ಅದಮಾರು ಪರ್ಯಾಯ ಮಹೋತ್ಸವ
ಮಲ್ಪೆ ವಲಯ ಮೀನುಗಾರರಿಂದ ಹೊರೆಕಾಣಿಕೆ ಸಮರ್ಪಣೆ3
Team Udayavani, Jan 16, 2020, 5:43 AM IST
ಮಲ್ಪೆ: ಸಮುದ್ರ ಮತ್ತು ಕೃಷ್ಣನಿಗೆ ನಿಕಟ ನಂಟು. ಮೀನುಗಾರರು ಮತ್ತು ಶ್ರೀ ಕೃಷ್ಣ ಮಠಕ್ಕೆ ಹಿಂದಿನಿಂದಲೂ ಅವಿನಾಭಾವ ಸಂಬಂಧ. ಉಡುಪಿ ಮಠದ ಯಾವುದೇ ಉತ್ಸವ, ಕಾರ್ಯಕ್ರಮಗಳಿರಲಿ, ಮೀನುಗಾರರ ಸೇವೆ ನಿರಂತರವಾಗಿರುತ್ತದೆ ಎಂದು ಪರ್ಯಾಯ ಪೀಠ ವನ್ನೇರಲಿರುವ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ನುಡಿದರು.
ಅವರು ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ವಿವಿಧ ಭಜನಾ ಮಂದಿರ ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಲ್ಪೆ ವಲಯದ ಪರ್ಯಾಯಾದ ಪ್ರಥಮ ಹೊರೆಕಾಣಿಕೆ ಸಮರ್ಪಣೆಯ ಮೆರವಣಿಗೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಹೊರೆಕಾಣಿಕೆ ಉಸ್ತುವಾರಿಯನ್ನು ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ ವಹಿಸಿದ್ದರು.
ಶಾಸಕ ಕೆ. ರಘುಪತಿ ಭಟ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ಕೃಷ್ಣ ಎಸ್. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷ ವಿನಯ ಕರ್ಕೇರ, ಮೀನುಗಾರ ಮುಖಂಡರುಗಳಾದ ಆನಂದ ಸಿ. ಕುಂದರ್, ಆನಂದ ಪಿ. ಸುವರ್ಣ, ಹರಿಯಪ್ಪ ಕೋಟ್ಯಾನ್, ಸಾಧು ಸಾಲ್ಯಾನ್, ರಾಮಚಂದ್ರ ಕುಂದರ್, ಸುಧಾಕರ ಕುಂದರ್, ರಮೇಶ್ಕೋಟ್ಯಾನ್, ದಯಾನಂದ ಕುಂದರ್, ಬೇಬಿ ಎಚ್. ಸಾಲ್ಯಾನ್, ಜಲಜ ಕೋಟ್ಯಾನ್, ಗುಂಡು ಬಿ. ಅಮೀನ್, ಸತೀಶ್ ಕುಂದರ್, ಮೀನುಗಾರ ಇಲಾಖೆಯ ಉಪ ನಿರ್ದೇìಶಕ ಗಣೇಶ್ ಕೆ., ಸಹಾಯಕ ನಿರ್ದೇಶಕ ಶಿವ ಕುಮಾರ್, ಭಜನಾ ಒಕ್ಕೂಟದ ಅಧ್ಯಕ್ಷ ಭೋಜರಾಜ್ ಆರ್. ಕಿದಿಯೂರು, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷ ಮಂಜು ಕೊಳ, ಮಲ್ಪೆ ಬಿಲ್ಲವ ಸೇವಾ ಸಂಘದಅಧ್ಯಕ್ಷ ಕೃಷ್ಣಪ್ಪ ಜತ್ತನ್, ತಾ. ಪಂ. ಸದಸ್ಯ ಶರತ್ ಕುಮಾರ್, ವಿವಿಧ ಭಜನಾ ಮಂಡಳಿ, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಮಲ್ಪೆ ಮೀನುಗಾರರ ಸಂಘದ ನೇತƒತ್ವದಲ್ಲಿ ಮಲ್ಪೆ ಬಂದರಿನ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ 10 ಟನ್ ಅಕ್ಕಿ, 3ಟನ್ ಬೆಲ್ಲ, 10 ಸಾವಿರ ತೆಂಗಿನಕಾಯಿ, 1000ಲೀಟರ್ ತೆಂಗಿನ ಎಣ್ಣೆ ಹಾಗೂ ಮಲ್ಪೆ ವಲಯದ ವಿವಿಧ ಭಜನಾ ಮಂದಿರ, ಸಂಘ ಸಂಸ್ಥೆಗಳ ವತಿಯಿಂದಲೂ ಹೊರೆಕಾಣಿಕೆ ಸಮರ್ಪಣೆಗೊಂಡಿತ್ತು.
ಹೊರೆಕಾಣಿಕೆ ಸೇವೆಯಿಂದ ಶ್ರೀಕೃಷ್ಣ ಸಂಪೀÅತನಾಗಿ, ಹೇರಳ ಮತ್ಸÂ ಸಂಪತ್ತನ್ನು ಒದಗಿಸಲಿ, ನಾಡಿಗೆ ಸುಭೀಕ್ಷೆಯನ್ನು ನೀಡಲಿ ಎಂದು ಪರ್ಯಾಯ ಪೀಠವನ್ನೇರಲಿರುವ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಆಶಿರ್ವಚನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ