5 ಕಟ್ಟಗಳಲ್ಲಿ ಸಂಗ್ರಹಗೊಂಡಿದೆ ಜಲಸಂಪತ್ತು

 ಬಂಟ್ವಾಳ ತಾ|ನ ಕೆದಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಜಲ ಸಂರಕ್ಷಣೆಗೆ ಅಭಿಯಾನ

Team Udayavani, Jan 14, 2020, 4:35 AM IST

j-6

ಬಂಟ್ವಾಳ: ಜಲ ಸಂಪತ್ತಿನ ಸದ್ಬಳಕೆ ಹಾಗೂ ಗ್ರಾಮದ ಕೃಷಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹರಿಯುತ್ತಿರುವ ನೀರಿಗೆ ಕಟ್ಟು ನಿರ್ಮಿಸುವಲ್ಲಿ ತಾಲೂಕಿನ ಕೆದಿಲ ಗ್ರಾ.ಪಂ. ಸ್ವಾವಲಂಬಿ ಹೆಜ್ಜೆಯನ್ನಿಟ್ಟಿದ್ದು, ಇಲ್ಲಿನ 5 ಕಡೆಗಳಲ್ಲಿ ಈಗಾಗಲೇ ಕಿಂಡಿ ಅಣೆಕಟ್ಟುಗಳ ಮೂಲಕ ನೀರನ್ನು ಸಂಗ್ರಹಿಸಲಾಗುತ್ತಿದೆ.

ಕೆದಿಲ ಗ್ರಾ.ಪಂ. ಬಂಟ್ವಾಳ ತಾಲೂಕಿನಲ್ಲಿದ್ದರೂ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಗ್ರಾ.ಪಂ. ವ್ಯಾಪ್ತಿಯ ಪುಂಚತ್ತೋಡಿಯಲ್ಲಿ ಈ ವರ್ಷ ಹೊಸದಾದ ಕಿಂಡಿ ಅಣೆಕಟ್ಟು ಪುತ್ತೂರು ಶಾಸಕರ ಶಿಫಾರಸ್ಸಿನಂತೆ 50 ಲಕ್ಷ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ನಿರ್ಮಾಣಗೊಂಡಿದೆ.

ಗ್ರಾಮದ ಕೃಷಿ ಪ್ರದೇಶಗಳಿಗೆ ಇದು ಸಾಕಷ್ಟು ಅನುಕೂಲ ಕಲ್ಪಿಸಿದೆ. ಹೇರಳವಾದ ನೀರಿನ ಸಂಗ್ರಹ ನೋಡುವುದಕ್ಕೂ ಸುಂದರವಾಗಿ ಕಾಣುತ್ತಿದೆ. ಗ್ರಾ.ಪಂ. ವ್ಯಾಪ್ತಿಯ ಎದುರ್ಕಳ, ವಡ್ಡದಕಯ,ಪುಂಚತ್ತೋಡಿ, ಮುರುವ, ಕಂಪಗಳಲ್ಲಿ ನೀರಿನ ಸಂಗ್ರಹಕ್ಕೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಎದುರ್ಕಳ ಮಾದರಿ
ಬಹಳ ವರ್ಷಗಳ ಹಿಂದೆ ನಿರ್ಮಾಣಗೊಂಡಿ ರುವ ಎದುರ್ಕಳ ಕಿಂಡಿ ಅಣೆಕಟ್ಟು ಈ ಭಾಗದ ಇತರ ಕಿಂಡಿ ಅಣೆಕಟ್ಟುಗಳಿಗೆ ಮಾದರಿಯಾಗಿದ್ದು, ಹರಿಯುವ ತೋಡಿನಲ್ಲಿ ಈಗಲೂ ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿ ಕೃಷಿಕರೇ ಕಟ್ಟ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ.
ನಾಲ್ಕು ವರ್ಷಗಳ ಹಿಂದೆ ವಡ್ಡದಕಯದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದು, ಕಳೆದ ವರ್ಷ ಗ್ರಾ.ಪಂ.ವತಿಯಿಂದಲೇ ಇಲ್ಲಿ ಹಲಗೆ ಹಾಕುವ ಕಾರ್ಯ ಮಾಡಲಾಗಿತ್ತು. ಈ ವರ್ಷ ಕೃಷಿಕರೇ ಹಲಗೆ ಹಾಕಿದ್ದಾರೆ. ಈ ವರ್ಷ ಅನುಷ್ಠಾನಗೊಂಡಿರುವ ಪುಂಚತ್ತೋಡಿಗೆ ಸೇರಿದ ಎದುರ್ಕಳ ಹಾಗೂ ವಡ್ಡದಕಯದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕವೇ ಕಿಂಡಿ ಅಣೆಕಟ್ಟು ನಿರ್ಮಾಣವಾಗಿದೆ.

ಕೆದಿಲದ ಮುರುವ ಹಾಗೂ ಕಂಪದಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ನೀರಿಗೆ ಕಟ್ಟ ಹಾಕುವ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಯೂ ನೀರನ್ನು ಸಂಗ್ರಹಿಸಿಕೊಂಡು ಅಂತರ್ಜಲ ವೃದ್ಧಿಯ ಜತೆಗೆ ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡಲಾಗುತ್ತಿದೆ.

ಇನ್ನೂ ಇದೆ ಬೇಡಿಕೆ
ಕೆದಿಲ ಗ್ರಾ.ಪಂ. ವ್ಯಾಪ್ತಿಯ ಇನ್ನೂ ಹಲವು ಕಡೆಗಳಲ್ಲಿ ನೀರಿನ ಕಟ್ಟಗಳ ನಿರ್ಮಾಣಕ್ಕೆ ಬೇಡಿಕೆ ಇದ್ದು, ವಾಲ್ತಾಜೆ, ಜತ್ತನಕೋಡಿ ಕಟ್ಟ ನಿರ್ಮಾಣ ಪ್ರಸ್ತಾವವಿದೆ. ಉದ್ಯೋಗ ಖಾತ್ರಿ ಯೋಜನೆ ಅಥವಾ ಇತರ ಯೋಜನೆಗಳ ಮೂಲಕ ಕಟ್ಟ ನಿರ್ಮಿಸುವ ಕುರಿತು ಪ್ರಯತ್ನ ಮಾಡಲಾಗುತ್ತದೆ ಎಂದು ಗ್ರಾ.ಪಂ. ಅಧಿಕಾರಿಗಳು ಹೇಳುತ್ತಾರೆ.

 ಕೃಷಿಕರಿಂದಲೇ ನಿರ್ವಹಣೆ
ಕೃಷಿ ಪ್ರದೇಶವಾಗಿರುವ ಕೆದಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಿಂಡಿ ಅಣೆಕಟ್ಟುಗಳಿಂದ
ಸಾಕಷ್ಟು ಪ್ರಯೋಜನವಾಗಿದ್ದು, ಅದರ ನಿರ್ವಹಣೆಯ ಜವಾಬ್ದಾರಿಗಳನ್ನು ಕೃಷಿಕರೇ ಮಾಡಿದಾಗ ಅನುಕೂಲವಾಗುತ್ತದೆ. ನಿರ್ವಹಣೆಯನ್ನೂ ಗ್ರಾ.ಪಂ.ನಿಂದಲೇ ಮಾಡಿದರೆ ಗ್ರಾ.ಪಂ.ಗೆ ಹೊರೆಯಾಗುತ್ತದೆ.
– ಅಣ್ಣಪ್ಪ ಕುಲಾಲ್‌, ಗ್ರಾ.ಪಂ. ಅಧ್ಯಕ್ಷರು, ಕೆದಿಲ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.