ಶಬರಿಮಲೆ: ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಹರಿವರಾಸನಂ ಪ್ರಶಸ್ತಿ-2020 ಪ್ರಧಾನ


Team Udayavani, Jan 15, 2020, 3:12 PM IST

ilayaraaja

ಶಬರಿಮಲೆ: ಕೇರಳ ಸರಕಾರದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ಹರಿವರಾಸನಂ ಪ್ರಶಸ್ತಿ-2020 ಪ್ರಶಸ್ತಿಯನ್ನು ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಜ.15ರಂದು ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಧಾನ ಮಾಡಲಾಯಿತು.

ಪ್ರತೀವರ್ಷ ಧಾರ್ಮಿಕ, ಸಾಮರಸ್ಯ ಹಾಗೂ ರಾಷ್ಟ್ರೀಯ ಐಕ್ಯತೆಗೆ ಕಾರಣರಾದವರಿಗೆ ಈ ಪ್ರಶಸ್ತಿಯನ್ನು ಕೇರಳ ಸರಕಾರ ನೀಡುತ್ತಿದೆ. ಪ್ರಶಸ್ತಿಯು 1 ಲಕ್ಷ ನಗದು,ಪ್ರಮಾಣ ಪತ್ರ ಹಾಗೂ ಫಲಕ ಒಳಗೊಂಡಿದೆ. ಇದೇ ಸಂದರ್ಭದಲ್ಲಿ ಇಳಯರಾಜ ಅವರಿಗೆ ಪೂಜಾ ಸಂಗೀತಗಾರ ಎಂಬ ಬಿರುದು ನೀಡಿ ಗೌರವಿಸಲಾಯಿತು.

ಈ ಪ್ರಶಸ್ತಿಯನ್ನು ಈವರೆಗೆ ಡಾ.ಕೆ.ಜೆ‌.ಯೇಸುದಾಸ್,ಎಸ್.ಪಿ.ಬಾಲಸುಬ್ರಹ್ಮಣ್ಯಂ, ಕೆ.ಎಸ್.ಚಿತ್ರಾ ,ಪಿ.ಸುಶೀಲಾಎಂ.ಜಿ.ಶ್ರೀ ಕುಮಾರ್, ಗಂಗೈ ಅಮರನ್ ಅವರಿಗೆ ನೀಡಲಾಗಿದೆ.

ಕನ್ನಡ ಸೇರಿದಂತೆ ದಕ್ಷಿಣದ ಚಲನಚಿತ್ರೋದ್ಯಮದ ಅದೆಷ್ಟೋ ಚಿತ್ರಗಳಿಗೆ ಸಂಗೀತ ಸಂಯೋಜಿಸಿ, ಎಷ್ಟೋ ಅದ್ಭುತ ಗೀತೆಗಳನ್ನು ನೀಡಿ, ಸಂಗೀತ ನಿಧಿ ಎಂದು ಹೆಸರುವಾಸಿಯಾಗಿರುವ ಇಳಯರಾಜಾ ಅವರಿಗೆ ಹಲವು ಗೌರವ, ಪ್ರಶಸ್ತಿಗಳು ಸಂದಿವೆ.

ಭಾರತ ಸರ್ಕಾರ ನೀಡುವ ಪ್ರತಿಷ್ಠಿತ ನಾಗರೀಕ ಪುರಸ್ಕಾರ ಪದ್ಮವಿಭೂಷಣಕ್ಕೂ ಭಾಜನರಾಗಿದ್ದಾರೆ. ಆದರೆ, ಶಬರಿಮಲೆ ಬೆಟ್ಟದ ಮೇಲೆ ನೆಲೆಸಿರುವ ಅಯ್ಯಪ್ಪ ಕುರಿತ “ಹರಿವಾಸನಂ”ಗೀತೆ ಅಯ್ಯಪ್ಪ ಭಕ್ತರನ್ನು ಭಕ್ತಿಯ ಪರಾಕಾಷ್ಟೆಗೆ ಕೊಂಡೊಯ್ಯುವ ಗೀತೆಯಾಗಿದೆ, ಅಯ್ಯಪ್ಪ ಭಕ್ತರು ನಿತ್ಯವೂ ಪಠಿಸುವ ಪವಿತ್ರ ಗೀತೆ ಎಂಬ ಶ್ಲಾಘನೆಗೊಳಗಾಗಿದೆ. ಈ ಹಿನ್ನಲೆಯಲ್ಲಿ ಇಳಯರಾಜ ಅವರಿಗೆ “ಹರಿವರಾಸನಂ” ಪ್ರಶಸ್ತಿ ಲಭಿಸಿರುವುದು ಹಾಗೂ ಶಬರಿಮಲೆಯಲ್ಲಿ ಅದನ್ನು ಅವರು ಪಡೆದುಕೊಂಡಿರುವುದು ಅತ್ಯಂತ ಮಹತ್ವ ಎಂದು ಪರಿಗಣಿಸಲಾಗಿದೆ.

-ಪ್ರವೀಣ್ ಚೆನ್ನಾವರ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shabarimale

ಶಬರಿಮಲೆ : ಜ.20 ಕ್ಕೆ ಸನ್ನಿದಾನದ ಬಾಗಿಲು ಮುಚ್ಚಲಾಗುತ್ತದೆ

shabari—jyothi1

ಶಬರಿಮಲೆಯಲ್ಲಿ ಮಕರ ಜ್ಯೊತಿ ದರ್ಶನವಾಯಿತು

shabari—abharana

ಶಬರಿಮಲೆ: ಕ್ಷೇತ್ರಕ್ಕೆ ಆಗಮಿಸಿದ ತಿರುವಾಭರಣಂ

shabari—bagilu

ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು

male-1

ಶಬರಿಮಲೆ: ಶುದ್ದೀಕರಣ ಆರಂಭ: ತಿರುವಾಭರಣಂ ಕ್ಷೇತ್ರದ ಹಾದಿಯಲ್ಲಿ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.