ಹೀಗಿರಲಿದೆ ಈ ಬಾರಿಯ ಜನಗಣತಿ ; ನೀವು ನೀಡಬೇಕಾದ ವಿವರಗಳು ಹೀಗಿವೆ

2020ರ ಎಪ್ರಿಲ್ 01ರಿಂದ ಸೆಪ್ಟಂಬರ್ 30ವರೆಗೆ ಮತ್ತು ಫೆಬ್ರವರಿ 2021ರಿಂದ ಹೀಗೆ ಎರಡು ಹಂತಗಳಲ್ಲಿ ನಡೆಯಲಿದೆ ಈ ಬಾರಿಯ ಜನಗಣತಿ...

Team Udayavani, Jan 16, 2020, 6:22 PM IST

Census-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ನವದೆಹಲಿ: ರಾಷ್ಟ್ರೀಯ ಜನಸಂಖ್ಯಾ ದಾಖಲಾತಿ (NPR) ಸಹಿತವಾಗಿರುವ ಈ ಬಾರಿಯ ಜನಗಣತಿಯ ಸಂದರ್ಭದಲ್ಲಿ ನಾಗರಿಕರು ಯಾವುದೇ ರೀತಿಯ ದಾಖಲೆಗಳನ್ನು ಸಲ್ಲಿಸಬೇಕಾಗಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಇಂದು ಸ್ಪಷ್ಟಪಡಿಸಿದೆ.

ಎನ್.ಪಿ.ಆರ್. ಸಂದರ್ಭದಲ್ಲಿ ಜನಗಣತಿದಾರರು ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ ಆದರೆ ಜನರು ಪರಿಶೀಲನೆಯ ಉದ್ದೇಶದಿಂದ ತಮ್ಮಲ್ಲಿರುವ ದಾಖಲೆಗಳನ್ನು ಗಣತಿ ಅಧಿಕಾರಿಗಳಿಗೆ ತೋರಿಸಲು ಬಯಸಿದರೆ ಅದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಈ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದೆ. ಪ್ರಥಮ ಹಂತ ಇದೇ ಎಪ್ರಿಲ್ 01 ರಿಂದ ಸೆಪ್ಟಂಬರ್ 30ರವರೆಗೆ ನಡೆಯಲಿದೆ. ಈ ಹಂತದಲ್ಲಿ ಮನೆ ಒಡೆತನಕ್ಕೆ ಸಂಬಂಧಿಸಿದ ವಿವರಗಳನ್ನು ಗಣತಿದಾರರು ಸಂಗ್ರಹಿಸಲಿದ್ದಾರೆ. ಇದರಲ್ಲಿ, ಮನೆಯ ಮುಖ್ಯಸ್ಥರು ಯಾರು, ಮನೆಯಲ್ಲಿ ಎಷ್ಟು ಜನರಿದ್ದಾರೆ? ಯಾವೆಲ್ಲಾ ಸೌಲಭ್ಯಗಳು ಮನೆಯಲ್ಲಿ ಇವೆ? ಶೌಚಾಲಯವಿದೆಯೇ? ಮೊಬೈಲ್ ನಂಬರ್ ಕುರಿತಾದ ಮಾಹಿತಿ, ಮನೆಯ ಸದಸ್ಯರಲ್ಲಿ ಎಷ್ಟು ವಾಹನಗಳಿವೆ…? ಎಂಬೆಲ್ಲಾ ವಿವರಗಳನ್ನು ಈ ಸಂದರ್ಭದಲ್ಲಿ ಗಣತಿದಾರರು ಸಂಗ್ರಹಿಸಲಿದ್ದಾರೆ.

ಇನ್ನು 2021ರ ಫೆಬ್ರವರಿಯಲ್ಲಿ ಪ್ರಾರಂಭವಾಗಲಿರುವ ಜನಗಣತಿಯ ಎರಡನೇ ಹಂತದಲ್ಲಿ ಕೇಳಲಾಗುವ ಹೆಚ್ಚಿನ ಪ್ರಶ್ನೆಗಳು ವ್ಯಕ್ತಿ ಕೇಂದ್ರಿತವಾಗಿರುತ್ತವೆ. ಉದಾಹರಣೆಗೆ, ‘ಮನೆಯಲ್ಲಿ ಎಷ್ಟು ಜನರಿದ್ದಾರೆ?’ ಎಂಬ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ದೇಶದ ಒಟ್ಟಾರೆ ಜನಸಂಖ್ಯೆಯನ್ನು ಲೆಕ್ಕಾಚಾರ ಮಾಡಲು ಸಹಕಾರಿಯಾಗಲಿದೆ.

ದುರ್ಗಮ ಪ್ರದೇಶಗಳಲ್ಲಿ ಜನಗಣತಿ ನಡೆಸಲು ಹೋಗುವ ಅಧಿಕಾರಿಗಳನ್ನು ಹೆಲಿಕಾಫ್ಟರ್ ಮೂಲಕ ಕರೆದೊಯ್ಯಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. 2011ರ ಜನಗಣತಿ ಸಂದರ್ಭದಲ್ಲೂ ದುರ್ಗಮ ಪ್ರದೇಶಗಳಲ್ಲಿ ಜನಗಣತಿ ಕಾರ್ಯಕ್ಕಾಗಿ ಹೆಲಿಕಾಫ್ಟರ್ ಗಳನ್ನು ಬಳಸಲಾಗಿತ್ತಾದರೂ ಈ ಬಾರಿ ದೊಡ್ಡ ಪ್ರಮಾಣದಲ್ಲಿ ಇವುಗಳ ಸೇವೆಯನ್ನು ಬಳಸಿಕೊಳ್ಳುವ ಕುರಿತಾಗಿ ಮಾಹಿತಿ ಲಭ್ಯವಾಗಿದೆ.

ಇನ್ನೂ ವಿಶೇಷವೆಂದರೆ ಈ ಬಾರಿಯ ಜನಗಣತಿ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲೇ ನಡೆಯಲಿದೆ. ಇದಕ್ಕಾಗಿ ಸರಕಾರವು ವಿಶೇಷ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದು ಇದನ್ನು ಜನಗಣತಿ ಅಧಿಕಾರಿಗಳು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು. ಬಳಿಕ ಈ ಅ್ಯಪ್ ಮೂಲಕವೇ ತಾವು ಪಡೆದುಕೊಳ್ಳುವ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಲೆಕ್ಕಾಚಾರ ಮಾಡಲು ಸಾಧ್ಯವಾಗಲಿದೆ.ಇದಕ್ಕಾಗಿ ಜನಗಣತಿಯಲ್ಲಿ ಭಾಗವಹಿಸುವ ಅಧಿಕಾರಿಗಳಿಗೆ ನಾಲ್ಕು ಹಂತಗಳಲ್ಲಿ ತರಬೇತಿಯನ್ನೂ ಸಹ ನೀಡಲಾಗುವುದು.

ಮೊದಲನೇ ಹಂತದ ಜನಗಣತಿಗಾಗಿ ಒಟ್ಟು 30 ಲಕ್ಷ ಉದ್ಯೋಗಿಗಳನ್ನು ನಿಯೋಜಿಸಲಾಗುವುದು. ಕಳೆದ ಜನಗಣತಿ ಸಂದರ್ಭದಲ್ಲಿ ಇವರಿಗೆ ಭತ್ಯೆ ರೂಪದಲ್ಲಿ 5,500 ರೂಪಾಯಿಗಳನ್ನು ನೀಡಲಾಗಿತ್ತು. ಈ ಬಾರಿ ಗಣತಿದಾರಿಗೆ ಮನೆಗಳ ಪಟ್ಟಿ ಮಾಡುವಿಕೆ, ಜನಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ದಾಖಲಾತಿಗಳ ಮಾಹಿತಿ ಸಂಗ್ರಹಿಸಬೇಕಾಗಿರುವ ಕಾರಣದಿಂದ ಅವರ ಗಣತಿ ಭತ್ಯೆಯನ್ನು 25 ಸಾವಿರ ರೂಪಾಯಿಗಳಿಗೆ ಏರಿಸಲಾಗಿದೆ.

ಎನ್.ಪಿ.ಆರ್. ಮತ್ತು ಜನಗಣತಿಗಳಿಗೆ ಪ್ರತ್ಯೇಕ ಫಾರ್ಮ್ ಗಳಿರುತ್ತವೆ. ಮೊದಲನೇ ಹಂತದ ಜನಗಣತಿ ಮತ್ತು ಎನ್.ಪಿ.ಆರ್.ನಲ್ಲಿ ಕುಟುಂಬಗಳು ತಾವು ನೀಡಿದ ಮಾಹಿತಿಯನ್ನು ಖಚಿತ ಪಡಿಸಬೇಕಾಗಿರುತ್ತದೆ. ಎನ್.ಪಿ.ಆರ್.ನಲ್ಲಿ ಯಾವುದೇ ಬಯೋಮೆಟ್ರಿಕ್ ದಾಖಲೆಗಳನ್ನು ಹಾಗೂ ದಾಖಲೆಯ ಕಾಗದ ಪ್ರತಿಗಳನ್ನು ಕೇಳಲಾಗುವುದಿಲ್ಲ. ಆದರೆ ಗಣತಿದಾರರು ಕೇಳುವ ಪ್ರಶ್ನೆಗಳಿಗೆ ನೀವು ಸರಿಯಾದ ಮಾಹಿತಿಯನ್ನು ನೀಡಬೇಕಾಗಿರುತ್ತದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.