ಸಾಗರ ಮಾಲಾ ಯೋಜನೆ ವಿರೋಧಿಸಿ ಪ್ರತಿಭಟನೆ


Team Udayavani, Jan 14, 2020, 4:03 PM IST

uk-tdy-1

ಕಾರವಾರ: ಇಲ್ಲಿನ ಸರ್ವಋತು ಬಂದರು ಎರಡನೇ ಹಂತದ ವಿಸ್ತರಣೆಗೆ ಕೇಂದ್ರ ಸರ್ಕಾರ ರೂಪಿಸಿ ಜಾರಿ ಮಾಡುತ್ತಿರುವ ಸಾಗರ ಮಾಲಾ ಯೋಜನೆ ವಿರೋಧಿಸಿ ಸಾವಿರಾರು ಮೀನುಗಾರರು ಕಡಲತೀರದಲ್ಲಿ ಪ್ರತಿಭಟನೆ ನಡೆಸಿದರು. ಕಾರವಾರ ಬೀಚ್‌ನಲ್ಲಿ 125 ಕೋಟಿ ವೆಚ್ಚದ ಅಲೆತಡೆ ಗೋಡೆ ಕಾಮಗಾರಿಗೆ ಅಡ್ಡಿಪಡಿಸಿದರು.

ಕಾಮಗಾರಿಗೆ ಅಡ್ಡಿಪಡಿಸಿದ ಮೀನುಗಾರ ಮುಖಂಡರು ಹಾಗೂ ಯುವಕರು, ಮಹಿಳೆಯರನ್ನು ಪೊಲೀಸರು ಬಂಧಿಸಿ ಬಸ್‌ನಲ್ಲಿ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆದೊಯ್ದರು. ಬೆಳಗಿನಿಂದ ಅಲೆತಡೆಗೋಡೆ ಕಾಮಗಾರಿ ಗುತ್ತಿಗೆ ಪಡೆದ ಏಜೆನ್ಸಿ ಪ್ರಾರಂಭಿಸಿತು. ಇದನ್ನು ಮೀನುಗಾರರು ಪ್ರತಿರೋಧಿಸುತ್ತಲೇ ಇದ್ದರು. ಪರಿಸರ ಇಲಾಖೆ ಅನುಮತಿ ಇಲ್ಲ. ಹಲವು ನಿಯಮಗಳನ್ನು ಉಲ್ಲಂಘಿಸಲಾಗಿದೆ. ಮೀನುಗಾರಿಕೆಗೆ ತೊಂದರೆಯಾಗಲಿದೆ. ಕಾರವಾರ ಕಡಲತೀರ ಪ್ರವಾಸಿಗರಿಗೆ ಮತ್ತು ಜನತೆಗೆ ಉಳಿಯುವುದಿಲ್ಲ. ಇದು ಅವೈಜ್ಞಾನಿಕ ಕಾಮಗಾರಿ ಎಂದು ಅಧಿಕಾರಿಗಳು ಹಾಗೂ ಪೊಲೀಸರ ಜತೆ ಮುಖಂಡರು ಹಾಗೂ ಯುವಕರು ವಾಗ್ವಾದಕ್ಕೆ ಇಳಿದರು.

ಬೆಳಗಿನ 11:29ರ ಹೊತ್ತಿಗೆ ಪರಿಸ್ಥಿತಿ ಕೈ ಮೀರುವ ಸುಳಿವು ಅರಿತ ಪೊಲೀಸರು ಪ್ರತಿಭಟನಾಕಾರರ ಬಂಧನಕ್ಕೆ ಎರಡು ಬಸ್‌ ತರಿಸಿದರು. ಆರಂಭದಲ್ಲಿ ಮುಖಂಡರಾದ ಗಣಪತಿ ಮಾಂಗ್ರೆ ಹಾಗೂ ರಾಜು ತಾಂಡೇಲ ಹಾಗೂ ಯುವಕರನ್ನು, ಮಹಿಳೆಯರನ್ನು ಬಂಧಿಸಲಾಯಿತು.

ಕಾಮಗಾರಿ ತಡೆಯಲು ಯುವಕರ ಪಡೆ ನುಗ್ಗುತ್ತಿದ್ದಂತೆ ಅವರನ್ನು ಸುತ್ತುವರಿದ ಪೊಲೀಸ ಪಡೆಗಳು, ಪ್ರತಿಭಟನಾಕಾರರನ್ನು ಬಂಧಿಸಿ, ಬಸ್‌ಗಳಿಗೆ ತುಂಬಿದರು. ಪ್ರತಿಭಟಿಸುತ್ತಲೇ ಬಸ್‌ ಏರಿದ ಮೀನುಗಾರರು ಸರ್ಕಾರದ ವಿರುದ್ಧ, ಅಧಿಕಾರಿಗಳ ವಿರುದ್ಧ  ಕ್ಕಾರ ಕೂಗಿದರು. ಈ ವೇಳೆಗೆ ಎರಡು ಬಸ್‌ಗಳಲ್ಲಿ ತುಂಬಿದ್ದ ನೂರಕ್ಕೂ ಹೆಚ್ಚು ಜನರನ್ನು ಜಿಲ್ಲಾ ಪೊಲೀಸ್‌ ಪರೇಡ್‌ ಮೈದಾನಕ್ಕೆ ಕರೆತಂದು ಪೊಲೀಸ್‌ ಬ್ಯಾರೆಕ್‌ನಲ್ಲಿ ಇಡಲಾಯಿತು. ನಂತರ ಅವರ ಹೆಸರು ನಮೂದಿಸಿಕೊಂಡು ಬಿಡುಗಡೆ ಮಾಡಲಾಯಿತು. ಈ ವೇಳೆಗೆ ಎರಡು ತಾಸು ಕಳೆದಿತ್ತು. ಅಲೆ ತಡೆಗೋಡೆ ಕಾಮಗಾರಿಗೆ ಬುನಾದಿ ಹಾಕುವ ಕ್ರಿಯೆ ನಡೆದಿತ್ತು. ಇದನ್ನು ಸ್ಥಳದಲ್ಲಿದ್ದ ಮೀನುಗಾರರು ವಿರೋಧಿಸುತ್ತಲೇ ಇದ್ದರು. ಮಧ್ಯಾಹ್ನ ಊಟದ ವಿರಾಮದ ವೇಳೆಗೆ ಬಿಡುಗಡೆ ಹೊಂದಿದ್ದ ಮೀನುಗಾರರ ಮಹಿಳೆಯರು ಮತ್ತು ಯುವಕರು ಮತ್ತೆ ಕಾಮಗಾರಿ ತಡೆಯಲು ಪ್ರತಿಭಟನೆ ಆರಂಭಿಸಿದರು.

ಕಾಮಗಾರಿ ನಡೆವ ಸ್ಥಳಕ್ಕೆ ನುಗ್ಗಿದಾಗ ಘರ್ಷಣೆ ಉಂಟಾಯಿತು. ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟು ಪೊಲೀಸರು ಕಾಮಗಾರಿ ನಡೆವ ಸ್ಥಳದಲ್ಲಿ ಕೋಟೆ ರಚಿಸಿದರು. ಇದನ್ನು ಪ್ರತಿಭಟಿಸಿದ ಈರ್ವರು ಮೀನುಗಾರ ಮಹಿಳೆಯರು, ಒಬ್ಬ ಯುವಕ ಸಮುದ್ರಕ್ಕೆ ಇಳಿದು ಅಸ್ವಸ್ಥರಾದರು. ತಕ್ಷಣ ಅವರನ್ನು ಅಂಬ್ಯುಲೆನ್ಸ್‌ ಮೂಲಕ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಕಾರವಾರ ಬೀಚ್‌ನಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.