ಅರೆಬೆಂದ ಹುಡುಗರ ಕಥೆ

ಅಪರಿಪೂರ್ಣತೆಯ ಸುತ್ತ ಪರಿಪೂರ್ಣ ಸಿನ್ಮಾ

Team Udayavani, Jan 17, 2020, 5:55 AM IST

an-18

ನೀವೇನಾದರೂ ಮೊಟ್ಟೆ ಪ್ರಿಯರೋ, ಆಮ್ಲೆಟ್‌ ಪ್ರಿಯರೋ ಆಗಿದ್ದರೆ, ಖಂಡಿತ “ಹಾಫ್ ಬಾಯಿಲ್ಡ್‌’ ಅನ್ನೋ ಪದದ ಬಗ್ಗೆ ಕೇಳಿರುತ್ತೀರಿ ಅಥವಾ ಮೊಟ್ಟೆಯನ್ನು ಅರ್ಧ ಬೇಯಿಸಿ ಅದರ ರುಚಿಗೊಂದಷ್ಟು ಉಪ್ಪು-ಖಾರ ಬೆರೆಸಿ “ಹಾಫ್ ಬಾಯಿಲ್ಡ್‌’ ಅಂಥ ಬಾಯಿ ಚಪ್ಪರಿಸುವವರನ್ನಾದರೂ ನೋಡಿರುತ್ತೀರಿ. ಈಗ ಯಾಕೆ “ಹಾಫ್ ಬಾಯಿಲ್ಡ್‌’ ಬಗ್ಗೆ ಮಾತು ಅಂತೀರಾ? ಅದಕ್ಕೊಂದಿಷ್ಟು ಕಾರಣವಿದೆ. ಇಲ್ಲೊಂದು ಹೊಸಬರ ತಂಡ ಈಗ ಇದೇ ಹೆಸರಿನಲ್ಲಿ, “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅನ್ನೋ ಚಿತ್ರವನ್ನು ತೆರೆಯ ಮೇಲೆ ತರಲು ಹೊರಟಿದೆ.

ಅಂದಹಾಗೆ, “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅಂಥ ಚಿತ್ರಕ್ಕೆ ಹೆಸರಿಡೋದಕ್ಕೂ ಬಲವಾದ ಕಾರಣವಿದೆ­ಯಂತೆ. “ಈಗಿನ ಕಾಲದ ಹುಡುಗರು ಯಾವುದನ್ನೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದಿಲ್ಲ. ಯಾವುದರಲ್ಲೂ ಪರಿಣಿತರಾಗಿರುವುದಿಲ್ಲ. ಯಾವುದರಲ್ಲೂ ಪರಿಪೂರ್ಣರಾಗಿರುವುದಿಲ್ಲ. ಹಿಡಿದ ಕೆಲಸವನ್ನು ಸಂಪೂರ್ಣವಾಗಿ ಮುಗಿಸುವುದಿಲ್ಲ. ಎಲ್ಲವನ್ನು ಅರ್ಧಂಬರ್ಧ ತಿಳಿದುಕೊಂಡಿರುತ್ತಾರೆ. ಎಲ್ಲವನ್ನೂ ಅರ್ಧಂಬರ್ಧ ಮಾಡುತ್ತಾರೆ. ಇಂಥ ಹುಡುಗರ ಜೀವನದ ಸುತ್ತ ಈ ಚಿತ್ರದ ಕಥೆ ನಡೆಯುವುದರಿಂದ, ಚಿತ್ರಕ್ಕೆ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಅಂಥ ಹೆಸರಿಡಲಾಗಿದೆ’ ಎಂಬುದು ಚಿತ್ರದ ಟೈಟಲ್‌ ಕುರಿತು ಚಿತ್ರತಂಡದ ವಿವರಣೆ.

ಈಗಾಗಲೇ ಸದ್ದಿಲ್ಲದೆ ತನ್ನ ಕೆಲಸಗಳನ್ನು ಪೂರ್ಣಗೊಳಿಸಿರುವ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಚಿತ್ರತಂಡ ಇದೇ ಜ. 24ಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆಯಲ್ಲಿದೆ. ಸದ್ಯ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಇತ್ತೀಚೆಗೆ ಮಾಧ್ಯಮಗಳ ಮುಂದೆ ಬಂದಿತ್ತು. ಚಿತ್ರಕ್ಕೆ ಶಿವರಾಜ್‌ ಬಿ, ವೆಂಕಟಾಚಲ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮೊದಲಿಗೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕರು, “ಇಂದಿನ ಯುವಕರು ಜೀವನವನ್ನು ಹೇಗೆ ಅರ್ಥ ಮಾಡಿಕೊಂಡಿರುತ್ತಾರೆ. ನಮ್ಮ ಯುವಕರಿಗೆ ಹೇಳ್ಳೋರು, ಕೇಳ್ಳೋರು, ತಿಧ್ದೋರು ಇಲ್ಲದಿ­ದ್ದರೆ ಅವರ ಜೀವನದಲ್ಲಿ ಏನೆಲ್ಲ ಆಗಬಹುದು ಅನ್ನೋದನ್ನ ನಾಲ್ಕು ಹುಡು­ಗರನ್ನು ಇಟ್ಟುಕೊಂಡು ಈ ಚಿತ್ರದಲ್ಲಿ ಹೇಳಿದ್ದೇವೆ’ ಎಂದು ಚಿತ್ರದ ಕಥೆಯ ಎಳೆ ಬಿಚ್ಚಿಟ್ಟರು.

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ನಾವೆಲ್ರೂ ಹಾಫ್ ಬಾಯಿಲ್ಡ್‌’ ಚಿತ್ರ­ದಲ್ಲಿ ಸುನೀಲ್‌ ಕುಮಾರ್‌, ದೀಪಕ್‌, ಹಂಪೇಶ್‌, ಮಂಜುನಾಥ್‌ ನಾಯಕರಾಗಿ, ಮಾತಂಗಿ ಪ್ರಸನ್‌, ವಿನ್ಯಾ ಶೆಟ್ಟಿ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ತಬಲನಾಣಿ, ದೇವದಾಸ್‌ ಕಾಪಿಕಾಡ್‌, ಪವನ್‌ ಕುಮಾರ್‌, ಅನಂತ್‌ ಇತರರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ರಮೇಶ್‌ ಕುಶಂಧರ್‌ ರೆಡ್ಡಿ ಕ್ಯಾಮರಾ ಹಿಡಿದರೆ, ಅದೇ ಚಿತ್ರಕ್ಕೆ ನೃತ್ಯ ನಿರ್ದೇಶಿಸಿದ್ದ ಪ್ರೇಮ್‌ ರಕ್ಷಿತ್‌ ಈ ಚಿತ್ರದ ಹಾಡಿಗೆ ಕೋರಿಯೋಗ್ರಾಫಿ ಮಾಡಿದ್ದಾರೆ. ಚಿತ್ರಕ್ಕೆ ನಾಗೇಂದ್ರ ಕೆ. ಉಜ್ಜನಿ ಸಂಕಲನವಿದೆ. ಚಿತ್ರದ ಹಾಡುಗಳಿಗೆ ವಿಜಯ ಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ಬಹದ್ದೂರ್‌ ಚೇತನ್‌ ಸಾಹಿತ್ಯವಿದ್ದು, ತಬಲನಾಣಿ ಸಂಭಾಷಣೆಯಿದೆ. 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.