಎಎ ಜಾರಿಗೊಳಿಸುವ ಅವಶ್ಯಕತೆ ಏನಿತ್ತು: ರಮೇಶ್ ಕುಮಾರ್
Team Udayavani, Jan 12, 2020, 10:27 PM IST
ಬೆಂಗಳೂರು: ದೇಶದಲ್ಲಿ ಸಾಮಾನ್ಯ ಜನ ಎದುರಿಸುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕಿಂತ ಹೆಚ್ಚಾಗಿ ಕೇಂದ್ರ ಸರ್ಕಾರಕ್ಕೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸುವುದು ಮುಖ್ಯವಾಗಿರುವುದು ಸೋಜಿಗ ಎಂದು ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಎಂ.ಎಸ್.ಕೃಷ್ಣನ್ ಸ್ಮರಣ ಸಂಸ್ಥೆ ಹಾಗೂ ನವಕರ್ನಾಟಕ ಪ್ರಕಾಶನ ಸಂಯುಕ್ತಾಶ್ರಯದಲ್ಲಿ ಭಾನುವಾರ ಗಾಂಧಿ ಭವನದಲ್ಲಿ ನಡೆದ ಬಿ.ವಿ. ಕಕ್ಕಿಲ್ಲಾಯ ನೂರರ ನೆನಪು ಸಂಭ್ರಮ, ಪುಸ್ತಕಗಳ ಲೋಕಾರ್ಪಣೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರ ಜೀವನ ಗುಣಮಟ್ಟ ಸುಧಾರಿಸುವ, ಜಿಡಿಪಿ- ಉದ್ಯೋಗ ಹೆಚ್ಚಳ, ಸಾರ್ವಜನಿಕ ವಲಯವನ್ನು ಅಭಿವೃದ್ಧಿಪಡಿಸುವುದು ಮುಂತಾದವುಗಳ ಬಗ್ಗೆ ಗಮನಹರಿಸುವುದು ಸರ್ಕಾರದ ಆದ್ಯತೆ ಆಗಬೇಕಿತ್ತು. ಬದಲಾಗಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯಂತಹ ಕಾನೂನುಗಳನ್ನು ಜಾರಿಗೊಳಿಸುವುದು ಆದ್ಯತೆಯಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಇವುಗಳ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ ಅವರು, ಉದ್ದೇಶಿತ ಕಾಯ್ದೆಯು ಕೇವಲ ಮಸಲ್ಮಾನರಿಗೆ ತೊಂದರೆಯುಂಟಾಗುವುದಿಲ್ಲ. ಎಲ್ಲಾ ಜನತೆಗೂ ಸಮಸ್ಯೆಯಾಗಲಿದೆ ಎಂಬುದನ್ನು ಅರಿತು ಯುವಜನತೆ ಬೀದಿಗಿಳಿದಿದ್ದಾರೆ ಎಂದು ಹೇಳಿದರು.
ಸಂಸತ್ತು ಪ್ರವೇಶಿಸಿದ ನಂತರ ರಾಜಕಾರಣಿಗಳ ಆದ್ಯತಾ ವಿಷಯಗಳು ಬದಲಾಗುತ್ತಿವೆ. ಚುನಾವಣೆ ಪೂರ್ವದಲ್ಲಿ ಜನರ ಜೀವನಮಟ್ಟ ಸುಧಾರಿಸುವುದಾಗಿ ಆಶ್ವಾಸನೆ ನೀಡುವ ರಾಜಕಾರಣಿಗಳು, ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ನಿಲುವುಗಳನ್ನು ಬದಲಿಸುತ್ತಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಸದೀಯ ಪ್ರಜಾಪ್ರಭುತ್ವದಲ್ಲಿ ಪ್ರಗತಿಪರ ಶಾಸನಗಳನ್ನು ಜಾರಿಗೊಳಿಸಿ ಸಮಾಜದ ಸ್ಥಿತಿಯನ್ನು ಬದಲಾಯಿಸುವುದು ಬಿ.ವಿ.ಕಕ್ಕಿಲ್ಲಾಯ ರಾಜಕೀಯ ಸಿದ್ಧಾಂತವಾಗಿತ್ತು. ಸಾರ್ವಜನಿಕ ಜೀವನ, ಚುನಾವಣೆ ಪ್ರವೇಶಿಸಿ ಯಾವುದೇ ಕಪ್ಪು ಚುಕ್ಕೆಯಿಲ್ಲದೆ ಜೀವನ ನಡೆಸಿ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಎಂದು ಇದೇ ವೇಳೆ ತಿಳಿಸಿದರು.
ಸಮಾರಂಭದಲ್ಲಿ ಬಿ.ವಿ. ಕಕ್ಕಿಲ್ಲಾಯ ಅವರ “ಬಿ.ವಿ. ಕಕ್ಕಿಲ್ಲಾಯ ಇನ್ ಪಾರ್ಲಿಮೆಂಟ್’, “ಮನುಷ್ಯನ ಮಹಾಯಾನ’ ಕೃತಿಗಳು ಲೋಕಾರ್ಪಣೆಗೊಂಡವು. ನವಕರ್ನಾಟಕ ಪ್ರಕಾಶನದ ವ್ಯವಸ್ಥಾಪಕ ನಿರ್ದೇಶಕ ಸಿದ್ಧನಗೌಡ ಪಾಟೀಲ, ಪದಾಧಿಕಾರಿ ಎಂ.ಎಸ್. ಕೃಷ್ಣನ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ