ನ್ಯಾಯಾಂಗ ತನಿಖೆ ಬಗ್ಗೆ ಫೆ.13ಕ್ಕೆ ನಿರ್ಧಾರ
Team Udayavani, Jan 16, 2020, 2:06 AM IST
ನಾಗ್ಪುರ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿರುದ್ಧ ಕೇಳಿ ಬಂದಿರುವ ನೀರಾವರಿ ಹಗರಣಗಳ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂಬ ಅರ್ಜಿಯ ವಿಚಾರಣೆ ಫೆ.13ರಂದು ನಡೆಯಲಿದೆ. ಈ ಬಗ್ಗೆ ಸಲ್ಲಿಕೆಯಾಗಿರುವ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಬುಧವಾರ ಈ ಆದೇಶ ನೀಡಿದೆ.