ಅಮೆರಿಕದ ಬಳಿಕ ಇರಾನ್ ನಾಯಕ ಖೋಮೆನಿ ವಿರುದ್ಧ ರೊಚ್ಚಿಗೆದ್ದು ಬೀದಿಗಿಳಿದ ಜನರು!
ಇರಾನ್ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖೋಮೆನಿ ಅಧಿಕಾರದಿಂದ ಕೆಳಗಿಳಿಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
Team Udayavani, Jan 14, 2020, 11:25 AM IST
ಟೆಹರಾನ್: ಉಕ್ರೇನ್ ವಿಮಾನ ಹೊಡೆದುರುಳಿಸಿದ್ದು ನಾವೇ ಎಂದು ಜಗತ್ತಿನ ಮುಂದೆ ಇರಾನ್ ತಪ್ಪೊಪ್ಪಿಕೊಂಡ ನಂತರ ದೇಶದ ಜನರೇ ಇದೀಗ ಬೀದಿಗಿಳಿದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಹತ್ತಿಕ್ಕಲು ಇರಾನ್ ಮಿಲಿಟರಿ ಪಡೆ ಹರಸಾಹಸ ಪಡುತ್ತಿದೆ ಎಂದು ವರದಿ ತಿಳಿಸಿದೆ.
ಉಕ್ರೇನ್ ವಿಮಾನವನ್ನು ಇರಾನ್ ಮಿಲಿಟರಿ ಪಡೆ ಹೊಡೆದುರುಳಿಸಿದ ಪರಿಣಾಮ 176 ಮಂದಿ ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದರು. ಇದೊಂದು ಉದ್ದೇಶಪೂರ್ವಕವಲ್ಲದ ಘಟನೆ, ಆಚಾತುರ್ಯದಿಂದ ಹೀಗಾಇದೆ. ಈ ಬಗ್ಗೆ ಕ್ಷಮೆಯಾಚಿಸುವುದಾಗಿ ಇರಾನ್ ತಪ್ಪೊಪ್ಪಿಕೊಂಡಿತ್ತು.
ಇರಾನ್ ನಿಂದ ಈ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಟೆಹರಾನ್ ನ ಆಝಾದಿ ಸ್ಕ್ವೇರ್ ನಲ್ಲಿ ಇರಾನ್ ಸರ್ಕಾರದ ವಿರುದ್ಧ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖೋಮೆನಿ ಅಧಿಕಾರದಿಂದ ಕೆಳಗಿಳಿಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಸಾವಿನ ಸರ್ವಾಧಿಕಾರಿ ಎಂದು ಟೆಹರಾನ್ ನಲ್ಲಿ ಪ್ರತಿಭಟನಾಕಾರರು ಖೋಮೆನಿ ವಿರುದ್ಧ ಘೋಷಣೆ ಕೂಗುತ್ತಿದ್ದು, ಈ ವಿಡಿಯೋ ಫೋಟೇಜ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಖೋಮೆನಿಗೆ ನಾಚಿಕೆಯಾಗಬೇಕು, ಕೂಡಲೇ ದೇಶ ಬಿಟ್ಟು ತೊಲಗಿ ಎಂದು ವಿದ್ಯಾರ್ಥಿಗಳು, ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ದಶಕಕ್ಕಿಂತಲೂ ಹೆಚ್ಚು ಕಾಲ ಇರಾನ್ ಪರಮೋಚ್ಛ ನಾಯಕನಾಗಿ ಅಧಿಕಾರ ನಡೆಸುತ್ತಿದ್ದ ಖೋಮೆನಿಗೆ ಇದೀಗ ದೇಶದ ಜನರೇ ತಿರುಗಿ ಬಿದ್ದಿರುವುದು ತಲೆನೋವಾಗಿ ಪರಿಣಮಿಸಿದೆ ಎಂದು ವರದಿ ವಿವರಿಸಿದೆ.
ಪ್ರತಿಭಟನಾಕಾರರ ವಿರುದ್ಧ ಇರಾನ್ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದು, ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ. ಇರಾನ್ ರಾಜಧಾನಿ ಟೆಹರಾನ್ ನಲ್ಲಿ ಆರಂಭವಾದ ಪ್ರತಿಭಟನೆ ಈಗ ಹಲವೆಡೆ ವಿಸ್ತರಿಸಿರುವುದಾಗಿ ವರದಿ ಹೇಳಿದೆ.
ಇರಾನ್ ಮಿಲಿಟರಿ ಪಡೆಯ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಅಮೆರಿಕ ವಾಯುಪಡೆ ದಾಳಿ ನಡೆಸಿ ಹತ್ಯೆಗೈದ ನಂತರ ಉಭಯ ದೇಶಗಳ ನಡುವೆ ಯುದ್ಧ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು. ನಂತರ ಇರಾನ್ ಕೂಡ ಕ್ಷಿಪಣಿ ಮೂಲಕ ಅಮೆರಿಕ ಪಡೆಯ ಮೇಲೆ ದಾಳಿ ನಡೆಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಭಯ ದೇಶಗಳು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯುದ್ಧಭೀತಿಯನ್ನು ದೂರ ಮಾಡಿದ್ದವು. ಆದರೆ ಇದೀಗ ದೇಶದ ಜನರೇ ಇರಾನ್ ಪರಮೋಚ್ಛ ನಾಯಕ ಖೋಮೆನಿ ವಿರುದ್ಧ ತಿರುಗಿಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು