ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಅಮಿತ್ ಶಾ ನಿರ್ಣಯವೇ ಅಂತಿಮ: ಬಿಎಸ್ ವೈ
Team Udayavani, Jan 13, 2020, 12:46 PM IST
ರಾಯಚೂರು: ಸಚಿವ ಸ್ಥಾನ ಹಂಚಿಕೆ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ಣಯವೇ ಅಂತಿಮ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.
ದೇವದುರ್ಗ ತಾಲೂಕಿನ ತಿಂಥಿಣಿ ಬಳಿ ಹಮ್ಮಿಕೊಂಡಿರುವ ಹಾಲುಮತ ಸಂಸ್ಕೃತಿ ವೈಭವದ ನಿಮಿತ್ತ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಯಾರೋ ಹೇಳಿದರು ಅಂತ ಯಾರಿಗೆ ಬೇಕು ಅವರಿಗೆ ಸಚಿವ ಸ್ಥಾನ ನೀಡಲಾಗದು. ಅದನ್ನು ರಾಷ್ಟ್ರೀಯ ಅಧ್ಯಕ್ಷರೇ ನಿರ್ಧರಿಸುತ್ತಾರೆ ಯಡಿಯೂರಪ್ಪ ಎಂದರು.
ಇಂದು ಅಮಿತ್ ಶಾ ಭೇಟಿಯಾಗಲು ಹೇಳಿದ್ದರು. ಆದರೆ ಹಾಲುಮತ ಸಂಸ್ಕೃತಿ ಕಾರ್ಯಕ್ರಮ ನಿಮಿತ್ತ ಹೋಗಲಾಗಿಲ್ಲ. ಭೇಟಿಗೆ ಅವಕಾಶ ನೀಡಿದರೆ ಇಂದು ರಾತ್ರಿಯೇ ದೆಹಲಿ ತೆರಳಲಾಗುವುದು. ಸಾಧ್ಯವಾದಷ್ಟು ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದರು.
ನಾನು ಹೊರದೇಶಕ್ಕೆ ಹೋಗುವುದೊರಳಗೆ ಸಂಪುಟ ವಿಸ್ತರಣೆ ಮಾಡುವ ಉದ್ದೇಶವಿದೆ. ಆದರೆ, ಇಂದು ಅಮಿತ್ ಶಾ ಭೇಟಿಗೆ ಅವಕಾಶ ಸಿಗದಿದ್ದಲ್ಲಿ ನಾಳೆಯಾದರೂ ಭೇಟಿ ಮಾಡುವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ