ಅಮೆರಿಕದ ಬಳಿಕ ಇರಾನ್ ನಾಯಕ ಖೋಮೆನಿ ವಿರುದ್ಧ ರೊಚ್ಚಿಗೆದ್ದು ಬೀದಿಗಿಳಿದ ಜನರು!

ಇರಾನ್ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖೋಮೆನಿ ಅಧಿಕಾರದಿಂದ ಕೆಳಗಿಳಿಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Team Udayavani, Jan 14, 2020, 11:25 AM IST

Iran-Faces-Protest

ಟೆಹರಾನ್: ಉಕ್ರೇನ್ ವಿಮಾನ ಹೊಡೆದುರುಳಿಸಿದ್ದು ನಾವೇ ಎಂದು ಜಗತ್ತಿನ ಮುಂದೆ ಇರಾನ್ ತಪ್ಪೊಪ್ಪಿಕೊಂಡ ನಂತರ ದೇಶದ ಜನರೇ ಇದೀಗ ಬೀದಿಗಿಳಿದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಹತ್ತಿಕ್ಕಲು ಇರಾನ್ ಮಿಲಿಟರಿ ಪಡೆ ಹರಸಾಹಸ ಪಡುತ್ತಿದೆ ಎಂದು ವರದಿ ತಿಳಿಸಿದೆ.

ಉಕ್ರೇನ್ ವಿಮಾನವನ್ನು ಇರಾನ್ ಮಿಲಿಟರಿ ಪಡೆ ಹೊಡೆದುರುಳಿಸಿದ ಪರಿಣಾಮ 176 ಮಂದಿ ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿದ್ದರು. ಇದೊಂದು ಉದ್ದೇಶಪೂರ್ವಕವಲ್ಲದ ಘಟನೆ, ಆಚಾತುರ್ಯದಿಂದ ಹೀಗಾಇದೆ. ಈ ಬಗ್ಗೆ ಕ್ಷಮೆಯಾಚಿಸುವುದಾಗಿ ಇರಾನ್ ತಪ್ಪೊಪ್ಪಿಕೊಂಡಿತ್ತು.

ಇರಾನ್ ನಿಂದ ಈ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಟೆಹರಾನ್ ನ ಆಝಾದಿ ಸ್ಕ್ವೇರ್ ನಲ್ಲಿ ಇರಾನ್ ಸರ್ಕಾರದ ವಿರುದ್ಧ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಇರಾನ್ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖೋಮೆನಿ ಅಧಿಕಾರದಿಂದ ಕೆಳಗಿಳಿಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸಾವಿನ ಸರ್ವಾಧಿಕಾರಿ ಎಂದು ಟೆಹರಾನ್ ನಲ್ಲಿ ಪ್ರತಿಭಟನಾಕಾರರು ಖೋಮೆನಿ ವಿರುದ್ಧ ಘೋಷಣೆ ಕೂಗುತ್ತಿದ್ದು, ಈ ವಿಡಿಯೋ ಫೋಟೇಜ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಖೋಮೆನಿಗೆ ನಾಚಿಕೆಯಾಗಬೇಕು, ಕೂಡಲೇ ದೇಶ ಬಿಟ್ಟು ತೊಲಗಿ ಎಂದು ವಿದ್ಯಾರ್ಥಿಗಳು, ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ದಶಕಕ್ಕಿಂತಲೂ ಹೆಚ್ಚು ಕಾಲ ಇರಾನ್ ಪರಮೋಚ್ಛ ನಾಯಕನಾಗಿ ಅಧಿಕಾರ ನಡೆಸುತ್ತಿದ್ದ ಖೋಮೆನಿಗೆ ಇದೀಗ ದೇಶದ ಜನರೇ ತಿರುಗಿ ಬಿದ್ದಿರುವುದು ತಲೆನೋವಾಗಿ ಪರಿಣಮಿಸಿದೆ ಎಂದು ವರದಿ ವಿವರಿಸಿದೆ.

ಪ್ರತಿಭಟನಾಕಾರರ ವಿರುದ್ಧ ಇರಾನ್ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದು, ಹಲವರನ್ನು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ. ಇರಾನ್ ರಾಜಧಾನಿ ಟೆಹರಾನ್ ನಲ್ಲಿ ಆರಂಭವಾದ ಪ್ರತಿಭಟನೆ ಈಗ ಹಲವೆಡೆ ವಿಸ್ತರಿಸಿರುವುದಾಗಿ ವರದಿ ಹೇಳಿದೆ.

ಇರಾನ್ ಮಿಲಿಟರಿ ಪಡೆಯ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಅಮೆರಿಕ ವಾಯುಪಡೆ ದಾಳಿ ನಡೆಸಿ ಹತ್ಯೆಗೈದ ನಂತರ ಉಭಯ ದೇಶಗಳ ನಡುವೆ ಯುದ್ಧ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು. ನಂತರ ಇರಾನ್ ಕೂಡ ಕ್ಷಿಪಣಿ ಮೂಲಕ ಅಮೆರಿಕ ಪಡೆಯ ಮೇಲೆ ದಾಳಿ ನಡೆಸಿತ್ತು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಉಭಯ ದೇಶಗಳು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಯುದ್ಧಭೀತಿಯನ್ನು ದೂರ ಮಾಡಿದ್ದವು. ಆದರೆ ಇದೀಗ ದೇಶದ ಜನರೇ ಇರಾನ್ ಪರಮೋಚ್ಛ ನಾಯಕ ಖೋಮೆನಿ ವಿರುದ್ಧ ತಿರುಗಿಬಿದ್ದಿದ್ದಾರೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.