ಬ್ರೇಕ್‌ಫಾಸ್ಟ್‌ಗೂ ಮುನ್ನ ವ್ಯಾಯಾಮ


Team Udayavani, Jan 14, 2020, 4:08 AM IST

j-1

ದೇಹದ ತೂಕ ಕಡಿಮೆ ಮಾಡಿಕೊಳ್ಳಬಯಸುವವರು ಬೆಳಗ್ಗೆ ಉಪಹಾರಕ್ಕೆ ಮೊದಲು ಕೆಲವು ವ್ಯಾಯಾಮ ಮಾಡುವುದರಿಂದ ಫಿಟ್‌ನೆಸ್‌ ಕಾಯ್ದುಕೊಳ್ಳಬಹುದಾಗಿದೆ. ಆರೋಗ್ಯ ಎನ್ನುವುದು ಎಲ್ಲರಿಗೂ ಮುಖ್ಯ ಅದರಲ್ಲೂ ಫಿಟ್‌ನೆಸ್‌ ಕಾಯ್ದುಕೊಳ್ಳುವುದು ಇನ್ನೂ ಮುಖ್ಯ. ಮೂಳೆಗಳು ಬಲಿಷ್ಠವಾಗಿ, ಒಳ್ಳೆಯ ಮೈಕಟ್ಟು ಹೊಂದಲು ಜನರು ಬೇರೆ ಬೇರೆ ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ. ಆದರೆ ಬೆಳಗ್ಗೆ ಎದ್ದ ಕೂಡಲೇ ಸ್ವಲ್ಪ ಬಿಸಿ ನೀರನ್ನು ಕುಡಿದು ನೆನೆಸಿಟ್ಟ ಬಾದಾಮಿ ತಿಂದು ವ್ಯಾಯಾಮ ಶುರು ಮಾಡಿದಲ್ಲಿ ಉತ್ತಮ ಬದಲಾವಣೆ ಕಾಣಬಹುದು.

ನಿಮ್ಮ ಅನುಕೂಲಕ್ಕೆ ತಕ್ಕನಾಗಿ ವ್ಯಾಯಾಮ ಮಾಡುವವರೂ ಕೆಲವು ವ್ಯಾಯಾಮ ಸೂತ್ರ ಅನುಸರಿಸಬೇಕಾಗುತ್ತದೆ. ಬೆಳಗ್ಗಿನ ಹೊತ್ತಿನಲ್ಲಿ ಬ್ಯೂಸಿ ಇರುವವರು ಸಂಜೆ ಸಮಯ ಕೂಡ ವ್ಯಾಯಾಮಗಳನ್ನು ಮಾಡಬಹುದು ಆದರೆ ಬೆಳಗ್ಗಿನ ಹೊತ್ತಿನಲ್ಲಿ ಮಾಡುವ ವ್ಯಾಯಾಮದಿಂದ ಸಿಗುವಷ್ಟು ಫ‌ಲಿತಾಂಶ ದೊರಕಲಾರದಿದ್ದರೂ ಅಧಿಕ ಶಕ್ತಿ ಬಳಸಿಕೊಳ್ಳುವುದಿಂದ ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿವಾರಣೆ
ಏರೋಬಿಕ್ಸ್‌, ಜಾಗಿಂಗ್‌, ವಾಕಿಂಗ್‌ ಇವೆಲ್ಲವೂ ನೀವು ಉಪಹಾರಕ್ಕೆ ಮೊದಲು ಮಾಡಬೇಕಾದ ವ್ಯಾಯಾಮಗಳಾಗಿದ್ದು, ಇದು ರಕ್ತದೊತ್ತಡವನ್ನು ನಿಯಂತ್ರಿಸಿ, ಸಮತೋಲನಕ್ಕೆ ತರುತ್ತದೆ.

ಒತ್ತಡ ನಿವಾರಣೆ
ಬೆಳಗ್ಗಿನ ಹೊತ್ತಿನಲ್ಲಿ ಮಾಡುವ ವ್ಯಾಯಾಮ ನಿಮಗೆ ವಿಶೇಷ ಚೈತನ್ಯ ನೀಡಿ ದಿನವಿಡಿ ಉಲ್ಲಾಸವಾಗಿರಲು ಸಹಾಯ ಮಾಡುತ್ತದೆ. ದಿನಕ್ಕೆ ಬೇಕಾದ ಅಗತ್ಯ ಶಕ್ತಿಯನ್ನು ನೀಡಿ ನಿಮ್ಮ ಒತ್ತಡವನ್ನು ನಿವಾರಿಸಿ ರಾತ್ರಿ ಉತ್ತಮ ನಿದ್ದೆಗೆ ಸಹಾಯ ಮಾಡುತ್ತದೆ. ಅಲ್ಲದೆ ಇದು ನಿಮ್ಮ ಜ್ಞಾಪಕ ಶಕ್ತಿ ಹೆಚ್ಚಸಿ ಮೆದುಳಿನ ರಕ್ತ ಹರಿವನ್ನು ಸಮತೋಲನದಲ್ಲಿಡುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಳ
ಹಗುರವಾದ ವ್ಯಾಯಾಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ. ಯಾವುದೇ ರೀತಿಯ ಸೊಂಕುಗಳು ನಿಮ್ಮನ್ನು ಆವರಿಸದಂತೆ ರಕ್ಷಿಸಿ ನಿಮ್ಮನ್ನು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.

ತೂಕ ಕಡಿಮೆಯಾಗುತ್ತದೆ
ಖಾಲಿ ಹೊಟ್ಟೆಯಲ್ಲಿ ಮಾಡುವ ವ್ಯಾಯಾಮ ದೇಹದ ಕೊಬ್ಬು ಕರಗಿಸಿ ತೂಕ ಇಳಿಸಲು ಸಹಾಯ ಮಾಡುತ್ತದೆ. ಅಲ್ಲದೆ ಹಾರ್ಮೋನ್‌ ಬದಲಾವಣೆಯಿಂದ ಹೆಚ್ಚು ಕೊಬ್ಬು ಬರ್ನ್ ಆಗಿ ಅನಾವಶ್ಯಕ ಕೊಬ್ಬು ಸಂಗ್ರಹವಾಗಿರುವುದು ಕರಗುತ್ತದೆ. ನೀವು ವ್ಯಾಯಾಮ ಮಾಡಿದ ಅನಂತರ ಆರೋಗ್ಯಕರ ಉಪಹಾರ ಸೇವಿಸುವು ದರಿಂದ ಫಿಟ್‌ನೆಸ್‌ ಕಾಯ್ದುಕೊಳ್ಳಲು ನೇರವಾಗುತ್ತದೆ.

– ಪ್ರೀತಿ ಭಟ್‌ ಗುಣವಂತೆ

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.