ಕರಾವಳಿಯಲ್ಲಿ “ಯಕ್ಷ ರಂಗ’ ಸ್ಥಾಪನೆಗೆ ಸರಕಾರದ ಚಿಂತನೆ

ರಂಗಾಯಣ' ಮಾದರಿಯ ರೆಪರ್ಟರಿ ; ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲು?

Team Udayavani, Jan 13, 2020, 5:47 AM IST

0901MLR101-YAKSHAGANA

ಮಂಗಳೂರು: ರಂಗಭೂಮಿ ಚಟುವಟಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಥಾಪನೆಯಾಗಿರುವ ರಂಗಾಯಣಗಳ ಮಾದರಿಯಲ್ಲಿಯೇ ಯಕ್ಷಗಾನ ಕೇಂದ್ರಿತವಾಗಿ ಉಳಿದ ರಂಗ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ “ಯಕ್ಷ ರಂಗ’ ರೆಪರ್ಟರಿಯನ್ನು ಕರಾವಳಿಯಲ್ಲಿ ಸ್ಥಾಪಿಸಲು ಸರಕಾರ ಮುಂದಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಇದು ರೂಪುಗೊಳ್ಳಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಸಾಧ್ಯತೆಯಿದೆ.
ರಂಗಾಯಣಗಳು ಸದ್ಯ ಮೈಸೂರು, ಶಿವಮೊಗ್ಗ, ಧಾರವಾಡ, ಗುಲ್ಬರ್ಗಗಳಲ್ಲಿ ಕಾರ್ಯಾಚರಿಸುತ್ತಿವೆ. ಇಲ್ಲಿ ರಂಗಭೂಮಿಗೆ ಸಂಬಂಧಿಸಿ ಕಾರ್ಯಕಲಾಪಗಳು ನಡೆಯುತ್ತವೆ. ಇದೇ ಮಾದರಿಯಲ್ಲಿ ಯಕ್ಷಗಾನವನ್ನು ಪ್ರಧಾನವಾಗಿಸಿ ಉಳಿದ ರಂಗ ಚಟುವಟಿಕೆ ಪ್ರೋತ್ಸಾಹಿಸಲು “ಯಕ್ಷ ರಂಗ’ವನ್ನು ಪರಿಚಯಿಸಲಾಗುತ್ತದೆ.

ಕರಾವಳಿಯ ಕನ್ನಡ, ತುಳು, ಕೊಂಕಣಿ, ಬ್ಯಾರಿ ಸೇರಿದಂತೆ ವಿವಿಧ ಭಾಷಿಕ ಕಲಾ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುತ್ತ, ಯಕ್ಷಗಾನವನ್ನು ಮೂಲ ಸೆಲೆಯಾಗಿರಿಸಿ ರಾಜ್ಯವ್ಯಾಪಿ “ಯಕ್ಷ ರಂಗ’ದ ವಿನೂತನ ಪರಿಕಲ್ಪನೆಗಳನ್ನು ತಿರುಗಾಟವಾಗಿ ಒಯ್ಯಲು ಅವಕಾಶವಿದೆ.

ದ.ಕ. ಮತ್ತು ಉಡುಪಿ ಭಾಗದಲ್ಲಿ ಯಕ್ಷಗಾನ ತರಬೇತಿ ನೀಡುವ ಹಲವು ಖ್ಯಾತ ಸಂಸ್ಥೆಗಳಿವೆ. ಶಾಲಾ-ಕಾಲೇಜು, ಸಂಘ ಸಂಸ್ಥೆಗಳ ಮೂಲಕವೂ ಯಕ್ಷಗಾನ ಸಂಬಂಧಿ ಚಟುವಟಿಕೆಗಳು ನಡೆಯುತ್ತಿದೆ. ಆದರೆ ಯಕ್ಷಗಾನ ಕಲಿಕೆಯ ಜತೆಗೆ ರಂಗಭೂಮಿ ಪೂರಕ ಚಟುವಟಿಕೆಗಳು ಜತೆಯಾಗಿ ನಡೆಯುತ್ತಿಲ್ಲ. ಹೀಗಾಗಿ ಯಕ್ಷಗಾನವನ್ನು ಪ್ರಧಾನವಾಗಿಟ್ಟುಕೊಂಡು ರಂಗಭೂಮಿಯನ್ನು ಜತೆಯಾಗಿಸಿ ಒಂದೇ ಸೂರಿನಡಿ ಅಧ್ಯಯನ, ತರಬೇತಿ, ಕಾರ್ಯಕಲಾಪ ರೂಪಿಸಲು “ಯಕ್ಷ ರಂಗ’ದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಇದು ಯಕ್ಷಗಾನ ಮತ್ತು ರಂಗಭೂಮಿಯ ಅಭ್ಯುದಯಕ್ಕೆ ಹೊಸ ವೇದಿಕೆಯಾಗಲಿದೆ ಎನ್ನು ತ್ತಾರೆ ರಂಗಕರ್ಮಿ ಜೀವನ್‌ರಾಮ್‌ ಸುಳ್ಯ.

ಈ ನಡುವೆ, ಜಯಮಾಲಾ ಅವರು ಸಚಿವ ರಾಗಿದ್ದಾಗ ಉಡುಪಿಯಲ್ಲಿ ರಂಗಾಯಣ ನಿರ್ಮಾಣಕ್ಕೆ 2018ರ ಡಿಸೆಂಬರ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಬಳಿಕ ಇದರ ನಿರೀಕ್ಷಿತ ಕಾಮಗಾರಿ ನಡೆದಿಲ್ಲ.

ಪುತ್ತೂರಿನಲ್ಲಿ “ಯಕ್ಷ ರಂಗ’?
ಕಾಸರಗೋಡಿನಿಂದ ಕಾರವಾರದ ವರೆಗಿನ ವ್ಯಾಪ್ತಿಯನ್ನು ಪರಿಗಣಿಸಿ “ಯಕ್ಷ ರಂಗ’ ನಿರ್ಮಿಸಲು ಉದ್ದೇಶಿಸಲಾಗಿದೆ. ಹೀಗಾಗಿ ಇದರ ಕೇಂದ್ರ ಎಲ್ಲಿರಬೇಕು ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ. ಸ್ಥಳ ಪರಿಶೀಲನೆ ನಡೆಯುತ್ತಿದೆ. ಆದರೆ ಪುತ್ತೂರಿನ ಡಾ| ಶಿವರಾಮ ಕಾರಂತ ಬಾಲವನದಲ್ಲಿ ಕೇಂದ್ರ ಸ್ಥಾಪನೆಗೆ ಸರಕಾರ ಆಸಕ್ತಿ ವಹಿಸಿದೆ. ಕೋಟದ ಥೀಮ್‌ ಪಾರ್ಕ್‌ ಅಥವಾ ಮಂಗಳೂರು, ಉಡುಪಿಯ ಸೂಕ್ತ ಜಾಗದಲ್ಲಿಯೂ ಇದಕ್ಕೆ ಜಮೀನು ನಿಗದಿ ಮಾಡುವ ಸಾಧ್ಯತೆಯಿದೆ.

ಯಕ್ಷಗಾನ ಕೇಂದ್ರಿತವಾಗಿ ಉಳಿದ ರಂಗಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕರಾವಳಿಯಲ್ಲಿ ರಂಗಾಯಣ ಸ್ವರೂಪದ “ಯಕ್ಷ ರಂಗ’ ಆರಂಭಿಸಲು ತೀರ್ಮಾನಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಇದಕ್ಕೆ ಅನುದಾನ ಮೀಸಲಿಡಲಾಗುವುದು. ಬಳಿಕ ಸ್ಥಳ ನಿಗದಿಪಡಿಸಲಾಗುವುದು.
 - ಸಿ.ಟಿ. ರವಿ, ಸಚಿವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

– ದಿನೇಶ್‌ ಇರಾ

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.