ಹೈ ವೋಲ್ಟೇಜ್ ಖಾಕಿ

ಕಣ್ಣ ಮುಂದೆ ಕಾಸಿದೆ...

Team Udayavani, Jan 17, 2020, 4:01 AM IST

AN-13

“ಈ ಸಿನಿಮಾ ನನಗೆ ತುಂಬಾನೇ ಸ್ಪೆಷಲ್‌…’
– ಚಿರಂಜೀವಿ ಸರ್ಜಾ ಹೀಗೆ ಹೇಳಿದ್ದು, ತಮ್ಮ “ಖಾಕಿ’ ಚಿತ್ರದ ಕುರಿತು. ಅವರು ಹಾಗೆ ಹೇಳ್ಳೋಕೆ ಕಾರಣ, ಚಿತ್ರದ ಕಥೆ ಮತ್ತು ಪಾತ್ರ. ಅಷ್ಟೇ ಅಲ್ಲ, ಇಡೀ ಚಿತ್ರತಂಡ ಮಾಡಿಕೊಂಡ ಸ್ಕ್ರಿಪ್ಟ್. ಹಾಗಾಗಿ “ಖಾಕಿ’ ಅವರ ಸಿನಿಜರ್ನಿಯಲ್ಲಿ ತುಂಬಾನೇ ಸ್ಪೆಷಲ್‌ ಸಿನಿಮಾ ಅಂತೆ. “ಖಾಕಿ’ ಜ.24 ರಂದು ಬಿಡುಗಡೆಯಾಗುತ್ತಿದೆ. ಆ ಕುರಿತು ಹೇಳಿಕೊಳ್ಳಲೆಂದೇ ಚಿತ್ರತಂಡದ ಜೊತೆ ಆಗಮಿಸಿದ್ದ ಅವರು ಹೇಳಿದ್ದಿಷ್ಟು. “ಇದುವರೆಗೆ ಹಲವು ಚಿತ್ರಗಳಲ್ಲಿ ಬೇರೆ ಬೇರೆ ಪಾತ್ರ ಮಾಡಿದ್ದೆ. “ಖಾಕಿ’ ಪಕ್ಕಾ ಕಮರ್ಷಿಯಲ್‌ ಚಿತ್ರವಾಗಿದ್ದರೂ, ಕಂಟೆಂಟ್‌ ಬೇಸ್ಡ್ ಸಿನಿಮಾ. ಅದರಲ್ಲೂ ನಮ್ಮ ನಡುವೆ ನಡೆಯುವ ವಿಷಯ ಕೆಲವರಿಗಷ್ಟೇ ಗೊತ್ತು. ಆದರೆ, ಬಹಳಷ್ಟು ಜನರಿಗೆ ಗೊತ್ತಿರಲ್ಲ. ಗೊತ್ತಿಲ್ಲದೆ ನಮ್ಮನ್ನ ಹೇಗೆಲ್ಲಾ ಬಳಸಿಕೊಳ್ಳುತ್ತಾರೆ ಎಂಬ ಅಂಶ ಇಲ್ಲಿದೆ. ಒಂದು ಏರಿಯಾದಲ್ಲಿ ನಡೆಯುವಂತಹ ಕಥೆ ಇದು. ಈ ಚಿತ್ರ ಮಾಡಿದ್ದಕ್ಕೆ ಖುಷಿ ಇದೆ. ಚಿರು ಮಾಡ್ತಾನೆ ಎಂಬ ನಂಬಿಕೆ ಇಟ್ಟು, ಸಿನಿಮಾ ಕೊಟ್ಟಿದ್ದರು. ಆ ನಂಬಿಕೆ ಉಳಿಸಿಕೊಂಡಿದ್ದೇನೆ ಎಂಬ ನಂಬಿಕೆ ನನಗಿದೆ’ ಎಂದರು ಚಿರು.

ನಿರ್ಮಾಪಕ ತರುಣ್‌ ಶಿವಪ್ಪ ಅವರಿಗೆ ಒಳ್ಳೆಯ ಸಿನಿಮಾ ಮಾಡಿದ ಖುಷಿ. ಆ ಬಗ್ಗೆ ಹೇಳುವ ಅವರು, “ರಿಲೀಸ್‌ ಮುನ್ನವೇ ಕಣ್ಣ ಮುಂದೆ ಹಣ ಹಿಂದಿರುಗುವ ಲಕ್ಷಣವಿದೆ. ಅಷ್ಟರ ಮಟ್ಟಿಗೆ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಅದರಲ್ಲೂ ಕೆ.ಮಂಜು ಚಿತ್ರ ರಿಲೀಸ್‌ ಮಾಡಿಕೊಡುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ವ್ಯಾಪಾರ ಆಗ್ತಾ ಇದೆ. ಅದೇ ಚಿತ್ರದ ಮೊದಲ ಗೆಲುವು ಅಂದುಕೊಂಡಿದ್ದೇನೆ. ಚಿರು ಜೊತೆ ಹಿಂದೆ ಕೆಲಸ ಮಾಡಬೇಕಿತ್ತು. ಆಗಲಿಲ್ಲ. ಈಗ “ಖಾಕಿ’ ಮೂಲಕ ಒಂದಾಗಿದ್ದೇವೆ. ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರ. ಕಥೆಯಲ್ಲಿ ಗಟ್ಟಿತನವಿದೆ. ಚಿರು ಸಾಕಷ್ಟು ಸಹಕಾರ ಕೊಟ್ಟಿದ್ದಾರೆ. ಬೆಳಗ್ಗೆಯಿಂದ ಮಧ್ಯರಾತ್ರಿ 3.30 ವರೆಗೆ ಕೆಲಸ ಮಾಡುವ ಮೂಲಕ ಬೆಂಬಲಿಸಿದ್ದಾರೆ. ಇನ್ನು, ನಾಯಕಿ ತಾನ್ಯಾ ಹೋಪ್‌ ಕೂಡ ತಮ್ಮ ಪಾತ್ರವನ್ನು ನೀಟ್‌ ಆಗಿ ಕಟ್ಟಿಕೊಟ್ಟಿದ್ದಾರೆ. ನಿರ್ದೇಶಕ ನವೀನ್‌ ಕೂಡ ಅಂದುಕೊಂಡಂತೆ ಸಿನಿಮಾ ಮಾಡಿದ್ದಾರೆ. ಕನ್ನಡಕ್ಕೆ ಒಳ್ಳೆಯ ನಿರ್ದೇಶಕ ಆಗುವ ಭರವಸೆ ಮೂಡಿಸಿದ್ದಾರೆ. ಮುಂದಿನ ವಾರ ಚಿತ್ರ ಬಿಡುಗಡೆಯಾಗುತ್ತಿದೆ. ಎಲ್ಲರ ಸಹಕಾರ, ಬೆಂಬಲ ಇರಲಿ’ ಎಂದರು ತರುಣ್‌. ನಾಯಕಿ ತಾನ್ಯಾ ಹೋಪ್‌ ಅವರಿಲ್ಲಿ ಹೀರೋಗೆ ಸಹಾಯ ಮಾಡುವ ಪಾತ್ರ ಮಾಡಿದ್ದಾರಂತೆ. ಮನರಂಜನೆಯ ಚಿತ್ರ ಇದಾಗಿದ್ದು, ಎಲ್ಲ ವರ್ಗಕ್ಕೂ ಖುಷಿ ಕೊಡುತ್ತದೆ ಅಂದರು ತಾನ್ಯಾ. ನಿರ್ದೇಶಕ ನವೀನ್‌ ಅವರಿಗೆ ಇದು ಮೊದಲ ಚಿತ್ರ. ತರುಣ್‌ ಅವರಿಂದ ನಿರ್ದೇಶಕನಾಗಿದ್ದರ ಬಗ್ಗೆ ಹೇಳಿಕೊಂಡ ಅವರು, ನಿರ್ಮಾಪಕರಿಗೆ ಸಿನಿಮಾ ಪ್ರೀತಿ ಇದೆ. ಆ ಕಾರಣಕ್ಕೆ ಏನನ್ನೂ ಇಲ್ಲ ಎನ್ನದೆ ಕೊಟ್ಟು, ರಿಚ್‌ ಆಗಿ ಸಿನಿಮಾ ಮೂಡಲು ಕಾರಣರಾಗಿದ್ದಾರೆ. ನಮ್ಮ ಸಿನಿಮಾಗೆ ನಿಮ್ಮೆಲ್ಲರ ಬೆಂಬಲ ಇರಲಿ ಎಂದರು ನವೀನ್‌.

ಚಿತ್ರದಲ್ಲಿ ಶಿವಮಣಿ, ಶಶಿ ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರಕ್ಕೆ ಮಾಸ್ತಿ ಮಂಜು ಸಂಭಾಷಣೆ ಬರೆದಿದ್ದಾರೆ. ಋತ್ವಿಕ್‌ ಸಂಗೀತವಿದೆ. ಬಾಲ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.