ಲಿಂಗ ಸ್ಪರ್ಶಿಸಿ ಪಥ ಬದಲಿಸಿದ ಸೂರ್ಯ


Team Udayavani, Jan 16, 2020, 3:09 AM IST

linga

ಚಿತ್ರಗಳು: ಫಕ್ರುದ್ಧೀನ್‌ ಎಚ್.

ಬೆಂಗಳೂರು: ಮಕರ ಸಂಕ್ರಾಂತಿಯ ದಿನವಾದ ಬುಧವಾರ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸೂರ್ಯನ ರಶ್ಮಿಯು ಗರ್ಭಗುಡಿಯಲ್ಲಿರುವ ಶಿವಲಿಂಗವನ್ನು 1.17 ನಿಮಿಷ ಕಾಲ ಸ್ಪರ್ಶಿಸಿತು. ಸೂರ್ಯನು ದಕ್ಷಿಣಾಯದಿಂದ ಉತ್ತರಾ ಯಣಕ್ಕೆ ಪಥ ಬದಲಿಸುವ ಸಮಯದಲ್ಲಾಗುವ ಈ ಅಪರೂಪದ ದೃಶ್ಯಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

ದೇವಾಲಯದ ಬಲಭಾಗದ ಕಿಂಡಿಯಿಂದ ಸಂಜೆ 5.34ರ ವೇಳೆಗೆ ಸೂರ್ಯ ರಶ್ಮಿ ಪ್ರವೇಶಿಸಿತು. ಮೊದಲು ಗವಿಗಂಗಾಧರೇಶ್ವರ ಲಿಂಗುವನ್ನು ಸ್ಪರ್ಶಿಸಿತು. ಬಳಿಕ ನಂದಿ ವಿಗ್ರಹದ ಮೂಲಕ ಹಾದು ಹೋದ ಸೂರ್ಯ ರಶ್ಮಿ ಪೂರ್ತಿ ಶಿವಲಿಂಗವನ್ನು ಆವರಿಸಿತು.

ಈ ವೇಳೆ ದೇವರಿಗೆ ನಿರಂತರವಾಗಿ ಈ ವೇಳೆ ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಲಾಯಿತು. ಸೂರ್ಯ ರಶ್ಮಿ ದೇವರನ್ನು ಸ್ಪರ್ಶಿಸಿ ಮರೆಯಾದ ನಂತರ ದೇವರಿಗೆ ಗಂಗಾ ಜಲದಲ್ಲಿ ಅಭಿಷೇಕ ಮಾಡಿ, ಪೂಜೆ ನೆರವೇರಿಸಲಾಯಿತು. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ದಂಪತಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಸೇರಿದಂತೆ ಹಲವು ಗಣ್ಯರು ವರ್ಷಕ್ಕೊಮ್ಮೆ ನಡೆಯುವ ಈ ಕೌತುಕವನ್ನು ಕಣ್ತುಂಬಿಕೊಂಡರು.

ಸೂರ್ಯ ರಶ್ಮಿ ಲಿಂಗ ಸ್ಪರ್ಶಿಸುವ ವೇಳೆ ಭಕ್ತರಿಗೆ ದೇವಾಲಯ ಪ್ರವೇಶ ನಿರ್ಬಂಧಿಸಿ, ದೇವಾಲಯದ ಹೊರಗೆ ಎಲ್‌ಇಡಿ ಹಾಗೂ ಎಲ್‌ಸಿಡಿ ಪರದೆ ಮೂಲಕ ನೇರ ಪ್ರಸಾರ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಸಂಜೆ 6.30ರಿಂದ ರಾತ್ರಿ 10 ಗಂಟೆವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಬುಧವಾರ ಒಂದೇ ದಿನ ದೇವಾಲಯಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದರು.

ಎಲ್ಲರಿಗೂ ಶುಭವಾಗಲಿದೆ: ಸೂರ್ಯ ರಶ್ಮಿ ಸ್ಪರ್ಶದ ಬಳಿಕ ದೇವಸ್ಥಾನದ ಪ್ರಧಾನ ಅರ್ಚಕ ಡಾ.ಸೋಮಸುಂದರ ದೀಕ್ಷಿತ್‌ ಮಾತನಾಡಿ, ಕಳೆದ ವರ್ಷ ಸೂರ್ಯನ ರಶ್ಮಿ ಶಿವಲಿಂಗವನ್ನು 1.03 ನಿಮಿಷ ಸ್ಪರ್ಶಿಸಿದ್ದು, ಲಿಂಗದ ಮೇಲ್ಭಾಗದಲ್ಲಿ ಏಳು ಸೆಕೆಂಡ್‌ ಕಾಲ ಕಿರಣಗಳು ಬಿದ್ದಿದ್ದವು.

ಹೀಗಾಗಿಯೇ, ಕಳೆದ ವರ್ಷ ಬಹಳಷ್ಟು ಅನಾಹುತಗಳು ರಾಜ್ಯದಲ್ಲಿ ಸಂಭವಿಸಿದ್ದವು. ಆದರೆ ಈ ವರ್ಷ ಕೇವಲ ಮೂರು ಸೆಂಕೆಂಡ್‌ಗಳು ಮಾತ್ರ ಲಿಂಗದ ಮೇಲ್ಭಾಗದಲ್ಲಿ ಕಿರಣ ಬಿದ್ದು, ಬಳಿಕ ಸೂರ್ಯ ಉತ್ತರಾಯಣ ಪ್ರವೇಶ ಮಾಡಿದನು. ಇದು ಶುಭ ಸಂಕೇತವಾಗಿದ್ದು, ಎಲ್ಲರಿಗೂ ಶುಭವಾಗಲಿದೆ ಎಂದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.