ಚಿತ್ತಾಕರ್ಷಕ ನೃತ್ಯ ರೂಪಕ “ಶ್ರೀಕೃಷ್ಣ ಸಂದರ್ಶನಂ’

ಸೃಷ್ಟಿ ನೃತ್ಯ ಕಲಾ ಕುಟೀರ ಪ್ರಸ್ತುತಿ

Team Udayavani, Jan 17, 2020, 1:33 AM IST

an-52

ಶ್ರೀ ಕೃಷ್ಣನ ಲೀಲಾಮೃತಗಳನ್ನು ಪ್ರಚುರಪಡಿಸುವ ಉದ್ದೇಶದಿಂದ “ಶ್ರೀಕೃಷ್ಣ ಸಂದರ್ಶನಂ’ ನೃತ್ಯ ರೂಪಕವನ್ನು ರಚಿಸಿ ಪ್ರಸ್ತುತಪಡಿಸಲಾಗಿದೆ. ಈ ನೃತ್ಯ ರೂಪಕದಲ್ಲಿ ಶ್ರೀ ಕೃಷ್ಣ ಪರಮಾತ್ಮನ ಜನನದಿಂದ ಹಿಡಿದು ಆತನ ವಿಶ್ವರೂಪ ದರ್ಶನದ ವರೆಗೆ ಹೆಣೆದು ಪ್ರಸ್ತುತಪಡಿಸಲಾಗಿದೆ.

ಶ್ರೀ ಕೃಷ್ಣಮಠ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ತುಲಾಭಾರ ಮಹೋತ್ಸವ ಪ್ರಯುಕ್ತ ವಿಶೇಷ ಲೈಟಿಂಗ್‌, ಸೆಟ್ಟಿಂಗ್ಸ್‌, ಎಲ್‌ಸಿಡಿ ವೀಡಿಯೋ ಗ್ರಾಫಿಕ್ಸ್‌ ತಂತ್ರಜ್ಞಾನದೊಂದಿಗೆ ಉಡುಪಿಯಲ್ಲಿ ಪ್ರಥಮ ಬಾರಿಗೆ ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದವರಿಂದ ಪ್ರಸ್ತುತಿಗೊಂಡ “ಶ್ರೀಕೃಷ್ಣ ಸಂದರ್ಶನಂ’ ನೃತ್ಯ ರೂಪಕ ಚಿತ್ತಾಕರ್ಷಕವಾಗಿ ಮೂಡಿಬಂದಿದೆ.
ಶ್ರೀ ಕೃಷ್ಣನ ಲೀಲಾಮೃತಗಳನ್ನು ಪ್ರಚುರಪಡಿಸುವ ಉದ್ದೇಶದಿಂದ “ಶ್ರೀಕೃಷ್ಣ ಸಂದರ್ಶನಂ’ ನೃತ್ಯ ರೂಪಕವನ್ನು ರಚಿಸಿ ಪ್ರಸ್ತುತಪಡಿಸಲಾಗಿದೆ. ಈ ನೃತ್ಯ ರೂಪಕದಲ್ಲಿ ಶ್ರೀ ಕೃಷ್ಣ ಪರಮಾತ್ಮನ ಜನನದಿಂದ ಹಿಡಿದು ಆತನ ವಿಶ್ವರೂಪ ದರ್ಶನದ ವರೆಗೆ ಹೆಣೆದು ಪ್ರಸ್ತುತಪಡಿಸಲಾಗಿದೆ. ಮಧುರೆಯಲ್ಲಿ ಶ್ರೀ ಕೃಷ್ಣನ ಹುಟ್ಟು, ಶ್ರೀಕೃಷ್ಣನನ್ನು ಮಧುರೆಯಿಂದ ನಂದಗೋಕುಲಕ್ಕೆ ಕರೆದುಕೊಂಡು ಬರುವುದು, ಶ್ರೀಕೃಷ್ಣ ಬಾಲಲೀಲೆ, ಪೂತನಿ ಮೋಕ್ಷ, ಅಗಾಸುರ, ಬಕಾಸುರ, ತೃಣಾಬರ್ತಾ, ಶಕಟಾಸುರ ವಧೆ, ಕಾಳಿಂಗ ಮರ್ದನ, ಶ್ರೀಕೃಷ್ಣ ರಾಸಲೀಲೆ, ಗೋವರ್ಧನ ಗಿರಿ ಎತ್ತುವುದು, ಅಕ್ರೂರನಿಗೆ ದರ್ಶನ, ಚಾಣೂರ, ಮುಷ್ಟಿಕಾದಿ ರಾಕ್ಷಸರ ವಧೆ, ಕಂಸ ವಧೆ, ರುಕ್ಮಿಣಿ, ಸತ್ಯಭಾಮೆ, ಸಣ್ಮಹಿಷಿಯರೊಂದಿಗೆ ವಿವಾಹ, ಪಾರಿಜಾತ ವೃಕ್ಷದ ಕಥೆ, ಶ್ರೀಕೃಷ್ಣ ತುಲಾಭಾರ, ವಾದಿರಾಜರು ಬರೆದಿರುವಂತೆ ಉಡುಪಿಗೆ ಕೃಷ್ಣನ ವಿಗ್ರಹ ಬಂದ ಬಗೆ, ಮಧ್ವಾಚಾರ್ಯರಿಗೆ ಗೋಪಿಚಂದನದ ಉಂಡೆಯಲ್ಲಿ ಕೃಷ್ಣ ವಿಗ್ರಹ ಗೋಚರ, ಉಡುಪಿಯಲ್ಲಿ ಕೃಷ್ಣ ವಿಗ್ರಹದ ಪ್ರತಿಷ್ಠಾಪನೆ, ಪೂಜೆಗಾಗಿ ಅಷ್ಟಮಠಗಳನ್ನು ಸ್ಥಾಪಿಸಿ, ಪರ್ಯಾಯ ಪದ್ಧತಿಯಂತೆ ಪೂಜಾ ಕೈಂಕರ್ಯ ಹಾಗೂ ವಿಶ್ವರೂಪ ದರ್ಶನದೊಂದಿಗೆ ವಿಶಿಷ್ಟ ವೀಡಿಯೋ ಗ್ರಾಫಿಕ್ಸ್‌ ಮತ್ತು ಲೈಟಿಂಗ್ಸ್‌ಗಳೊಂದಿಗೆ ಸೃಷ್ಟಿ ಕಲಾಕುಟೀರದ ಚೌಷಷ್ಠಿ (64) ಕಲಾವಿದರಿಂದ ಪ್ರಸ್ತುತಿಗೊಂಡಿತು.

ಸಮಗ್ರ ತಂಡ
ನೃತ್ಯ ರೂಪಕಕ್ಕೆ ಕಥೆ ಮತ್ತು ಸಂಭಾಷಣೆಯಲ್ಲಿ ಡಾ| ಕೊರ್ಲಹಳ್ಳಿ ವೆಂಕಟೇಶ್‌ ಆಚಾರ್ಯ, ಸಾಹಿತ್ಯ ಕರ್ನಾಟಕ ಹರಿದಾಸರು, ರಾಗ ಸಂಯೋಜನೆ, ಚಿತ್ರಕತೆ, ನಿರ್ದೇಶನ ಹಾಗೂ ಸಂಗೀತ ನಿರ್ದೇಶನ ಡಾ| ವಿ|ಮಂಜರಿ ಚಂದ್ರ, ಧ್ವನಿಮುದ್ರಿತ ಹಿನ್ನೆಲೆ ಸಂಗೀತಕ್ಕೆ ಸಂಗೀತಾ ಬಾಲಚಂದ್ರ, ಅರುಣ್‌ ನಾಯಕ್‌ ಆತ್ರಾಡಿ ಅವರ ಹಾಡುಗಾರಿಕೆ, ಕಲಾಶ್ರೀ ಡಾ| ಹನುಮಂತರಾಜು ಮೈಸೂರು ಅವರ ಮೃದಂಗ, ನಿತೀಶ್‌ ಅಮ್ಮಣ್ಣಾಯರ ಕೊಳಲು ವಾದನ, ವಾಮನ್‌ ಕಾರ್ಕಳ ಅವರ ರಿದಂ ಪ್ಯಾಡ್‌ ಸಹಕರಿಸಿದ್ದರು.

ಸಪ್ತ ಕೃಷ್ಣರ ಸಮಾಗಮ
ನೃತ್ಯ ರೂಪಕದ ಬಹು ವಿಶೇಷತೆ ಎಂಬಂತೆ ಸಪ್ತ ಶ್ರೀಕೃಷ್ಣರಾಗಿ ಉಡುಪಿಯ ಸೃಷ್ಟಿ ನೃತ್ಯ ಕಲಾಕುಟೀರ ನಿರ್ದೇಶಕಿ ವಿದುಷಿ ಡಾ| ಮಂಜರಿ ಚಂದ್ರ, ಹರ್ಷ್‌, ಲಹರಿ, ಸ್ಮೆರಾ, ಹಿತಾ ಮಯ್ಯ, ಜಾನಕಿ, ಪನ್ನಗ ಅವರಿಂದ ಶ್ರೀಕೃಷ್ಣ, ಸಂಸ್ಥೆಯ ಹಿರಿಯ ಕಲಾವಿದೆಯರಾದ ವಿ| ಅಕ್ಷತಾ ಪವನ್‌ರಿಂದ ಸತ್ಯಭಾಮೆ, ವಿ| ಸ್ಮತಿ ರಾವ್‌ ಅವರಿಂದ ರುಕ್ಮಿಣಿ, ವಿ| ಅನನ್ಯಾ ಸಂದೀಪ್‌ರಿಂದ ದೇವಕಿ, ಕ್ಷಮಾ ರಾಕೇಶ್‌ರಿಂದ ಯಶೋಧೆ, ಮೇದಿನಿ ಆಚಾರ್ಯರಿಂದ ಕಂಸ, ಸುಮನಾ ಕಾರ್ತಿಕ್‌ರಿಂದ ಮುಷ್ಟಿಕ, ಶಿಶುಪಾಲ, ವಿ| ಜಿತೇಶ್‌ ಬಂಗೇರರಿಂದ ಅರ್ಜುನ, ಅನ್ವಿತಾರಿಂದ ವಸುದೇವ ಪಾತ್ರ ನಿರ್ವಹಿಸಲ್ಪಟ್ಟು ಸುಮಾರು ಒಂದುವರೆ ಗಂಟೆಗಳ ಕಾಲ ನೃತ್ಯ ರೂಪಕವು ವಿಶೇಷವಾಗಿ ಮೂಡಿ ಬಂದಿದೆ.

ಎಸ್‌ಜಿ. ನಾಯ್ಕ ಸಿದ್ದಾಪುರ

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.