ದೇವರ ಎತ್ತುಗಳಿಗೆ ನೀರಿನ ಬರ

ಬೊಮ್ಮದೇವರಹಟ್ಟಿಯಲ್ಲಿ ಹನಿ ನೀರಿಗೂ ಪರದಾಟ

Team Udayavani, Jan 16, 2020, 12:53 PM IST

16-January-10

ಚಳ್ಳಕೆರೆ: ತಾಲೂಕಿನ ನನ್ನಿವಾಳಗ್ರಾಮ ಪಂಚಾಯತ್‌ ವ್ಯಾಪ್ತಿಯಬೊಮ್ಮದೇವರಹಟ್ಟಿಯಲ್ಲಿರುವ ದೇವರ ಎತ್ತುಗಳು ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಬೊಮ್ಮದೇವರ ‌ಹಟ್ಟಿಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಜಾನುವಾರುಗಳಿದ್ದು, ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಪ್ರತಿ ನಿತ್ಯ ಕಿಲಾರಿಗಳು ದೇವರ ಜಾನುವಾರುಗಳಿಗೆ ಬೇರೆ ಕಡೆಯಿಂದ ನೀರು ತಂದು ಬೊಗಸೆಯಲ್ಲೇ ನೀರನ್ನು ಕುಡಿಸಿ ಅವುಗಳ ಜೀವ ರಕ್ಷಣೆ ಮಾಡುತ್ತಿದ್ದಾರೆ. ಕಿಲೋಮೀಟರ್‌ ಗಟ್ಟಲೆ ಅಲೆಯುವ ದೇವರ ಎತ್ತುಗಳು ದಣಿವಾಗಿ ಬಾಯಾರಿದಾಗ ನೀರಿಗಾಗಿ ಅಂಗಲಾಚುತ್ತವೆ.

ಆ ಸಂದರ್ಭದಲ್ಲಿ ಕಿಲಾರಿಗಳು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಡುಕಾಡಿ ನೀರನ್ನು ತಂದು ಸ್ವಲ್ಪ ಕುಡಿಸಿ ದಣಿವಾರಿಸುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕಿಲಾರಿಗಳಾದ ಪಾಲಯ್ಯ, ಚಿನ್ನಯ್ಯ, ಜೋಗಯ್ಯ ನೀರು ಒದಗಿಸಲು ಪಡುತ್ತಿರುವ ಪರಿಪಾಟಲು ದೇವರಿಗೇ ಪ್ರೀತಿ.

ಬೊಮ್ಮದೇವರಹಟ್ಟಿಯ ದೇವರ ಎತ್ತುಗಳು ವಾಸವಾಗಿರುವ ಜಾಗದಲ್ಲಿ ಎರಡು ಕೊಳವೆಬಾವಿಗಳಿಂದ ನೀರಿನ ತೊಟ್ಟಿಗಳಿಗೆ ನೀರು ಪೂರೈಕೆಮಾಡಲಾಗುತ್ತಿತ್ತು. ಕಳೆದ ಕೆಲವು ತಿಂಗಳ ಹಿಂದೆ ಬಂದ ಮಳೆಯಿಂದಾಗಿ ನೀರು ಸಮೃದ್ಧವಾಗಿ ಲಭ್ಯವಿತ್ತು. ಆದರೆ ನೀರು ಸರಬರಾಜು
ಮಾಡಲು ಬೆಸ್ಕಾಂ ಕೆಲವೇ ಅಡಿಗಳ ದೂರದಲ್ಲಿ ವಿದ್ಯುತ್‌ ಸಂಪರ್ಕಕ್ಕೆ ಹಾಕಿರುವ ಟ್ರಾನ್ಸ್‌ಫಾರ್ಮರ್‌ ಸುಟ್ಟು ಹೋಗಿ ತಿಂಗಳು ಕಳೆದಿದೆ. ಈ ಬಗ್ಗೆ ಕಿಲಾರಿಗಳು ಹಾಗೂ ಗ್ರಾಮಸ್ಥರು ತಹಶೀಲ್ದಾರ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಟಾನ್ಸ್‌ಫಾರ್ಮರ್‌ ದುರಸ್ತಿ ಮಾಡಿಸುವಂತೆ ಒತ್ತಾಯಿಸಿದ್ದಾರೆ.

ಟಾನ್ಸ್‌ಫಾರ್ಮರ್‌ ಸುಟ್ಟು ಹೋದ ಕಾರಣ ದೇವರ ಎತ್ತುಗಳಿಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಕೂಡಲೇ ಟಾನ್ಸ್ ಫಾರ್ಮರ್‌ ದುರಸ್ತಿ ಮಾಡಿಸಿ
ಅಥವಾ ಬದಲಾಯಿಸಿ ಎಂದು ಮನವಿ ಮಾಡಿದ್ದರೂ ಅಧಿಕಾರಿಗಳು ಮಾತ್ರ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತಾಳಿದ್ದಾರೆ. ಹಾಗಾಗಿ ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುವ ಸ್ಥಿತಿ ಉಂಟಾಗಿದೆ.

ಕಿಲಾರಿಗಳಿಗೆ ಜಾನುವಾರುಗಳನ್ನು ರಕ್ಷಿಸಿಕೊಳ್ಳುವುದೇ ಸವಾಲಾಗಿ ಪರಿಣಮಿಸಿದೆ. ಇಷ್ಟೆಲ್ಲ ಆದರೂ ಬೆಸ್ಕಾಂ ಅಧಿಕಾರಿಗಳು ಮಾತ್ರ ಟ್ರಾನ್ಸ್ ಫಾರ್ಮರ್‌ ದುರಸ್ತಿ ಮಾಡಿಸದೆ ನಿರ್ಲಕ್ಷ್ಯ ತಾಳಿರುವುದು ಕಿಲಾರಿಗಳು ಹಾಗೂ ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ.

„ಕೆ.ಎಸ್‌. ರಾಘವೇಂದ್ರ

ಟಾಪ್ ನ್ಯೂಸ್

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.