ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೂಡಿ ಬರದ ದಿನ


Team Udayavani, Jan 13, 2020, 11:00 PM IST

bjp

ಉಡುಪಿ: ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗೆ ಬಿಜೆಪಿ ಅಧ್ಯಕ್ಷರ ಆಯ್ಕೆ ನಡೆದಿದ್ದರೂ ಉಡುಪಿ ಜಿಲ್ಲೆಗೆ ಇನ್ನೂ ದಿನ ಕೂಡಿಬಂದಿಲ್ಲ. ಮೂರೂ ಜಿಲ್ಲೆಗಳಿಗೆ ಏಕಕಾಲದಲ್ಲಿ ಆಯ್ಕೆ ನಡೆಸುವುದು ಎಂದು ನಿರ್ಧರಿಸಲಾಗಿತ್ತಾದರೂ ಉಡುಪಿ ಜಿಲ್ಲೆಗೆ ವರಿಷ್ಠರಿನ್ನೂ ಹಸುರು ನಿಶಾನೆ ತೋರಿಸಿಲ್ಲ.

ಜಿಲ್ಲೆಯಲ್ಲಿ ಮೂವರ ಹೆಸರನ್ನು ಕೋರ್‌ ಸಮಿತಿ ಶಿಫಾರಸು ಮಾಡಿ ರಾಜ್ಯ ಸಮಿತಿಗೆ ಕಳುಹಿಸಿತ್ತು. ಈ ಮೂವರಲ್ಲಿ ಯಾರಾದರೂ ಒಬ್ಬರನ್ನು ಆಯ್ಕೆ ಮಾಡುವ ಸಾಧ್ಯತೆ ಇತ್ತು. ಆದರೆ ಇತ್ತೀಚೆಗೆ ತಿಳಿದುಬಂದ ಪ್ರಕಾರ ಬೇರೆ ಮೂಲಗಳ ಬಲದಿಂದ ಅಧ್ಯಕ್ಷರಾಗಲು ಪಕ್ಷದೊಳಗೆ ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೋರ್‌ ಸಮಿತಿ ಶಿಫಾರಸು ಮಾಡಿದವರನ್ನು ಬಿಟ್ಟು ಮೂರನೆಯ ವ್ಯಕ್ತಿಯನ್ನು ಆಯ್ಕೆ ಮಾಡುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಮೊದಲು ಮೂವರ ಹೆಸರುಗಳನ್ನು ರಾಜ್ಯ ವರಿಷ್ಠರ ಬಳಿಗೆ ಕಳುಹಿಸಿದ್ದರೂ ಎಲ್ಲ ಆಕಾಂಕ್ಷಿಗಳ ಪಟ್ಟಿ ಕಳುಹಿಸಲು ಕೋರಿದಂತೆ ಅದನ್ನೂ ಕಳುಹಿಸಲಾಗಿತ್ತು. ಮಟ್ಟಾರು ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ ನಾಯಕ್‌, ಕುತ್ಯಾರು ನವೀನ್‌ ಶೆಟ್ಟಿ, ಹೆರ್ಗ ದಿನಕರ ಶೆಟ್ಟಿ, ಬೈಕಾಡಿ ಸುಪ್ರಸಾದ ಶೆಟ್ಟಿ, ಯಶಪಾಲ್‌ ಸುವರ್ಣರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಇತ್ತೆಂದು ತಿಳಿದುಬಂದಿದೆ. ಜಿಲ್ಲಾಧ್ಯಕ್ಷರು ಮರು ಆಯ್ಕೆಗೊಳ್ಳುವಂತಿಲ್ಲ ಎಂಬ ನಿಯಮ ಇರುವುದರಿಂದ ಹಾಲಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆಯವರ ಹೆಸರು ಲುಪ್ತವಾಗಲಿದೆ.

55ರ ವಯೋಮಿತಿಯನ್ನು ಜಿಲ್ಲಾಧ್ಯಕ್ಷರಿಗೆ ಹಾಕಿರುವ ಕಾರಣ ಕೆಲವು ಆಕಾಂಕ್ಷಿಗಳಿಗೆ ಅವಕಾಶ ತಪ್ಪಿ ಹೋಗಿದೆ. ಹಾಲಿ ಅಧ್ಯಕ್ಷರ ಅವಧಿ ಮುಗಿದು ಆರು ತಿಂಗಳು ಕಳೆದಿವೆ.

ಕೆಲವು ಕಡೆ ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾಗಿ ವಿಂಗಡಿಸಿದ ಕಾರಣ ರಾಜ್ಯದಲ್ಲಿ ಒಟ್ಟು 36 ಸಂಘಟನಾತ್ಮಕ ಜಿಲ್ಲೆಗಳಿವೆ. ಇನ್ನು ಒಂದು ವಾರದಲ್ಲಿ ಅರ್ಧಾಂಶಕ್ಕಿಂತ ಹೆಚ್ಚು ಜಿಲ್ಲೆಗಳಲ್ಲಿ ಅಧ್ಯಕ್ಷರ ಆಯ್ಕೆ ನಡೆಯುವ ಸಾಧ್ಯತೆ ಇದೆ. ಹೀಗಾದ ಬಳಿಕ ರಾಜ್ಯಾಧ್ಯಕ್ಷರು ಪೂರ್ಣ ಪ್ರಮಾಣದಲ್ಲಿ ಅಧಿಕಾರವನ್ನು ಹೊಂದಲಿದ್ದಾರೆ.

ಟಾಪ್ ನ್ಯೂಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.