ಈ ಬಾರಿ ಜ.15 ರಿಂದ ಜ.17 ರ ತನಕ ಮಾರಣಕಟ್ಟೆ ಮಕರ ಸಂಕ್ರಮಣ ಉತ್ಸವ

ಜ.17ರಂದು ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ , ಅನಂತರ ಮಂಡಲ ಸೇವೆ ನಡೆಯಲಿದೆ

Team Udayavani, Jan 14, 2020, 10:06 AM IST

Maranakatte-Temple

ಮಾರಣಕಟ್ಟೆ, ಜ.14:ಉಡುಪಿ,ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಆರಾಧ್ಯ ದೇವವಾಗಿರುವ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಜ.15 ರಿಂದ ಜ.17 ರ ತನಕ ಮಕರಸಂಕ್ರಮಣ ಉತ್ಸವ ಜರಗಲಿದೆ.

ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರು ಕಟ್ಟುನಿಟ್ಟಾಗಿ ಪ್ಲಾಸ್ಟಿಕ್‌ ವಸ್ತುಗಳನ್ನು ಬಳಸದೆ ಬಟ್ಟೆ ಅಥವಾ ಕಾಗದದ ಚೀಲ ಬಳಸುವಂತೆ ಸೂಚಿಸಲಾಗಿದ್ದು ಪ್ಲಾಸ್ಟಿಕ್‌ ಮುಕ್ತ ಮಕರಸಂಕ್ರಮಣ ಉತ್ಸವ ನಡೆಸಲು ಸಕಲ ಸಿದ್ಧತೆ ಪೂರ್ಣಗೊಂಡಿದೆ ಎಂದು ದೇಗುಲದ ಆಡಳಿತ
ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಹಾಗೂ ಮಂಡಳಿಯ ಪ್ರಮುಖ ಸಿ.ರಘುರಾಮ ಶೆಟ್ಟಿ ತಿಳಿಸಿದ್ದಾರೆ.

ಹಲವಾರು ವರ್ಷಗಳ ಅನಂತರ ಈ ಬಾರಿ ಜ. 14ರ ಬದಲು ಜ.15ರಂದು ಸಂಕ್ರಮಣ ಉತ್ಸವ ಆರಂಭಗೊಳಲಿದ್ದು ಅದಕ್ಕಾಗಿ ದೇಗುಲ ಪರಿಸರದಲ್ಲಿ ಅಂಗಡಿ ಮುಂಗಟ್ಟುಗಳ ಸಹಿತ ರಥಬೀದಿಯನ್ನು ಸುಂದರವಾಗಿ ಅಲಂಕರಿಸಲಾಗುತ್ತಿದೆ. ಮಕರ ಸಂಕ್ರಮಣ ಸಂದರ್ಭ ನಡೆಯುವ ಸೇವಂತಿಗೆ ಹೂವಿನ ಹೊರೆ ಕಾಣಿಕೆ ಮಹತ್ವದ್ದಾಗಿದ್ದು ಇದಕ್ಕಾಗಿ ಸರತಿಯ ಸಾಲಿನಲ್ಲಿ ಸಾಗಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಭಕ್ತರ ಅನುಕೂಲಕ್ಕಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ,
ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ .

ಕ್ಷೇತ್ರದ ವಿಶೇಷ ಉತ್ಸವಗಳು
ಮಾರಣಕಟ್ಟೆ ಮಕರ ಸಂಕ್ರಾಂತಿಯು ಬಹುದೊಡ್ಡ ಜಾತ್ರೆ. ಮೂರು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ತುಳುನಾಡಿನಿಂದ ಅಸಂಖ್ಯಾಕ ಭಕ್ತರು ಆಗಮಿಸುತ್ತಾರೆ. ಬ್ರಹ್ಮಲಿಂಗೇಶ್ವರನಿಗೆ ಪ್ರಿಯವಾದ ಸಿಂಗಾರ ಹೂವಿನ ಅರ್ಪಣೆ ವಿಶೇಷವಾಗಿದೆ. ಕುಂಭ ಸಂಕ್ರಮಣ ಇಲ್ಲಿನ ಇನ್ನೊಂದು ವಿಶೇಷ ಜಾತ್ರೆ. ಅದಲ್ಲದೆ ವರ್ಷದ ಮೂರು ಕಾಲದಲ್ಲಿ ಚೆರುವಿನ ಪೂಜೆ, ಸಂಪ್ರೋಕ್ಷಣೆ, ಸೌರಮಾನ ಯುಗಾದಿ, ಸೋಣೆ ಆರತಿ, ಕದಿರು ಕಟ್ಟುವುದು, ದೀಪೋತ್ಸವ ಇವು ಇಲ್ಲಿನ ಇನ್ನಿತರ ವಿಶೇಷ ಪೂಜೆಗಳು.

ಸಂಕ್ರಾಂತಿ ಪೂಜಾ ವಿಶೇಷತೆ
ಜ.15 ರಂದು ಮಧ್ಯಾಹ್ನ12 ಗಂಟೆಗೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಮಹಾಮಂಗಳಾರತಿ ಹಾಗೂ ರಾತ್ರಿ 10. 30ಕ್ಕೆ ಗೆಂಡ ಸೇವೆ . ಜ.16 ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ , ಅನಂತರ ಮಂಡಲ ಸೇವೆ. ಜ.17ರಂದು ಬೆಳಗ್ಗೆ 9.30 ಕ್ಕೆ ಮಹಾಮಂಗಳಾರತಿ , ಅನಂತರ ಮಂಡಲ ಸೇವೆ ನಡೆಯಲಿದೆ ಎಂದು ಆಡಳಿತ ಮೊಕ್ತೇಸರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.